ಅ.28 ರಂದು KCET 2022 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಪರಿಶೀಲನೆ ಹೇಗೆ?
ಬೆಂಗಳೂರು, ಅಕ್ಟೋಬರ್ 27: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಮೊದಲ ಸುತ್ತಿನ ಸೀಟು ಹಂಚಿಕೆಯ ಮಾಹಿತಿಯನ್ನು ನಾಳೆ (ಶುಕ್ರವಾರ) ಅಕ್ಟೋಬರ್ 28 ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಕೆಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯು ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ kea.kar.nic.in ನಲ್ಲಿ ಪ್ರಕಟಗೊಳ್ಳಲಿದೆ. ಕೌನ್ಸೆಲಿಂಗ್ ಪ್ರಕ್ರಿಯೆಗೆ ನೋಂದಾಯಿತರಾದ ಅಭ್ಯರ್ಥಿಗಳು 2022ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಸೀಟು ಹಂಚಿಕೆಯನ್ನು ವೀಕ್ಷಿಸಲು ಲಾಗಿನ್ ಆಗಬೇಕು.
ಅಭ್ಯರ್ಥಿಗಳ ಆಯ್ಕೆಗಳು, ಮತ್ತವರ ಕೆಸಿಇಟಿ ಕಾರ್ಯಕ್ಷಮತೆ ಮತ್ತು ಸೀಟುಗಳ ಲಭ್ಯತೆಯ ಆಧಾರದ ಮೇಲೆ ಕೆಸಿಇಟಿ 2022 ಸೀಟು ಹಂಚಿಕೆಯಾಗಲಿದೆ. ಹಂಚಿಕೆಯಾದ ನಂತರ ಸೀಟುಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಆಯ್ಕೆಗಳನ್ನು ಆರಿಸಿಕೊಳ್ಳಬಹುದಾಗಿದೆ.

ಅಭ್ಯರ್ಥಿಗಳು ಈಗಾಗಲೇ ತಮ್ಮ ಇಷ್ಟದ ಸಂಸ್ಥೆಗಳು ಮತ್ತು ವಿಷಯಗಳನ್ನು ಕೆಸಿಇಟಿ 2022 ಪೋರ್ಟಲ್ ಅನ್ನು ಭರ್ತಿ ಮಾಡಿದ್ದಾರೆ. ಅಂತಿಮ ಕೆಸಿಇಟಿ ಸೀಟು ನಿಯೋಜನೆ ಮಾಡುವ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಅಣುಕು ಸೀಟು ಹಂಚಿಕೆ ಫಲಿತಾಂಶವನ್ನು ಇದೇ ಅ.21ರಂದು ಪ್ರಕಟಿಸಿತ್ತು. ಈ ಫಲಿತಾಂಶಗಳು ಅಭ್ಯರ್ಥಿಗಳಿಗೆ ಲಭ್ಯವಾಗುವಂತೆ ನೋಡಿಕೊಂಡ ಪ್ರಾಧಿಕಾರವು ಅಂತಿಮ ಪಟ್ಟಿಯನ್ನು ನಾಳೆ ಶುಕ್ರವಾರ ಬಿಡುಗಡೆ ಮಾಡಲಿದೆ.
KCET 2022 ಹಂಚಿಕೆ ಫಲಿತಾಂಶ ಹೀಗೆ ಪರಿಶೀಲಿಸಿ
ಅಭ್ಯರ್ಥಿಗಳು ಮೊದಲು ರಾಜ್ಯ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ kea.kar.nic.in ಗೆ ಭೇಟಿ ಕೊಡಿ. ನಂತರ ಅಲ್ಲಿರುವ ಕೆಸಿಇಟಿ ಸೀಟು ಹಂಚಿಕೆ ಮೊದಲ ಸುತ್ತು 2022 ಎಂಬುದರ ಮೇಲೆ ಕ್ಲಿಕ್ ಮಾಡಿ. ಮುಂದುವರೆದು ಅಭ್ಯರ್ಥಿಗಳು ಕರ್ನಾಟಕ ಸಿಇಟಿ ಸಂಖ್ಯೆಯ ತಮ್ಮ ಲಾಗಿನ್ ಮಾಹಿತಿ ನಮೂದಿಸಿ, ಸಬ್ಮಿಟ್ ಬಟನ್ ಒತ್ತಿರಿ.
ಇದಾದ ಕೂಡಲೇ ಕೆಸಿಇಟಿ ಮೊದಲ ಸುತ್ತಿನ ಸೀಟು 2022 ಹಂಚಿಕೆಯ ಪಟ್ಟಿ ಪ್ರದರ್ಶನಗೊಳ್ಳುತ್ತದೆ. ಬಳಿಕ ಅಲ್ಲಿಯೇ ಕೆಸಿಇಟಿ ಸೀಟು ಹಂಚಿಕೆಯ ಪಟ್ಟಿ ಡೌನ್ಲೋಡ್ ಆಯ್ಕೆ ಇರುತ್ತದೆ. ಅಭ್ಯರ್ಥಿಗಳು ತಮ್ಮ ಸೀಟು ನಿಯೋಜನೆಯ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪಟ್ಟಿ ಆಯ್ಕೆ ಮಾಡಿಕೊಂಡು ಅಭ್ಯರ್ಥಿಗಳು ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪತ್ರವನ್ನು ಅಕ್ಟೋಬರ್ 29ರಿಂದ ನವೆಂಬರ್ 2ರೊಳಗೆ ಡೌನ್ಲೋಡ್ ಮಾಡಿಕೊಳ್ಳಬಹುದು.

ನಂತರ ನಿಯಮದಂತೆ ಅಗತ್ಯ ದಾಖಲೆ ಮತ್ತು ಪ್ರಮಾಣಪತ್ರಗಳ ಸಹಿತವಾಗಿ ಸೀಟು ಮತ್ತು ಗೊತ್ತುಪಡಿಸಿದ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications