ಶಿವಾಜಿನಗರದಿಂದ ಕಟ್ಟಾ ಸುಬ್ರಮಣ್ಯ ನಾಯ್ಡು ಸ್ಪರ್ಧೆ?
ಬೆಂಗಳೂರು, ಜನವರಿ 10 : ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು 2018ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಶಿವಾಜಿನಗರ ಕ್ಷೇತ್ರದಿಂದ ಅವರು ಕಣಕ್ಕಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಭಾರೀ ಚರ್ಚೆ ನಡೆಯುತ್ತಿದೆ.
ಶಿವಾಜಿನಗರ ಕ್ಷೇತ್ರದ ಶಾಸಕರು ಸಚಿವ ರೋಷನ್ ಬೇಗ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾದ ಅವರು, ನಗರಾಭಿವೃದ್ಧಿ, ಮಾಹಿತಿ ಮತ್ತು ಹಜ್ ಸಚಿವರು. ಈ ಬಾರಿ ಅವರು ಸ್ಪರ್ಧಿಸಲಿದ್ದಾರೆಯೇ? ಅಥವ ಪುತ್ರನನ್ನು ಕಣಕ್ಕಿಳಿಸಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ.
2008ರಲ್ಲಿ ಹೆಬ್ಬಾಳದಿಂದ ಸ್ಪರ್ಧಿಸಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ 2013ರಲ್ಲಿ ಟಿಕೆಟ್ ಕೈ ತಪ್ಪಿತ್ತು. ಆದರೆ, ತಮ್ಮ ಆಪ್ತ ಆರ್.ಜಗದೀಶ್ ಕುಮಾರ್ ಅವರಿಗೆ ಟಿಕೆಟ್ ಕೊಡಿಸಿ, ಗೆಲ್ಲಿಸಿದ್ದರು.
ಹೃದಯಾಘಾತದಿಂದ ಜಗದೀಶ್ ಅವರು 2016ರಲ್ಲಿ ಮೃತಪಟ್ಟರು. ನಂತರ ನಡೆದ ಉಪಚುನಾವಣೆಯಲ್ಲಿ ವೈ.ಎ.ನಾರಾಯಣ ಸ್ವಾಮಿ ಜಯಗಳಿಸಿದ್ದಾರೆ. ಈ ಬಾರಿಯೂ ಅವರಿಗೆ ಟಿಕೆಟ್ ಸಿಗುವುದು ಖಚಿತವಾಗಿದೆ. ಆದ್ದರಿಂದ, ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಹೆಬ್ಬಾಳ ಬಿಟ್ಟು ಶಿವಾಜಿನಗರ ಕ್ಷೇತ್ರದತ್ತ ಗಮನಹರಿಸಿದ್ದಾರೆ...

ಶಿವಾಜಿನಗರದಲ್ಲಿ ಸ್ಪರ್ಧಿಸಿದ್ದರು
ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಮೊದಲು ಶಿವಾಜಿನಗರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಆದರೆ, ಕ್ಷೇತ್ರ ಪುನರ್ ವಿಂಗಡನೆ ಬಳಿಕ ಹೆಬ್ಬಾಳಕ್ಕೆ ವಲಸೆ ಬಂದಿದ್ದರು.

ಕಳೆದ ಬಾರಿ ಟಿಕೆಟ್ ಕೈ ತಪ್ಪಿತ್ತು
ಕೆಐಎಡಿಬಿ ಹಗರಣದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಜೈಲುವಾಸ ಅನುಭವಿಸಿದ್ದರು. ಆದ್ದರಿಂದ, 2013ರ ಚುನಾವಣೆಯಲ್ಲಿ ಅವರಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಕೈ ತಪ್ಪಿತ್ತು. ತಮ್ಮ ಬೆಂಬಲಿಗ ಆರ್.ಜಗದೀಶ್ ಅವರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದ್ದರು.

ಮತ್ತೆ ಶಿವಾಜಿನಗರದತ್ತ ಚಿತ್ತ
2018ರ ಚುನಾವಣೆಗೆ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಶಿವಾಜಿನಗರದಿಂದ ಸ್ಪರ್ಧಿಸಲಿದ್ದಾರೆ. ಈಗಾಗಲೇ ಅವರು ಸಿದ್ಧತೆ ಆರಂಭಿಸಿದ್ದಾರೆ ಎಂಬುದು ಸದ್ಯದ ಸುದ್ದಿ.

ರೋಷನ್ ಬೇಗ್ ಸ್ಪರ್ಧೆ ಇಲ್ಲ?
ಶಿವಾಜಿನಗರ ಕ್ಷೇತ್ರದ ಶಾಸಕರು ಸಚಿವ ರೋಷನ್ ಬೇಗ್. ಆದರೆ, ಈ ಬಾರಿ ಅವರು ಸ್ಪರ್ಧೆ ಮಾಡುವುದಿಲ್ಲ. ಪುತ್ರ ರುಮನ್ ಬೇಗ್ ಅವರನ್ನು ಕಣಕ್ಕಿಳಿಸಲಿದ್ದಾರೆ ಎಂಬುದು ಸದ್ಯದ ಸುದ್ದಿ.

2013ರ ಚುನಾವಣಾ ಫಲಿತಾಂಶ
ಆರ್.ರೋಷನ್ ಬೇಗ್ 49,649 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ನಿರ್ಮಲ್ ಸುರಾನಾ 28,794 ಮತಗಳನ್ನು ಪಡೆದಿದ್ದರು. ಜೆಡಿಎಸ್ನ ಅಬ್ಬಾಸ್ ಅಲಿ ಬೋರಾ 5, 983 ಮತ ಪಡೆದಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications