ಕರ್ನಾಟಕದಲ್ಲಿ KCET ದಾಖಲೆಗಳ ಪರಿಶೀಲನೆ ಪ್ರಾರಂಭ
ಬೆಂಗಳೂರು, ಆಗಸ್ಟ್ 22: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ)ಗೆ ಸಂಬಂಧಿಸಿದಂತೆ 2022ನೇ ಸಾಲಿನ ದಾಖಲೆಗಳ ಪರಿಶೀಲನೆಯ ಪ್ರಕ್ರಿಯೆ ಅನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಸೇರಿದ ಅಧಿಕೃತ kea.kar.nic.in ಮತ್ತು cetonline.karnataka.gov.in/kea ವೆಬ್ಸೈಟ್ಗಳಲ್ಲಿ 2022ರ ಆಗಸ್ಟ್ 22ರ ಸೋಮವಾರದಿಂದಲೇ ಪ್ರಕ್ರಿಯೆ ಶುರುವಾಗಿದೆ.
ಕೆಇಎ ಅಧಿಕೃತ ವೆಬ್ಸೈಟ್ನಲ್ಲಿ KCET ದಾಖಲೆ ಪರಿಶೀಲನೆ 2022 ದಿನಾಂಕಗಳನ್ನು ಸಹ ಪ್ರಕಟಿಸಿದೆ. ಈ ದಾಖಲೆಗಳ ಪರಿಶೀಲನೆಯ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್ಸೈಟ್ಗಳಲ್ಲಿಯೂ ಲಭ್ಯವಿರಲಿದೆ. ಈ ಕುರಿತು ಮಾಹಿತಿಗಾಗಿ ಮುಂದೆ ಓದಿ.
ದಾಖಲೆಗಳ ಬಗ್ಗೆ ಮಾಹಿತಿ ಪರಿಶೀಲನೆಗೆ ಸೂಚನೆ:
2022ರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯು ಆಗಸ್ಟ್ 22 ರಂದು ಪ್ರಾರಂಭವಾಗಲಿದೆ ಮತ್ತು ಸೆಪ್ಟೆಂಬರ್ 7ರವರೆಗೆ ಪ್ರಕ್ರಿಯೆ ನಡೆಯುತ್ತದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2022 ತೆಗೆದುಕೊಳ್ಳುವ ಅಭ್ಯರ್ಥಿಗಳು ಹೆಚ್ಚಿನ ಮತ್ತು ನವೀಕರಿಸಿದ ವಿವರಗಳಿಗಾಗಿ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲಿಸಲು ಸೂಚಿಸಲಾಗಿದೆ. ಅವರು ದಾಖಲೆಗಳ ಪರಿಶೀಲನೆಯನ್ನು ಸಮಯಕ್ಕೆ ಪೂರ್ಣಗೊಳಿಸಬೇಕು ಮತ್ತು ಪರಿಶೀಲನೆ ದಿನಾಂಕದಂದು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ.
ಮೂರು ಶಿಫ್ಟಿನಲ್ಲಿ ದಾಖಲೆಗಳ ಪರಿಶೀಲನೆ:
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ದಾಖಲೆಗಳ ಪರಿಶೀಲನೆಯು ಪ್ರತಿ ದಿನ ಮೂರು ಪಾಳಿಯಲ್ಲಿ ನಡೆಯಲಿದೆ. KEA ಪ್ರತಿ ದಿನ 5000 ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತದೆ.
ಯಾವ ಸಮಯಕ್ಕೆ ಯಾರ ದಾಖಲೆ ಪರಿಶೀಲನೆ?:
KCET ದಾಖಲೆ ಪರಿಶೀಲನೆ 2022 ರ ವೇಳಾಪಟ್ಟಿಯ ಪ್ರಕಾರ, 1-1800 ರ ಶ್ರೇಣಿಯಲ್ಲಿರುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಮೊದಲ ದಿನದಲ್ಲಿ ಪರಿಶೀಲಿಸುತ್ತಾರೆ, ಅಂದರೆ ಬೆಳಿಗ್ಗೆ 9:30 ರಿಂದ 11ರವರೆಗೆ ನಡೆಯಲಿದೆ. 1801-3600 ರ ಶ್ರೇಣಿಯಲ್ಲಿರುವ ಅಭ್ಯರ್ಥಿಗಳ ಡಾಕ್ಯುಮೆಂಟ್ ಪರಿಶೀಲನೆ ಪ್ರಕ್ರಿಯೆಯ ಎರಡನೇ ಶಿಫ್ಟ್ ನಲ್ಲಿ ಅಂದರೆ ಬೆಳಿಗ್ಗೆ 11:15 ರಿಂದ ಮಧ್ಯಾಹ್ನ 1:15 ರವರೆಗೆ ನಡೆಸಲಾಗುತ್ತದೆ. ಅದೇ ರೀತಿ ಮಧ್ಯಾಹ್ನದ ಪಾಳಿಯಲ್ಲಿ ಅಂದರೆ ಮಧ್ಯಾಹ್ನ 2 ಗಂಟೆಯಿಂದ 3601-5000 ಶ್ರೇಣಿಯ ಅಭ್ಯರ್ಥಿಗಳು ತಮ್ಮ KCET ದಾಖಲೆ ಪರಿಶೀಲನೆ ಅನ್ನು ಪೂರ್ಣಗೊಳಿಸುತ್ತಾರೆ.
ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗಳಾದ kea.kar.nic.in ಅಥವಾ cetonline.karnataka.gov.in/kea ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications