60 ಕ್ರೀಡೆಗಳಿಗೆ ಸಿಇಟಿ ಕೋಟಾ ಅನ್ವಯ: ಕೆಇಎ ಭರವಸೆ
ಬೆಂಗಳೂರು, ಜೂನ್ 6: ಕಬಡ್ಡಿ, ಚೆಸ್ ಸೇರಿದಂತೆ 22 ಕ್ರೀಡೆಗಳಿಗೆ ಸಿಟಿ ಕೋಟಾ ಇಲ್ಲ ಎಂಬ ಕ್ರೀಡಾ ಇಲಾಖೆಯ ಆದೇಶವನ್ನು ಪರಿಗಣಿಸುವುದಿಲ್ಲ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಒಲಂಪಿಕ್ಸ್ ಮಾನ್ಯತೆ ಪಡೆದಿರುವ ಕ್ರೀಡೆಗಳ ಸಾಧಕರನ್ನು ಮಾತ್ರ ವಿವಿಧ ವೃತ್ತಿಪರ ಕೋರ್ಸ್ಗಳ ಕ್ರೀಡಾ ಕೋಟಾದಲ್ಲಿ ಪರಿಗಣಿಸಬೇಕು ಎಂಬ ಕ್ರೀಡಾ ಇಲಾಖೆಯ ಆದೇಶ ನಮಗೆ ಅನ್ವಯವಾಗುವುದಿಲ್ಲ ಈ ಬಾರಿ ಎಂದಿನಂತೆ ಕ್ರೀಡಾ ಕೋಟಾದಡಿ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಒಲಿಂಪಿಕ್ಸ್ ಮಾನ್ಯತೆ ಪಡೆದ ಕ್ರೀಡೆಗಳು ಸೇರದಿಂತೆ ಸುಮಾರು 60ಕ್ರೀಡೆಗಳ ಸಾಧಕರಿಗೆ ಕ್ರೀಡಾ ಕೋಟಾದಡಿ ಸೀಟು ಹಂಚಿಕೆ ನಡೆಯಲಿದೆ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ.

ಈ ಸಂಬಂಧ ಕ್ರೀಡಾ ಇಲಾಖೆ ಹೊರಡಿಸಿರುವ ಆದೇಶವು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡ ಬಳಿಕ ರಾಜ್ಯದಲ್ಲಿ ಅನುಷ್ಠಾನಕ್ಕೆ ಬರಲಿದೆ ಅದಕ್ಕೂ ಮೊದಲು ಅನ್ವಯವಾಗುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಕ್ರೀಡಾ ಕೋಟಾದಡಿ ಸುಮಾರು 60 ಕ್ರೀಡೆಗಳ ಸಾಧಕರಿಗೆ ಪ್ರವೇಶಾವಕಾಶ ನೀಡುವ ಸೌಲಭ್ಯವನ್ನು ಸಿಇಟಿ ಹೊಂದಿದೆ. ಆದರೆ, ಚೆಸ್, ಕಬಡ್ಡಿ ಸೇರಿಂದತೆ ಒಲಿಂಪಿಕ್ಸ್ ನಲ್ಲಿ ಇನ್ನೂ ಮಾನ್ಯತೆ ಪಡೆಯದ 22 ಕ್ರೀಡೆಗಳನ್ನು ಪಟ್ಟಿ ಮಾಡಿ ಈಗಿರುವ ಕ್ರೀಡೆಗಳ ಸಾಧಕರನ್ನು ಸಿಇಟಿ ಕೋಟಾದಲ್ಲಿ ಪರಿಗಣಿಸದಂತೆ ಆದೇಶ ಹೊರಡಿಸಿತ್ತು.
ಈ ಆದೇಶ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಬಡ್ಡಿ, ಚೆಸ್ ಸೇರಿ ಹಲವು ಕ್ರೀಡೆಗಳನ್ನು ಕ್ರೀಡಾ ಕೋಟಾ ಪಟ್ಟಿಯಿಂದ ತೆಗೆದುಹಾಕಿರುವ ಆದೇಶ ವಿರೋಧಿಸಿ ಮಲ್ಲೇಶ್ವರದಲ್ಲಿರುವ ಸಿಇಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿಇಟಿ ಕೈಪಿಡಿಯಲ್ಲಿ ವಿವಿಧ 60 ಕ್ರೀಡೆಗಳನ್ನು ನೀಡಲಾಗಿದ್ದು, ಅದರಂತೆಯೇ ಕ್ರೀಡಾ ಕೋಟಾ ನೀಡಬೇಕು. ಕ್ರೀಡಾ ಇಲಾಖೆ ಆದೇಶದಲ್ಲಿ ಕೇವಲ 32 ಕ್ರೀಡೆಗಳು ಮಾತ್ರ ಅನ್ವಯಿಸಲಿದೆ ಎಂಬುದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications