ಜೆಇಇ ಗೊಂದಲ: ಪ್ರವೇಶಾತಿಯ Rank ಪಟ್ಟಿಗೆ ತಡೆ ನೀಡಿದ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು, ನವೆಂಬರ್ 3: ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಸಕ್ತ ಸಾಲಿನ ಬಿಇ ಆರ್ಕಿಟೆಕ್ಚರ್ ಪದವಿ ಪ್ರವೇಶಾತಿಗೆ ಸಂಬಂಧಿಸಿದ ಶ್ರೇಯಾಂಕದ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಡೆಹಿಡಿದಿದೆ.
ಬಿಇ ವಾಸ್ತುಶಿಲ್ಪ ಪ್ರವೇಶಕ್ಕೆ ಸಂಬಂಧಿಸಿದಂತೆ ಶ್ರೇಯಾಂಕ ಪಟ್ಟಿಯನ್ನು ಅಕ್ಟೋಬರ್ 30ರಂದು ಪ್ರಕಟಿಸಲಾಗಿತ್ತು. ವಿದ್ಯಾರ್ಥಿಯು ಪಿಯುಸಿ ಅಥವಾ 12ನೇ ತರಗತಿಯಲ್ಲಿ ಗಳಿಸಿರುವ ಒಟ್ಟಾರೆಯ ಶೇ 50ರಷ್ಟು ಅಂಕಗಳು ಮತ್ತು ಜೆಇಇ/ನಾಟಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟಾರೆ ಅಂಕಗಳಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಗಳಿಸಿರುತ್ತಾರೋ ಅದರ ಶೇ 50ರಷ್ಟನ್ನು ಸೇರಿಸಿ ಈ ಶ್ರೇಯಾಂಕ (Rank) ಪಟ್ಟಿ ಪ್ರಕಟಿಸಲಾಗಿತ್ತು.
ಆದರೆ ಈ ಬಾರಿ ಜೆಇಇ ಪರೀಕ್ಷೆಯ ಫಲಿತಾಂಶ ಅನೇಕರಲ್ಲಿ ಗೊಂದಲಗಳನ್ನು ಮೂಡಿಸಿದೆ. ಇದರ ಬಗ್ಗೆ ಅನೇಕ ವಿದ್ಯಾರ್ಥಿಗಳು ಎನ್ಟಿಎ ಮೊರೆ ಹೋಗಿದ್ದರು. ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಜೆಇಇ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್ಟಿಎ) ಪರ್ಸಂಟೈಲ್ ಮಾದರಿಯಲ್ಲಿ ನೀಡಿತ್ತು.

ಎನ್ಟಿಎ ನೀಡಿದ್ದ ಪರ್ಸಂಟೈಲ್ ಮಾದರಿ ಅಂಕಗಳ ಆಧಾರದಲ್ಲಿಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿತ್ತು. ಇದರಿಂದ ಅನೇಕ ವಿದ್ಯಾರ್ಥಿಗಳು ಶ್ರೇಯಾಂಕಗಳಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಆರೋಪಿಸಿದ್ದರು. ಹಾಗೆಯೇ ಈ ಫಲಿತಾಂಶವನ್ನು ಮರುಪರಿಶೀಲಿಸಲು ಕೋರಿದ್ದರು. ವಿದ್ಯಾರ್ಥಿಗಳ ಮನವಿ ಹಿನ್ನೆಲೆಯಲ್ಲಿ ಅಕ್ಟೋಬರ್ 30ರಂದು ಬಿಇ ಆರ್ಕಿಟೆಕ್ಚರ್ ಪ್ರವೇಶಾತಿಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿರುವ ಶ್ರೇಯಾಂಕ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಕೆಇಎ ತಿಳಿಸಿದೆ.
ವಿದ್ಯಾರ್ಥಿಗಳ ಮನವಿ ಕುರಿತು ಸಂಬಂಧಿಸಿದ ಸಂಸ್ಥೆಗಳಿಂದ ಸ್ಪಷ್ಟೀಕರಣ ಪಡೆದು ನಂತರ ಸೂಕ್ತ ಕ್ರಮವಹಿಸಲಾಗುವುದು ಎಂದು ಅದು ಹೇಳಿದೆ.
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications