ಆಸ್ತಿ ನೋಂದಣಿಗೆ ಇನ್ನು ಮುಂದೆ ಕಷ್ಟ ಪಡಬೇಕಿಲ್ಲ: ಕಾವೇರಿ 2.0 ಸಾಫ್ಟ್ವೇರ್ ಪರಿಚಯಿಸಿದ ಕರ್ನಾಟಕ ಸರ್ಕಾರ- ವಿವರ ಪಡೆಯಿರಿ
ಬೆಂಗಳೂರು, ಜೂನ್ 21: ರಾಜ್ಯ ಸರ್ಕಾರವು 'ಕಾವೇರಿ-2.0' ವೆಬ್ ಪೋರ್ಟಲ್ ಅನ್ನು ಪರಿಚಯಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದೆ. ಇದು ಅಸ್ತಿತ್ವದಲ್ಲಿರುವ ಪೋರ್ಟಲ್ನ ಸುಧಾರಿತ ಆವೃತ್ತಿಯಾಗಿದೆ. ಆಸ್ತಿಯನ್ನು ನೋಂದಾಯಿಸಲು ತೆಗೆದುಕೊಳ್ಳುವ ಸಮಯವನ್ನು ಸುಧಾರಿತ ಪೋರ್ಟಲ್ ಕಡಿಮೆ ಮಾಡುತ್ತದೆ.
ರಾಜ್ಯದ 251 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾವೇರಿ-2 ಸಾಫ್ಟ್ವೇರ್ ಕಾರ್ಯಾರಂಭ ಮಾಡಿದ್ದು, ಉಳಿದವುಗಳನ್ನು ಈ ವಾರದ ಅಂತ್ಯದೊಳಗೆ ಪೂರೈಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ಹೇಳಿದ್ದಾರೆ.

ಆಸ್ತಿ ನೋಂದಣಿ ಇನ್ನು ಮುಂದೆ ಸರಳ
ಈ ಹಿಂದೆ ಸಬ್ ರಿಜಿಸ್ಟ್ರಾರ್ ಕಛೇರಿಗಳು ಸಂಘಟಿತವಾಗಿರಲಿಲ್ಲ. ಈ ಕಾರಣ, ಆಸ್ತಿ ನೋಂದಣಿ ಪ್ರಕ್ರಿಯೆ ತಡವಾಗುತ್ತಿತ್ತು. ನವೀಕರಿಸಿದ ಪೋರ್ಟಲ್ನೊಂದಿಗೆ ನೋಂದಣಿ ಪ್ರಕ್ರಿಯೆಯು 15 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ಸಚಿವರು ವಿವರಿಸಿದರು.
ಕಾವೇರಿ-2 ಸಾಫ್ಟ್ವೇರ್ನಲ್ಲಿ ಸರ್ವರ್ ಸಮಸ್ಯೆಗಳು ಮತ್ತು ತಾಂತ್ರಿಕ ದೋಷಗಳಂತಹ ಹಿಂದಿನ ದೂರುಗಳನ್ನು ಪರಿಹರಿಸಲಾಗಿದೆ ಎಂದು ಅವರು ಹೇಳಿದರು.
ಹಿಂದಿನ ವೆಬ್ಸೈಟ್ನಲ್ಲಿ, ಆಸ್ತಿ ದಾಖಲೆಗಳನ್ನು ಸಬ್-ರಿಜಿಸ್ಟ್ರಾರ್ ಕಚೇರಿಗೆ ಸಲ್ಲಿಸಬೇಕಿತ್ತು ಮತ್ತು ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಕಾಯಬೇಕಾಗಿತ್ತು. ಅದರ ನಂತರ, ಆಸ್ತಿಯನ್ನು ಇನ್ನೊಬ್ಬ ವ್ಯಕ್ತಿಗೆ ವರ್ಗಾಯಿಸುವ ಮೊದಲು ನೋಂದಣಿ ಶುಲ್ಕವನ್ನು ಸಂಗ್ರಹಿಸಲಾಗುತ್ತಿತ್ತು.
ಹೊಸ ಸಾಫ್ಟ್ವೇರ್ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಬಹುದು ಮತ್ತು ಆನ್ಲೈನ್ನಲ್ಲಿ ಪಾವತಿಯನ್ನು ಸಹ ಮಾಡಬಹುದು ಎಂದು ಕೃಷ್ಣ ಬೈರೇಗೌಡ ಹೇಳಿದರು. ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಲುವಾಗಿ ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಲು ಖರೀದಿದಾರ ಮತ್ತು ಮಾರಾಟಗಾರರು ಆನ್ಲೈನ್ನಲ್ಲಿ ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬಹುದು.
'ಸಾಫ್ಟ್ವೇರ್ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ನಂತರ, ಪ್ರತಿಯೊಬ್ಬ ಸಬ್-ರಿಜಿಸ್ಟ್ರಾರ್ ಆನ್ಲೈನ್ನಲ್ಲಿ ಸಹಿ ಮಾಡಬೇಕಾಗುತ್ತದೆ. ಕಡಿಮೆ ಮೌಲ್ಯಮಾಪನ ಮತ್ತು ದಾಖಲೆ ಪರಿಶೀಲನೆ ಪ್ರಕ್ರಿಯೆಯಂತಹ ಅಂಶಗಳನ್ನು ಟ್ರ್ಯಾಕ್ ಮಾಡಬಹುದು' ಎಂದು ಸಚಿವರು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರವು ಏಪ್ರಿಲ್ನಲ್ಲಿ ಕಾವೇರಿ-2.0 ಪೋರ್ಟಲ್ ಅನ್ನು ಹೊರತರಲು ಯೋಜಿಸಿತ್ತು. ಆದರೆ ಸಾಫ್ಟ್ವೇರ್ನಲ್ಲಿ ಹಲವಾರು ದೋಷಗಳಿದ್ದವು. ಅವುಗಳನ್ನು ಈಗ ಪರಿಹರಿಸಲಾಗಿದೆ ಎಂದು ತಿಳಿದುಬಂದಿದೆ.
ಆದಾಯ ಉತ್ಪಾದನೆ ಕುರಿತು ಮಾತನಾಡಿದ ಸಚಿವರು, ಕಳೆದ ವರ್ಷಕ್ಕೆ ಹೋಲಿಸಿದರೆ ಸರ್ಕಾರ ತನ್ನ ಆದಾಯವನ್ನು ಹೆಚ್ಚಿಸಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸರ್ಕಾರ 1,224 ಕೋಟಿ ಸಂಗ್ರಹಿಸಿದ್ದು, ಈ ವರ್ಷ 1,352 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದರು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications