PGNEET 2025: ಕೋರ್ಸ್ಗಳ ಪ್ರವೇಶಕ್ಕೆ ಆಹ್ವಾನ, ನೋಂದಣಿ ವೇಳೆ ತಾಂತ್ರಿಕ ದೋಷ...KEA ಸಲಹೆ
ಬೆಂಗಳೂರು, ಅಕ್ಟೋಬರ್ 07: ಸ್ನಾತಕೋತ್ತರ ವೈದ್ಯಕೀಯ ಹಾಗೂ ಡಿಪ್ಲೊಮಾ ಕೋರ್ಸುಗಳಿಗೆ ಪ್ರವೇಶ ಪಡೆಯಲು (PGNEET-2025) ಅರ್ಹ ಅಭ್ಯರ್ಥಿಗಳ ಆನ್ಲೈನ್ ನೋಂದಣಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಲಿಂಕ್ ಬಿಡುಗಡೆ ಮಾಡಿತ್ತು. ಆದರೆ ಕೆಲವು ಅಭ್ಯರ್ಥಿಗಳ ನೋಂದಣಿ ವೇಳೆ ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಇದಕ್ಕೆ ಕೆಇಎ ಅಧಿಕಾರಿಗಳು ಪರಿಹಾರ ನೀಡಿದ್ದಾರೆ.
ಆಗಿರುವ ಆನ್ಲೈನ್ ನೋಂದಣಿಯಲ್ಲಿನ ತಾಂತ್ರಿಕ ದೋಷವನ್ನು ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿದೆ. ಇತ್ತೀಚಿನ ಆವೃತ್ತಿಯ ಗೂಗಲ್ ಕ್ರೋಮ್ ಬ್ರೌಸರ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರ ಮೂಲಕ ಲಾಗಿನ್ ಆಗುವಂತೆ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸಣ್ಣ ಅವರು ಸಲಹೆ ನೀಡಿದ್ದಾರೆ.

ಇನ್ನೂ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅಕ್ಟೋಬರ್ 9ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಅಧಿಕೃತ ವೆಬ್ಸೈಟ್ಗೆ http://cetonline.karnataka.gov.in/KEA/pgetmed2025 ಭೇಟಿ ನೀಡುವಂತೆ ಅವರು ಕೋರಿದ್ದಾರೆ.
ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) NEET-PG 2025 ರಲ್ಲಿ ಅರ್ಹತೆ ಪಡೆದಿರುವ ಮತ್ತು ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳ ಸರ್ಕಾರಿ ಕೋಟಾ ಹಾಗೂ ಖಾಸಗಿ ಕೋಟಾ ಸೀಟುಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.
ಅದೇ ರೀತಿ, ದಿನಾಂಕ 10-01-2022 ನೀಡಿದ್ದ ಸರ್ಕಾರದ ಆದೇಶದನ್ವಯ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ ಸ್ನಾತಕೋತ್ತರ DNB ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಸಹ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕಿದೆ.
PGNEET 2025 ಪರೀಕ್ಷೆಯಲ್ಲಿ ನಿಗದಿಪಡಿಸಿರುವ ಕನಿಷ್ಠ ಪರ್ಸೆಂಟೈಜ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ಸ್ನಾತಕೋತ್ತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ಕರ್ನಾಟಕದ ನಿವಾಸಿಗಳು ಮಾತ್ರ ಅರ್ಜಿ ಹಾಕಬಹುದು ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಶೈಕ್ಷಣಿಕ ಅರ್ಹತೆ, ಮಾನದಂಡಗಳು, ಸೀಟುಗಳಿಗೆ ನಿಗದಿಪಡಿಸಿ ಅಭ್ಯರ್ಥಿಗಳ ಅರ್ಹತೆ, ಆನ್ಲೈನ್ ಸೀಟು ಹಂಚಿಕೆ ವಿಧಾನ ಇನ್ನಿತರ ಅಂಶಗಳು, ಮಾರ್ಗಸೂಚಿ ಅನುಸರಿಸಿಕೊಂಡು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಸದ್ಯ ಈ ನೋಂದಣಿಯಲ್ಲಿ ಆದ ತೊಂದರೆ ಶೀಘ್ರವೇ ಪರಿಹಾರಗೊಳ್ಳಲಿದೆ ಎಂದು ಕೆಇಎ ಅಧಿಕಾರಿ ಎಚ್.ಪ್ರಸಣ್ಣ ಅವರು ಹೇಳಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications