ಕೆಪಿಎಸ್ಸಿ ನೇಮಕಾತಿ; ಕೆಎಟಿ ಮಹತ್ವದ ಆದೇಶ
ಬೆಂಗಳೂರು, ಸೆಪ್ಟೆಂಬರ್ 09: ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ 1998 ಮತ್ತು 1999ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕದ ಬಗ್ಗೆ ಮಹತ್ವದ ಆದೇಶ ಹೊರಡಿಸಿದೆ. ಕೆಪಿಎಸ್ಸಿ 2019ರಲ್ಲಿ ಹೊರಡಿಸಿದ್ದ ಎರಡೂ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ.
Recommended Video
ಕರ್ನಾಟಕ ಲೋಕಸೇವಾ ಆಯೋಗ 2019ರ ಜ.25 ಮತ್ತು ಆ.22ರಂದು ಹೊರಡಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ. 2002ರಲ್ಲಿ ಅಂದಿನ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್ ಅವರಿದ್ದ ಪೀಠ ನೀಡಿದ ಆದೇಶದ ಅನ್ವಯ ಹೊಸ ಆಯ್ಕೆ ಪಟ್ಟಿ ಪ್ರಕಟಿಸಬೇಕು ಎಂದು ಸೂಚನೆ ನೀಡಿದೆ.
ಎಸ್. ಎಸ್. ಮಧುಕೇಶ್ವರ್ ಮತ್ತಿತ್ತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೆಎಟಿ ಅಧ್ಯಕ್ಷ ಡಾ. ಕೆ. ಭಕ್ತವತ್ಸಲ ಹಾಗೂ ಸದಸ್ಯ ಎಸ್. ಕೆ. ಪಟ್ನಾಯಕ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಮಂಗಳವಾರ ಈ ಅರ್ಜಿಯ ತೀರ್ಪು ಪ್ರಕಟಿಸಲಾಗಿದೆ.

2016ರಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ಒಂದನೇ ಅಂಶವನ್ನು ಸರ್ಕಾರ ಜಾರಿಗೊಳಿಸಿಲ್ಲ. ಅದರಿಂದ ಹೊರ ಬರಲು ಹೊಸ ಕಾಯ್ದೆ ಜಾರಿಗೊಳಿಸಿದೆ. 2 ಮತ್ತು 3ನೇ ಮೌಲ್ಯ ಮಾಪನದಲ್ಲಿ 20 ಅಂಕಗಳ ವ್ಯತ್ಯಾಸ ಬಂದರೆ ಅಂತಹ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಮತ್ತೆ ಮೌಲ್ಯ ಮಾಪನ ಮಾಡಬೇಕು ಎಂಬ ಆದೇಶ ಪಾಲಿಸಿಲ್ಲ ಎಂದು ವಾದಿಸಲಾಗಿತ್ತು.
ಹೈಕೋರ್ಟ್ ಆದೇಶದಂತೆ 91 ಉತ್ತರ ಪ್ರತ್ರಿಕೆಗಳ ಮರು ಮೌಲ್ಯಮಾಪನದ ಅಂಕಗಳಗಳನ್ನು ಪರಿಗಣನೆ ಮಾಡಬೇಕಿತ್ತು. ಆದರೆ, ಅಭ್ಯರ್ಥಿಗಳ ಅಂಕಪಟ್ಟಿ ಮಾತ್ರ ಪರಿಗಣಿಸಲಾಗಿದೆ ಎಂದು ಅರ್ಜಿದಾರರು ದೂರಿದ್ದರು. 2016ರಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications