KRS & Kabini Dam: ತುಂಬುತ್ತಿವೆ ಕಾವೇರಿ ಕೊಳ್ಳದ ಜಲಾಶಯಗಳು: ಇನ್ನೊಂದು ದಿನದಲ್ಲಿ ಕೆಆರ್ಎಸ್ ಭರ್ತಿ
ರಾಜ್ಯದಲ್ಲಿ ಪುನರ್ವಸು ಮಳೆ ಅಬ್ಬರ ಜೋರಾಗಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ರಾಜ್ಯದ ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ಹಲವು ಜಲಾಶಯಗಳು ಈಗಾಗಲೇ ಭರ್ತಿಯಾಗುವ ಹಂತ ತಲುಪಿವೆ.
ಕಾವೇರಿ ಕೊಳ್ಳ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಆರಂಭದಲ್ಲೇ ಕರ್ನಾಟಕ ತಮಿಳುನಾಡು ನಡುವಿನ ಜಲವಿವಾದ ಕೊನೆಯಾಗಿದೆ. ಹಾರಂಗಿ ಮತ್ತು ನುಗು ಜಲಾಶಯ ಭರ್ತಿಯಾಗಿದ್ದು, ಕೆಆರ್ ಎಸ್ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ.

ಹೇಮಾವತಿ ಮತ್ತು ಹಾರಂಗಿ ಜಲಾಶಯದಿಂದ ಕೂಡ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು ಎಲ್ಲಾ ನೀರು ಕೆಆರ್ಎಸ್ ಒಡಲು ಸೇರಲಿದೆ. ಕೆಆರ್ಎಸ್ ಭರ್ತಿಯಾಗಲು ಕ್ಷಣಗಣನೆ ಶುರುವಾಗುತ್ತಿದ್ದಂತೆ ಅಧಿಕಾರಿಗಳು ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಈಗಾಗಲೇ ತಗ್ಗು ಪ್ರದೇಶಗಳಲ್ಲಿ, ಕಾವೇರಿ ನದಿ ದಂಡೆಗಳಲ್ಲಿರುವ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಯಾವುದೇ ಕ್ಷಣಗಳಲ್ಲಾದರೂ ಕೆಆರ್ಎಸ್ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಯಲಿದೆ.
ಹೇಮಾವತಿ, ಕಬಿನಿ ಭರ್ತಿ
ಈಗಾಗಲೇ ಹೇಮಾವತಿ ಜಲಾಶಯ ಕೂಡ ಬಹುತೇಕ ಭರ್ತಿಯಾಗಿದೆ. 2922 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಈಗ 2919.03 ಅಡಿ ನೀರು ಭರ್ತಿಯಾಗಿದೆ. 37.10 ಟಿಎಂಸಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು ಈಗ 34.270 ಟಿಎಂಸಿ ನೀರು ಸಂಗ್ರಹವಾಗಿದೆ. 29,800 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 22,750 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದು, 1200 ಕ್ಯೂಸೆಕ್ಸ್ ನೀರು ನಾಲೆಗಳಿಗೆ ಬಿಡಲಾಗಿದೆ. ಕಬಿನಿ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, 40000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ.
ಕೆಆರ್ ಎಸ್ ಭರ್ತಿಗೆ ಕ್ಷಣಗಣನೆ
ಕೃಷ್ಣರಾಜ ಸಾಗರ ಜಲಾಶಯದಲ್ಲಿ ಕೂಡ ನೀರಿನ ಮಟ್ಟ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಿದೆ. ಸದ್ಯ ಜಲಾಶಯಕ್ಕೆ 60,224 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, 121.40 ಅಡಿ ನೀರು ಸಂಗ್ರಹವಾಗಿದೆ. 124.80 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದೆ. ಜಲಾಶಯದಿಂದ 17,795 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.
ಶನಿವಾರ ರಾತ್ರಿಯೇ ಜಲಾಶಯ ಬಹುತೇಕ ಭರ್ತಿಯಾಗಲಿದ್ದು, ಭಾನುವಾರದಿಂದ ಮತ್ತಷ್ಟು ನೀರನ್ನು ಜಲಾಶಯದಿಂದ ಹೊರಗೆ ಬಿಡುವ ಸಾಧ್ಯತೆ ಇದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications