ಕಾಶೀಮಠಾಧೀಶರ ಚಾತುರ್ಮಾಸ್ಯ ವ್ರತ ತಿರುಮಲದಲ್ಲಿ ಆರಂಭ
ತಿರುಪತಿ, ಆಗಸ್ಟ್ 3: ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ತಿರುಮಲದ ಶ್ರೀ ಕಾಶೀಮಠದ ಶಾಖಾಮಠದಲ್ಲಿ ಪ್ರಾರಂಭವಾಯಿತು.
ಗೌಡ ಸಾರಸ್ವತ ಸಮಾಜದ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ತಿರುಪತಿ ತಿರುಮಲ ಬೆಟ್ಟದಲ್ಲಿರುವ ಕಾಶೀಮಠ ಸಂಸ್ಥಾನದ ಶಾಖಾ ಮಠದಲ್ಲಿ ಗುರುವಾರದಂದು (ಆ 2) ಮೃತಿಕಾ ಪೂಜನೆಯೊಂದಿಗೆ ಪ್ರಾರಂಭವಾಯಿತು.
ಪ್ರಾತಃ ಕಾಲ ಶ್ರೀ ಸಂಸ್ಥಾನದ ಶ್ರೀದೇವರುಗಳ ಬಿಂಬಗಳಿಗೆ ಪಂಚಾಮೃತ, ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕ , ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳವರ ದಿವ್ಯ ಹಸ್ತಗಳಿಂದ ನೆರವೇರಿದವು, ಬಳಿಕ ನೆರೆದ ಸಮಾಜ ಬಾಂಧವರಿಗೆ ತಪ್ತ ಮುದ್ರಾಧಾರಣೆ ನಡೆಯಿತು. ಸಾಯಂಕಾಲ ಮೃತಿಕಾ ಪೂಜನೆ ಬಳಿಕ ಸಭಾ ಕಾರ್ಯಕ್ರಮ ಜರಗಿತು.

ಚಾತುರ್ಮಾಸ್ಯ ವೃತದ ಪ್ರಯುಕ್ತ ಸಂಯಮೀಂದ್ರ ತೀರ್ಥರು ಜುಲೈ 18 ರಂದು ತಿರುಮಲೆ ತಲಪಿದ್ದರು. ಆ ಸಂದರ್ಭದಲ್ಲಿ ತಿರುಮಲ ತಿರುಪತಿ ದೇವಳದ ವೈದಿಕರಿಂದ ಪೂರ್ಣ ಕುಂಭ ಸ್ವಾಗತ ನೀಡಲಾಗಿತ್ತು.
ಸೆಪ್ಟಂಬರ್ 24ರಂದು ಮೃತಿಕಾ ವಿಸರ್ಜನೆ, ಸೀಮೋಲ್ಲಂಘನೆ ಮೂಲಕ ಕಾಶಿಶ್ರೀಗಳ ಚಾತುರ್ಮಾಸ ಕೊನೆಗೊಳ್ಲಲಿದೆ. ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಪ್ರವಚನ, ಪಾರಾಯಣಗಳು ನಡೆಯಲಿವೆ. ಆಗಸ್ಟ್ ಎರಡರಂದು ಸಂಜೆ ಆರುಗಂಟೆಗೆ ಮುದ್ರಾಧಾರಣೆ ನಡೆಯಲಿದೆ.
ಆಗಸ್ಟ್ 15ರಂದು ನಾಗಪಂಚಮಿ, ಮಾಧವೇಂದ್ರ ಸ್ವಾಮಿ ಪುಣ್ಯತಿಥಿ, ಆಗಸ್ಟ್ 25ರಂದು ಖುಗೋಪಕರ್ಮ, ಸೆಪ್ಟಂಬರ್ 2ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಚಾತುರ್ಮಾಸ ಸಮಿತಿ, ತಿರುಮಲದ ಕಾಶಿಮಠದ ಶಾಖಾಮಠದಲ್ಲಿ ಆಯೋಜಿಸಿದೆ.
ಇದಲ್ಲದೇ ಸೆಪ್ಟಂಬರ್ 13-19ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ 23ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ವಿಶೇಷ ಪಾರಾಯಣಕ್ಕಾಗಿ ಸಮಾಜದ ವಿದ್ವತ್ ವೈದಿಕರು ಕೆಲದಿನಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಚಾತುರ್ಮಾಸ ಸಮಿತಿ ವಿನಂತಿಸಿಕೊಂಡಿದೆ. (ಚಿತ್ರ : ಮಂಜು ನೀರೇಶ್ವಾಲ್ಯ)
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications