ಕಸ್ತೂರಿ ರಂಗನ್ ವರದಿಗೆ ವಿರೋಧ, ಬುಧವಾರ ಹೆಬ್ರಿ ಬಂದ್

ಉಡುಪಿ, ಡಿ.16 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಬುಧವಾರ ಹೆಬ್ರಿ ಬಂದ್‌ಗೆ ಕರೆ ನೀಡಲಾಗಿದೆ. ಕಸ್ತೂರಿರಂಗನ್‌ ವರದಿ ವಿರೋಧಿ ಹೋರಾಟ ಸಮಿತಿ ಹೆಬ್ರಿ ವಲಯದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು, ಬಸ್ ಸಂಚಾರವೂ ಸ್ಥಗಿತಗೊಳ್ಳಲಿದೆ.

ಹೆಬ್ರಿಯ ಅನಂತ ಪದ್ಮನಾಭ ದೇವಾಲಯದ ಸನ್ನಿಧಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿ ಅಧ್ಯಕ್ಷ ನವೀನ್ ಅಡ್ಯಂತಾಯ ಬಂದ್‌ ಬಗ್ಗೆ ಮಾಹಿತಿ ನೀಡಿದರು. ಡಿ. 17ರ ಬೆಳಗ್ಗೆ 9ರಿಂದ ಸಂಜೆ 5ರ ತನಕ ಹೆಬ್ರಿ ಬಂದ್‌ ಹಾಗೂ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದರು.

Hebri

ಹೆಬ್ರಿ, ಚಾರ, ಬೇಳಂಜೆ, ಕುಚ್ಚಾರು, ಕಬ್ಬಿನಾಲೆ ಸುತ್ತಮುತ್ತಲಿನ ಸಂತ್ರಸ್ತರು ಸೇರಿದಂತೆ ಸುಮಾರು 35 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಹೆಬ್ರಿಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. [ಕಸ್ತೂರಿ ರಂಗನ್ ವರದಿ : ಕೊಡುಗು ಬಂದ್]

ಬುಧವಾರ ಬೆಳಗ್ಗೆ 6ರಿಂದ ಸಂಜೆ 6ರ ತನಕ ಹೆಬ್ರಿ ಮಾರ್ಗದಲ್ಲಿ ಯಾವುದೇ ಬಸ್ಸಿನ ಸಂಚಾರವಿರುವುದಿಲ್ಲ ಎಂದು ಹೇಳಿದ ಅವರು, ರಾಜಕೀಯ ಬಿಟ್ಟು ಪ್ರತಿಯೊಬ್ಬರು ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದಂತೆ ಶಾಂತಿಯುತವಾಗಿ ಬಂದ್‌ಗೆ ಬೆಂಬಲ ನೀಡಿ ಎಂದು ಜನರಿಗೆ ಮನವಿ ಮಾಡಿದರು.

ಏನಿದು ವರದಿ : ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ಮಾಧವ ಗಾಡ್ಗೀಳ್ ವರದಿ ಬಂದ ನಂತರ ಕೇಂದ್ರ ಸರ್ಕಾರ 2012 ಆಗಸ್ಟ್ 17ರಂದು ಬಾಹ್ಯಾಕಾಶ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅಧ್ಯಕ್ಷತೆಯಲ್ಲಿ ಉನ್ನತ ಹಂತದ ಸಮಿತಿ ರಚಿಸಿತ್ತು. ಆದರೆ, ಈ ವರದಿಯನ್ನು ಜಾರಿಗೊಳಿಸಬಾರದು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಪಶ್ಚಿಮಘಟ್ಟದಲ್ಲಿ ಗಣಿಗಾರಿಕೆ ನಿಷೇಧಿಸು­ವುದು, ಪರಿಸರದ ಮೇಲೆ ಹಾನಿ­ಯುಂಟು ಮಾಡುವ ಕೈಗಾರಿಕೆಗಳನ್ನು ನಿಷೇಧಿಸುವುದು, ನಗರೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲೆ ನಿಯಂತ್ರಣ, ಕೃಷಿಯಲ್ಲಿ ರಾಸಾಯನಿಕ ಕೀಟನಾಶಕ ಬಳಸದಂತೆ ನಿಷೇಧ ಮುಂತಾದ ಪ್ರಸ್ತಾವನೆಗಳು ವರದಿಯಲ್ಲಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+