ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕೆಇಎ!
ಬೆಂಗಳೂರು ಅಕ್ಟೋಬರ್ 20: ಕರ್ನಾಟಕದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಗಲಾಟೆಗಳು ನಡೆದಿವೆ. ಆದರೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನೀಡಿದೆ.
ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ರಾಜ್ಯದಲ್ಲಿ ಹಿಜಾಬ್ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು. ಇದೀಗ ಕೆಇಎ ವಿವಿಧ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ.
ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಎರಡು ಫೋಟೋ, ಸರ್ಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಏನಿದು ಸಮಸ್ಯೆ?
ಉಡುಪಿಯ ಸರಕಾರಿ ಪಿಯು ಕಾಲೇಜಿನಲ್ಲಿ ಕಳೆದ ವರ್ಷ ಜನವರಿ 1ರಂದು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುತ್ತಿಲ್ಲ ಎಂದು ಆರು ವಿದ್ಯಾರ್ಥಿನಿಯರು ಆರೋಪಿಸಿದಾಗ ಈ ಹಿಜಾಬ್ ವಿವಾದ ಬೆಳಕಿಗೆ ಬಂತು. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದರು. ಬಳಿಕ ಪ್ರತಿಭಟನೆಗಳು ಆರಂಭವಾದವು. ಈ ವಿವಾದ ಶೀರ್ಘದಲ್ಲೇ ರಾಜ್ಯವ್ಯಾಪಿ ಹರಡಿತು. ಮಾತ್ರವಲ್ಲದೆ ಹಿಂದೂ ವಿದ್ಯಾರ್ಥಿಗಳು ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಪಟ್ಟು ಹಿಡಿದರು. ಅದಕ್ಕೆ ಅವಕಾಶ ಕಲ್ಪಿಸಲು ಒತ್ತಾಯ ಮಾಡಿದರು. ಹೀಗೆ ಈ ವಿವಾದ ಕರ್ನಾಟಕ ಮಾತ್ರವಲ್ಲದೆ ವಿವಿಧ ರಾಜ್ಯಗಳಿಗೂ ಹರಡಿತು.
ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ' ಜೈ ಶ್ರೀ ರಾಮ' ಎಂದು ಕೂಗಿದರೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿ 'ಅಲ್ಲಾ ಹು ಅಕ್ಬರ್'' ಎಂದು ಕೂಗಿರುವ ವಿಡಿಯೋಗಳು ವೈರಲ್ ಆದವು. ಈ ವಿಚಾರ ನ್ಯಾಯಾಲಯದ ಕದ ತಟ್ಟಿತು. ಇದು ರಾಜಕೀಯ ಕೆಸರೆರೆಚಾಟಕ್ಕೂ ನಾಂದಿಯಾಯಿತು.
ರಾಜಕೀಯವಾದ ಹಿಜಾಬ್ ವಿವಾದ
ಬಿಜೆಪಿ ನೇತೃತ್ವದ ಈ ಹಿಂದಿನ ಕರ್ನಾಟಕ ಸರ್ಕಾರವು ತೆಗೆದುಕೊಂಡಿರುವ ಹಲವು ವಿವಾದಾತ್ಮಕ ನೀತಿ-ನಿರ್ಧಾರಗಳ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಲೇ ಇದೆ. ಈ ವಿಚಾರಗಳ ವಿರುದ್ಧ ಸಾರ್ವಜನಿಕ ಹಾಗೂ ಕಾನೂನಾತ್ಮಕ ಹೋರಾಟಗಳಿಗೆ ಕಾಂಗ್ರೆಸ್ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡಿತ್ತು.
ಇದೀಗ ಕಾಂಗ್ರೆಸ್ ಪಕ್ಷ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರ ಹಿಡಿಯುವುದರೊಂದಿಗೆ ನೀತಿ, ನಿರ್ಧಾರಗಳನ್ನು ಸರ್ಕಾರವು ಪರಾಮರ್ಶೆಗೆ ಒಳಪಡಿಸುವ ಸಾಧ್ಯತೆ ದಟ್ಟವಾಗಿದೆ. ಇಂಥ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಿರುವುದಕ್ಕೆ ನಿಷೇಧ ಹೇರಿರುವುದು ಪ್ರಮುಖವಾಗಿದೆ. ದೇಶದ ಗಮನಸೆಳೆದಿದ್ದ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ ಮಾಡಿರುವ ಆದೇಶವನ್ನು ಕಾರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications