KCET Exam 2024: ಏಪ್ರಿಲ್ 18, 19 ರಂದು ಸಿಇಟಿ ಪರೀಕ್ಷೆ; ಡ್ರೆಸ್ಕೋಡ್, ಮಾರ್ಗಸೂಚಿ ವಿವರ
ಏಪ್ರಿಲ್ 18 ಮತ್ತು 19 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (KCET UGCET 2024) ನಡೆಸಲಿದೆ. ಸಿಇಟಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಮಾರ್ಗಸೂಚನೆಗಳನ್ನು ನೀಡಲಾಗಿದೆ.
ಪರೀಕ್ಷೆಗೆ ಹೋಗುವಾಗ ಅಗತ್ಯವಾಗಿ ತೆಗೆದುಕೊಂಡು ಹೋಗಬೇಕಾದ ದಾಖಲೆಗಳು, ಪರೀಕ್ಷಾ ದಿನದ ಮಾರ್ಗಸೂಚಿಗಳು, ಡ್ರೆಸ್ ಕೋಡ್ ಇತರ ವಿವರಗಳನ್ನು ಇಲ್ಲಿ ಪರಿಶೀಲನೆ ಮಾಡಬಹುದು.

ಎರಡು ದಿನಗಳು ಪರೀಕ್ಷೆ ನಡೆಯಲಿದೆ. ದಿನ ಎರಡು ಅವಧಿಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಬೆಳಿಗ್ಗೆ 10.30 ರಿಂದ 11.50 ರವರೆಗೆ ಮೊದಲ ಪರೀಕ್ಷೆ ನಡೆದರೆ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಮತ್ತೊಂದು ಪರೀಕ್ಷೆ ನಡೆಯಲಿದೆ. ಕೆಸಿಇಟಿ 2024 ಪರೀಕ್ಷೆಯ ಪ್ರತಿ ಪತ್ರಿಕೆಯನ್ನು 80 ನಿಮಿಷಗಳ ಕಾಲ ನಡೆಸಲಾಗುತ್ತದೆ.
ಈ ವಸ್ತು/ದಾಖಲೆಗಳಿಗೆ ಮಾತ್ರ ಅನುಮತಿ
ಸರಳ ಪಾರದರ್ಶಕ ಬಾಲ್ ಪಾಯಿಂಟ್ ಪೆನ್.
ಹೆಚ್ಚುವರಿ ಭಾವಚಿತ್ರ, ಹಾಜರಾತಿ ಹಾಳೆಯಲ್ಲಿ ಅಂಟಿಸಬೇಕು.
ಕೆಸಿಇಟಿ (KCET) ಪ್ರವೇಶ ಪತ್ರ 2024.
ಮಾನ್ಯವಾದ ಫೋಟೋ ಐಡಿ ಪುರಾವೆ (ಪ್ಯಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ವೋಟರ್ ಐಡಿ/ ಪಾಸ್ಪೋರ್ಟ್/ ಆಧಾರ್ ಕಾರ್ಡ್/ ಇ- ಆಧಾರ್/ ರೇಷನ್ ಕಾರ್ಡ್).
ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ) ತೆಗೆದುಕೊಂಡು ಹೋಗಲು ಅನುಮತಿ ಇದೆ.
ಈ ವಸ್ತುಗಳಿಗೆ ಅನುಮತಿ ಇಲ್ಲ
ಈ ಮೇಲಿನ ವಸ್ತು/ದಾಖಲೆಗಳನ್ನು ಹೊರತುಪಡಿಸಿ ಉಳಿದ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಇರುವುದಿಲ್ಲ. ಪರೀಕ್ಷಾ ದಿನದಂದು ನಿರ್ಬಂಧಿತ ಐಟಂಗಳನ್ನು ಹೊಂದಿರುವ ಯಾವುದೇ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗುತ್ತದೆ.
ಕೈಚೀಲ, ಪರ್ಸ್, ಯಾವುದೇ ಲೋಹೀಯ ಐಟಂ, ಮೊಬೈಲ್ ಫೋನ್, ತಿನ್ನಬಹುದಾದ ವಸ್ತುಗಳನ್ನು ಪರೀಕ್ಷಾ ಹಾಲ್ ಒಳಗೆ ಒಯ್ಯಲು ಅನುಮತಿಸಲಾಗುವುದಿಲ್ಲ. ಅಭ್ಯರ್ಥಿಗಳು 2024 ರ ಪರೀಕ್ಷೆಯು ಮುಗಿಯುವ ಮೊದಲು ಪರೀಕ್ಷಾ ಕೇಂದ್ರದಿಂದ ಹೊರಬರಲು ಅನುಮತಿ ಇರುವುದಿಲ್ಲ.
ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 45 ನಿಮಿಷಗಳ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅನ್ನು ತಲುಪಲು ಸೂಚಿಸಲಾಗಿದೆ. ಕೆಸಿಇಟಿ 2024 ಪರೀಕ್ಷೆಗೆ ತಡವಾಗಿ ಬಂದರೆ ಪರೀಕ್ಷೆ ಬರೆಯಲು ಅಧಿಕಾರಿಗಳು ಅನುಮತಿ ನೀಡುವುದಿಲ್ಲ.
-
ಏಪ್ರಿಲ್ 8ಕ್ಕೆ ದ್ವಿತೀಯ PUC ಫಲಿತಾಂಶ? ಶಿಕ್ಷಣ ಇಲಾಖೆಯ ಮಹತ್ವದ ಅಪ್ಡೇಟ್ ಇಲ್ಲಿದೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications