KEA ಗುಡ್ ನ್ಯೂಸ್: BWSSB ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಬೆಂಗಳೂರು, ನವೆಂಬರ್ 17: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹಿಂದಿನ ನೇಮಕಾತಿ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಜೊತೆಗೆ KSET 2025 ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರದಿಂದ ಇದೇ ನವೆಂಬರ್ 15ಕ್ಕೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಿತ್ತು. ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ ಅಕ್ಟೋಬರ್ 08 ಮತ್ತು ಅಕ್ಟೋಬರ್ 31 ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅಧಿಸೂಚನೆಗಳನ್ನು ಹೊರಡಿಸಿತ್ತು.

ದಿನಾಂಕ 31.10.2025 ರಂದು ಪ್ರತ್ಯೇಕ ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಸಲು ಕ್ರಮವಾಗಿ ದಿನಾಂಕವನ್ನು 14.11.2025ರ ವರೆಗೆ ಹಾಗೂ ದಿನಾಂಕ 15.11.2025 ರವರೆಗೆ ಶುಲ್ಕ ಪಾವತಿಸುಲು ಅವಕಾಶ ನೀಡಲಾಗಿತ್ತು.
ಇದೀಗ ಬಿಡಬ್ಲುಎಸ್ಎಸ್ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಆನ್ಲೈನ್ ಮೂಲಕ ಶುಲ್ಕ ಪಾವತಿಗೆ ನವೆಂಬರ್ 26ರವರೆಗೆ ಅವಕಾಶ ನೀಡಲಾಗಿದೆ.
KSET 2025: ತಾತ್ಕಾಲಿಕ ಫಲಿತಾಶ ಪ್ರಕಟ
ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 2ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET 2025) ನಡೆಸಲಾಗಿತ್ತು. ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಿರುವುದು ಇದೇ ಮೊದಲು. ನಿಗದಿತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಫಲಿತಾಂಶ ಪಡೆಯಬಹುದು. ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರ ಹೇಳಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications