KEA Recruitment 2023: ಪ್ರೋಗ್ರಾಮರ್ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ, ಜ.14ರೊಳಗೆ ಅರ್ಜಿ ಸಲ್ಲಿಸಿ
ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಮಾಡಬಯಸುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುವರ್ಣ ಅವಕಾಶ ನೀಡಿದೆ. ಪ್ರಾಧಿಕಾರವು ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಒಟ್ಟು 2 ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲೇ ಸರ್ಕಾರಿ ವೃತ್ತಿ ಜೀವನ ಕಂಡುಕೊಳ್ಳಬಹುದು. ಇ-ಮೇಲ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ 14 ಕೊನೆಯ ದಿನವಾಗಿದೆ. ಹುದ್ದೆಯ ಅರ್ಹತೆ, ಆಯ್ಕೆ, ವೇತನ ಸೇರಿದಂತೆ ಅಗತ್ಯ ಮಾಹಿತಿಯನ್ನು ಮುಂದೆ ತಿಳಿಯಿರಿ.
ಖಾಲಿ ಹುದ್ದೆಯ ವಿವರ
ಪ್ರೋಗ್ರಾಮರ್ ಒಂದು ಹುದ್ದೆ
ಪ್ರೋಗ್ರಾಮರ್ (ಫ್ರೆಶರ್) ಒಂದು ಹುದ್ದೆ
ವಿದ್ಯಾರ್ಹತೆ- ಅನುಭವ

ಪ್ರೋಗ್ರಾಮರ್ ಹುದ್ದೆಗ ಬಿಇ /ಬಿ.ಟೆಕ್, ಸಿಎಸ್ಇ/ ಐಟಿಯಲ್ಲಿ ಎಂಟೆಕ್, ಎಂಎಸ್ಸಿ, ಎಂಸಿಎ ಪೂರೈಸಿದ ಪದವೀಧರ ಅಭ್ಯರ್ಥಿಗಳು ಅರ್ಜಿಸಲ್ಲಿಬಹುದು. ಇನ್ನೂ ಪ್ರೋಗ್ರಾಮರ್ (ಫ್ರೆಶರ್) ಹುದ್ದೆಗೆ ಬಿಸಿಎ ಕೋರ್ಸ್ ಮುಗಿಸಿದವರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ವೆಬ್ಲಾಜಿಕ್ ಸರ್ವರ್ನಲ್ಲಿ ನಮೂನೆಗಳು ಮತ್ತು ವರದಿಗಳೊಂದಿಗೆ ಓರಾಕಲ್ (Oracle) 12 ಸಿ ನಲ್ಲಿ ಎರಡು ವರ್ಷಕ್ಕಿಂತ ಹೆಚ್ಚಿನ ಅನುಭವ ಪಡೆದಿರಬೇಕು ಎಂದು ತಿಳಿಸಲಾಗಿದೆ.
ವಯಸ್ಸಿನ ಮೀತಿ- ವೇತನ
ಸರ್ಕಾರಿ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂಬುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿ ಮಾಡಿಲ್ಲ.
ಇನ್ನು ಆಯ್ಕೆಯಾಗುವ ಅಭ್ಯರ್ಥಿಗಳ ಪೈಕಿ ಪ್ರೋಗ್ರಾಮರ್ ಹುದ್ದೆಗೆ ಮಾಸಿಕ ರೂ.50,000 ರೂ. ಹಾಗೂ ಪ್ರೋಗ್ರಾಮರ್ (ಫ್ರೆಶರ್) ತಿಂಗಳಿಗೆ ರೂ. 25,000 ಸಂಬಳ ಇರಲಿದೆ.

ಹೀಗೆ ಅರ್ಜಿ ಸಲ್ಲಿಸಿ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಜನವರಿ 14 ರೊಳಗೆ ಕಳುಹಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ.
ಪ್ರಮುಖ ದಿನಾಂಕಗಳು
ಇ-ಮೇಲ್ ಕಳುಹಿಸಲು ಕೊನೆಯ ದಿನ- ಜನವರಿ 14
ಪ್ರಾಯೋಗಿಕ ಪರೀಕ್ಷೆ ನಡೆಯುವ ದಿನಾಂಕ- ಜನವರಿ 17
ಅಭ್ಯರ್ಥಿಗಳ ಆಯ್ಕೆಯು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 17 ರಂದು ನಡೆಯಲಿರುವ 3 ಗಂಟೆ ಅವಧಿಯ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕು. ಅದರಲ್ಲಿ ಆಯ್ಕೆಯಾದವರಿಗೆ ನೇರ ಸಂದರ್ಶನ ನಡೆಯಲಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications