'ವಿಶ್ವವಿದ್ಯಾಲಯಗಳ ವೆಬ್ ಸೈಟಿನಲ್ಲಿ ಕನ್ನಡ ಕಡ್ಡಾಯ'
ಬೆಂಗಳೂರು, ಜನವರಿ 07: ರಾಜ್ಯದ ವಿಶ್ವವಿದ್ಯಾಲಯಗಳ ವೆಬ್ಸೈಟ್ ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಇರಬೇಕು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ .ಜಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ರಾಜ್ಯದ ಹಲವು ವಿಶ್ವವಿದ್ಯಾಲಯಗಳ ವೆಬ್ಸೈಟ್ ಹಾಗೂ ಮಾಹಿತಿಗಳು ಇಂಗ್ಲಿಷ್ ಭಾಷೆಯಲ್ಲಿವೆ. ಎಲ್ಲ ವಿಶ್ವವಿದ್ಯಾಲಯಗಳ ವೆಬ್ಸೈಟ್ನ ಮುಖ್ಯ ಪುಟಗಳು ಕನ್ನಡ ಭಾಷೆಯಲ್ಲಿರುವಂತೆ ಮರು ವಿನ್ಯಾಸಗೊಳಿಸಿ, ಕನ್ನಡದಲ್ಲಿ ಮಾಹಿತಿ ಸಿಗುವಂತೆ ಬದಲಿಸಿ, ಆಯ್ಕೆ ಭಾಷೆಯಾಗಿ ಇಂಗ್ಲಿಷ್ ಬಳಸಬಹುದು ಎಂದು ಪ್ರಾಧಿಕಾರ ತಿಳಿಸಿದೆ.

ಕಲಬುರಗಿ, ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ 15 ವಿವಿಗಳ ವೆಬ್ ಮುಖ ಪುಟದಲ್ಲಿ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆ ಆಯ್ಕೆಯನ್ನು ನೀಡಿವೆ. ಆದರೆ, ಕನ್ನಡದ ಆಯ್ಕೆ ಮುಖ್ಯಪುಟಗಳಿಗೆ ಮಾತ್ರ ಸೀಮಿತವಾಗಿವೆ. ಒಳಪುಟಗಳ ಮಾಹಿತಿಗಳು ಇಂಗ್ಲಿಷ್ನಲ್ಲಿ ವೆ. ಹಂಪಿ ಕನ್ನಡ ವಿವಿ ಹೊರತುಪಡಿಸಿ, ಇನ್ನುಳಿದ ವಿವಿಗಳು ವಿದ್ಯಾರ್ಥಿ, ಸಾರ್ವಜನಿಕರಿಗೆ ಕನ್ನಡದಲ್ಲಿ ಮಾಹಿತಿಗಳನ್ನು ನೀಡುತ್ತಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
1983 ರಲ್ಲಿ ರಾಜ್ಯ ಸರಕಾರವು ಎಲ್ಲ ಹಂತದಲ್ಲೂ ಕಡ್ಡಾಯವಾಗಿ ಕನ್ನಡ ಭಾಷೆಯ್ನು ಅನುಷ್ಠಾನಗೊಳಿಸಲು ಆದೇಶಿಸಿದೆ. ಆದುದರಿಂದ, ಕೂಡಲೇ, ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, 15 ದಿನಗಳೊಳಗೆ ವೆಬ್ಸೈಟ್ಗಳಲ್ಲಿ ಇಂಗ್ಲಿಷ್ ಕೈಬಿಡಬೇಕು. ಪ್ರಧಾನ ಪುಟದೊಂದಿಗೆ ಒಳಮಾಹಿತಿಗಳು ಸಹ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ರೂಪಿಸಬೇಕು. ಆಯ್ಕೆ ಭಾಷೆಯಾಗಿ ಇಂಗ್ಲಿಷ್ ಬಳಸುವುದಕ್ಕೆ ಅಭ್ಯಂತವಿರಲ್ಲ. ಇಲ್ಲದಿದಲ್ಲಿ, ಈ ಸಂಬಂಧ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಕೆ ನೀಡಿದರು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications