ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ; ಶೀಘ್ರವೇ ಮಾಡಲು ಸಿದ್ಧರಾಗಿ
ಬೆಂಗಳೂರು, ಅಕ್ಟೋಬರ್ 21; ಕರ್ನಾಟಕದ ಮುಜರಾಯಿ ಇಲಾಖೆ ವತಿಯಿಂದ ' ಕರ್ನಾಟಕ - ಭಾರತ್ ಗೌರವ್ ಕಾಶಿ ದರ್ಶನ' ಯೋಜನೆಯನ್ನು ಆರಂಭಿಸಲಾಗುತ್ತಿದೆ. ಈ ತಿಂಗಳ ಅಂತ್ಯಕ್ಕೆ ಇದಕ್ಕಾಗಿಯೇ ವಿಶೇಷ ರೈಲು ಸಿದ್ಧವಾಗಲಿದ್ದು, ಬುಕ್ಕಿಂಗ್ ಸಹ ಆರಂಭವಾಗಲಿದೆ.
ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ 'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಯೋಜನೆಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ರೈಲ್ವೆ ಇಲಾಖೆಯ ಅಧಿಕಾರಿಗಳಾದ ಅನೂಪ್ ದಯಾನಂದ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ಬಳಿಕ ಸಚಿವರು ಐ. ಆರ್. ಸಿ. ಟಿ. ಸಿ, ಕೆ. ಎಸ್. ಟಿ. ಡಿ. ಸಿ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಸಚಿವರು ಕಾಶಿಯಾತ್ರೆಯ ವಿಶೇಷ ರೈಲನ್ನು ಅಕ್ಟೋಬರ್ 30ರೊಳಗೆ ಅಂತಿಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮುಂದಿನ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ದೊರೆಯುವ ನಿರೀಕ್ಷೆ ಇದೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ನಲ್ಲಿ ಕಾಶಿಯ ಭವ್ಯತೆಯನ್ನು ಹೆಚ್ಚಿನ ಜನರು ನೋಡಲು ಅನುಕೂಲವಾಗುವಂತೆ ಕಾಶಿಗೆ ರಿಯಾಯಿತಿ ದರದ ಪ್ಯಾಕೇಜ್ ಘೋಷಣೆ ಮಾಡಿದ್ದರು. 'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಎಂಬ ಯೋಜನೆಯನ್ನು ಮುಜರಾಯಿ ಇಲಾಖೆಯ ಮೂಲಕ ಜಾರಿಗೊಳಿಸಲಾಗುತ್ತಿದೆ.

ನವೆಂಬರ್ ಮೊದಲ ವಾರದಲ್ಲಿ ರೈಲು ಸಂಚಾರ
ವಾರಣಾಸಿ ಸಂಸದರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾಶಿಯನ್ನು ಅಭಿವೃದ್ಧಿಗೊಳಿಸಿದ್ದಾರೆ. ನರೇಂದ್ರ ಮೋದಿ ಕನಸಿನ 'ಭವ್ಯ ಕಾಶಿ-ದಿವ್ಯ ಕಾಶಿ' ಭವ್ಯತೆಯನ್ನು ಕರ್ನಾಟಕ ರಾಜ್ಯದ ಜನರು ನೋಡಿ ಆನಂದಿಸಬೇಕು ಎನ್ನುವ ಉದ್ದೇಶದಿಂದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಬಜೆಟ್ನಲ್ಲಿ ರಿಯಾಯಿತಿ ದರದ ಪ್ರವಾಸವನ್ನು ಘೋಷಣೆ ಮಾಡಿದ್ದರು.
ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ 'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಎಂದು ಹೆಸರು ಇಡಲಾಗಿದೆ. ನವೆಂಬರ್ ಮೊದಲ ವಾರದಲ್ಲಿ ಈ ಯೋಜನೆಯ ಮೊದಲ ರೈಲು ಉದ್ಘಾಟನೆಯಾಗಲಿದೆ.

ವಿಶೇಷ ರೈಲಿನ ವಿನ್ಯಾಸ
'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಎಂಬ ಯೋಜನೆಗಾಗಿಯೇ ವಿಶೇಷ ರೈಲನ್ನು ಸಿದ್ಧಗೊಳಿಸಲಾಗುತ್ತಿದೆ. ಈ ಯೋಜನೆ ಜಾರಿಗೊಳಿಸಲು ಇದ್ದ ತಾಂತ್ರಿಕ ಅಡೆತಡೆಗಳನ್ನು ಬಗೆಹರಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿತ್ತು. ಈಗ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿವೆ. ಅಕ್ಟೋಬರ್ 30ರೊಳಗೆ ರೈಲು ಬೋಗಿ ನಿರ್ಮಾಣದ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ಬೋಗಿ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಪ್ರತಿದಿನದ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಶೀಘ್ರದಲ್ಲೇ ಬುಕ್ಕಿಂಗ್ ವ್ಯವಸ್ಥೆ
'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಯಾತ್ರೆಗೆ ಶೀಘ್ರದಲ್ಲೇ ಬುಕ್ಕಿಂಗ್ ಆರಂಭವಾಗಲಿದೆ. ಸಚಿವೆ ಶಶಿಕಲಾ ಜೊಲ್ಲೆ ಯಾತ್ರೆಯ ಬುಕ್ಕಿಂಗ್ಗೆ ಅವಕಾಶ ಮಾಡಿಕೊಡಲು ಶೀಘ್ರವೇ ವೆಬ್ಸೈಟ್ ಮತ್ತು ಇತರ ವಿಚಾರಗಳನ್ನು ಪ್ರಕಟಿಸುವಂತೆ ಸೂಚನೆ ನೀಡಿದರು. ಐ. ಆರ್. ಸಿ. ಟಿ. ಸಿ, ಕೆ. ಎಸ್. ಟಿ. ಡಿ. ಸಿ ಇಲಾಖೆಗಳು ವೆಬ್ಸೈಟ್ ಬಿಡುಗಡೆ ಮಾಡಲಿವೆ. ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಈ ಯೋಜನೆಗಾಗಿಯೇ ವಿಶೇಷ ರೈಲು ಬೋಗಿ ತಯಾರು ಮಾಡಲಾಗುತ್ತಿದೆ.
ಬೆಂಗಳೂರು-ವಾರಣಾಸಿ-ಅಯೋಧ್ಯೆ-ಪ್ರಯಾಗ್ರಾಜ್-ಬೆಂಗಳೂರು ಮಾರ್ಗದಲ್ಲಿ 'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ರೈಲು 7 ದಿನದಲ್ಲಿ 4,161 ಕಿ. ಮೀ. ಸಂಚಾರ ನಡೆಸಲಿದೆ. 14 ಬೋಗಿಗಳ ಈ ರೈಲಿನಲ್ಲಿ 11 ಬೋಗಿಗಳು ಪ್ರಯಾಣಿಕರಿಗೆ ಮೀಸಲಾಗಿವೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತನೆ ಮಾಡಿ, ಭಜನೆಗೂ ಅವಕಾಶ ನೀಡಲಾಗಿದೆ.

15 ಸಾವಿರ ವೆಚ್ಚದ ನಿರೀಕ್ಷೆ
'ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ' ಪ್ಯಾಕೇಜ್ ಟೂರ್ಗೆ ಕರ್ನಾಟಕ ಸರ್ಕಾರ 5 ಸಾವಿರ ರೂ. ಸಹಾಯಧನ ನೀಡಲಿದೆ. 7 ದಿನಗಳ ಪ್ರವಾಸ ಪ್ಯಾಕೇಜ್ನಲ್ಲಿ ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಸೇರಿದಂತೆ ಸುಮಾರು 15 ಸಾವಿರ ವೆಚ್ಚವಾಗುವ ನಿರೀಕ್ಷೆ ಇದೆ.
ಜೀವನದಲ್ಲಿ ಒಮ್ಮೆಯಾದರೂ ಕಾಶಿಯಾತ್ರೆ ಮಾಡಬೇಕು ಎಂಬುದು ಬಹುಪಾಲು ಹಿಂದೂಗಳ ಆಸೆಯಾಗಿರುತ್ತದೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂಬುದು ಮುಜರಾಯಿ ಇಲಾಖೆ ಆಶಯವಾಗಿತ್ತು. ಅದಕ್ಕೆ ತಕ್ಕಂತೆ ಈ ಯೋಜನೆ ಜಾರಿಗೆ ಬರಲಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications