Get Updates
Get notified of breaking news, exclusive insights, and must-see stories!

ಕಿರಣ್‌ ಮಜುಂದಾರ್‌ ಟ್ವೀಟ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ

ಬೆಂಗಳೂರು, ಜು.10: ರಾಜ್ಯದ 28 ಸಾವಿರಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳನ್ನು ವಿಲೀನಗೊಳಿಸಲು ಮುಂದಾಗಿರುವ ಸರ್ಕಾರದ ನಿರ್ಧಾರವನ್ನು ಸಾಹಿತಿಗಳು ವಿರೋಧಿಸಿದ ಬೆನ್ನಲ್ಲೇ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ವಿವಾದಾತ್ಮಕ ಟ್ವೀಟ್‌ ಕನ್ನಡಪರ ಹೋರಾಟಗಾರರನ್ನು ಕೆರಳಿಸಿದೆ,

ಶಿಕ್ಷಣ ಮತ್ತು ಉದ್ಯೋಗದ ಬಗ್ಗೆ ಕಾಳಜಿ ಇಲ್ಲದ ಅನಗತ್ಯ ತಂಟೆಕೋರ ಸಣ್ಣ ಮತ್ತು ಅಪ್ರಸ್ತುತ ಹೋರಾಟಗಾರರ ಗುಂಪಿಗೆ ಮಾಧ್ಯಮಗಳು ಪ್ರಚಾರ ಮಾಡುತ್ತಿವೆ ಎಂದು ಕಿರಣ್‌ ಮಜುಂದಾರ್‌ ಶಾ ಟ್ವೀಟ್‌ ಮಾಡಿದ್ದರು.

KDA anger on Kiran Muzumdar comment

ಇದಕ್ಕೆ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್‌. ಜಿ. ಸಿದ್ದರಾಮಯ್ಯ ಕಿಡಿಕಾರಿದ್ದು ಇಂತಹ ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಿ ಎಂದು ತಾಕೀತು ಮಾಡಿ ಷಾಗೆ ಪತ್ರ ಬರೆದಿದ್ದಾರೆ. ಕನ್ನಡದ ಸೌಲಭ್ಯಗಳನ್ನು ಬಳಸಿಕೊಂಡು, ಈ ರೀತಿ ಹೇಳಿಕೆ ನೀಡಿರುವುದು ಕನ್ನಡ ವಿರೋಧಿ ನಡೆಯಗಿದೆ. ಕೂಡಲೇ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಹೇಳಿಕೆಗಳನ್ನು ನೀಡುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದೀರಿ, ಶಿಕ್ಷಣವನ್ನು ವ್ಯಾಪಾರಿ ದೃಷ್ಟಿಕೋನದಲ್ಲಿ ನೋಡುವ ನಿಮಗೆ ಭಾಷೆ ಮೂಲಭೂತ ಜವಾಬ್ದಾರಿಯನ್ನು ಅರ್ಥೈಸುವ ಕೆಲಸ ಕನ್ನಡ ಹೋರಾಟಗಾರರ ಜತೆಗೂಡಿ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಆಂಗ್ಲ ಮಾಧ್ಯಮವೊಂದೇ ಬದುಕನ್ನು ಉದ್ಧಾರ ಮಾಡುತ್ತದೆ ಎಂದು ಅರ್ಥೈಸಿಕೊಳ್ಳುವ ನೀವು ಹಳ್ಳಿಗಾಡಿನ ಅಸಹಾಯಕ ಹೆಣ್ಣುಮಕ್ಕಳೊಂದಿಗೆ ಒಂದಷಟು ಕಾಲ ಕಳೆಯಿರಿ ಎಂದು ಶಾಗೆ ತಿರುಗೇಟು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+