Sakleshpur RFO : ಸಕಲೇಶಪುರ ಆರ್ಎಫ್ಒ ಶಿಲ್ಪಾ ಅಮಾನತು ರದ್ದು
ಬೆಂಗಳೂರು, ಜನವರಿ 20; ಹಾಸನ ಜಿಲ್ಲೆಯ ಸಕಲೇಶಪುರದ ಆರ್ಎಫ್ಒ ಎಸ್. ಎಲ್. ಶಿಲ್ಪಾ ಅಮಾನತು ಆದೇಶ ರದ್ದುಗೊಳಿಸಿ ಕೆಎಟಿ ಆದೇಶ ಹೊರಡಿಸಿದೆ. ಜನವರಿ 10ರಂದು ಶಿಲ್ಪಾ ಅಮಾನತುಗೊಳಿಸಲಾಗಿತ್ತು.
ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದೆ. ಎಸ್. ಎಲ್. ಶಿಲ್ಪಾ ತಮ್ಮ ಅಮಾನತು ಆದೇಶವನ್ನು ಕೆಎಟಿಯಲ್ಲಿ ಪ್ರಶ್ನೆ ಮಾಡಿದ್ದರು.
ಅಧಿಕಾರಿಯ ಅರ್ಜಿ ಪುರಸ್ಕಾರ ಮಾಡಿರುವ ಕೆಎಟಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಹೊರಡಿಸಿದ್ದ ಎಸ್. ಎಲ್. ಶಿಲ್ಪಾ ಅಮಾನತು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರದ ವಲಯ ಅರಣ್ಯಾಧಿಕಾರಿ ಎಸ್. ಎಲ್. ಶಿಲ್ಪಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.
ಅಮಾನತು ಏಕೆ?; ಅರಣ್ಯ ಅಪರಾಧಗಳ ತನಿಖೆಯಲ್ಲಿ ವಿಫಲ, ಸಿಬ್ಬಂದಿಗಳ ನಿಯಂತ್ರಣದಲ್ಲಿ ವಿಫಲ, ಆರ್ಥಿಕ ಪ್ರಗತಿ ಸಾಧಿಸುವಲ್ಲಿ ವಿಫಲ, ಆನೆ ಮತ್ತು ಮಾನವ ಸಂಘರ್ಷ ನಿಯಂತ್ರಿಸುವಲ್ಲಿ ವಿಫಲ ಸೇರಿದಂತೆ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಎಸ್. ಎಲ್. ಶಿಲ್ಪಾ ಅಮಾನತು ಮಾಡಲಾಗಿತ್ತು.
ಶಿಲ್ಪಾ ಅವರ ಕಾರ್ಯ ವೈಖರಿ ಕುರಿತು ಮೇಲಾಧಿಕಾರಿಗಳು ಸೂಚನೆ ನೀಡಿದರೂ ಯಾವುದೇ ಪತ್ರಕ್ಕೂ ಅವರು ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪವಿತ್ತು. ಜವಾಬ್ದಾರಿ ನಿರ್ವಹಣೆಯಲ್ಲಿಯೂ ಅವರು ವಿಫಲರಾಗಿದ್ದಾರೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿತ್ತು.
ಜನವರಿ 10ರಂದು ಹೊರಡಿಸಿದ ಆದೇಶದಲ್ಲಿ ಕೇಂದ್ರ ಸ್ಥಾನದಲ್ಲಿದ್ದರೆ ಲೋಪಗಳಿಗೆ ಸಂಬಂಧಿಸಿದ ಪೂರಕ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇಟ್ಟು ಎಸ್. ಎಲ್. ಶಿಲ್ಪಾರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು.
ಎಸ್. ಎಲ್. ಶಿಲ್ಪಾ ಅಮಾನತು ಆದೇಶ ರದ್ದುಗೊಳಿಸಬೇಕು ಎಂದು ಎಸ್ಸಿ, ಎಸ್ಟಿ ಒಕ್ಕೂಟ ಪ್ರತಿಭಟನೆಯನ್ನು ಸಹ ನಡೆಸಿತ್ತು. ಕಾಡುಪ್ರಾಣಿಗಳ ಬೇಟೆ ನಿಯಂತ್ರಣ, ರೆಸಾರ್ಟ್ ಚಟುವಟಿಕೆಗಳಿಗೆ ಅವರು ಕಡಿವಾಣ ಹಾಕಿದ್ದಾರೆ. ಆದ್ದರಿಂದ ಪ್ರಭಾವಿಗಳು ಅಮಾನತು ಮಾಡಿಸಿದ್ದಾರೆ ಎಂದು ಆರೋಪಿಸಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications