KEA Ayush 2025: ಯುಜಿ, ಪಿಜಿ ಆಯುಷ್ ಕೊರ್ಸ್ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ
KEA Ayush Seat Allocation Updates: ಕರ್ನಾಟಕದಲ್ಲಿ ಸ್ನಾತಕೋತ್ತರ ಮತ್ತು ಪದವಿ ಆಯುಷ್ ಕೋರ್ಸ್ಗಳ (PGAyush UGAyush 2025) ಅಭ್ಯರ್ಥಿಗಳ ಸ್ಟ್ರೇ ವೆಕೆನ್ಸಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಇದರೊಂದಿಗೆ ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ (PGAyush) ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಇದೇ ಡಿಸೆಂಬರ್ 4ರಿಂದ ಆರಂಭವಾಗಲಿದೆ. ಶುಲ್ಕ ಪಾವತಿ, ಕಾಲೇಜು ಪ್ರವೇಶ ಕುರಿತು ಮಹತ್ವ ಸೂಚನೆಗಳು, ದಿನಾಂಕದ ಮಾಹಿತಿ ಇಲ್ಲಿದೆ.
ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಗುರುವಾರ (ಡಿಸೆಂಬರ್ 4ರಂದು) ಹೊಸದಾಗಿ ಭಾಗವಹಿಸಲು ಇಚ್ಛಿಸುವವರು ಕೂಡ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಸೋಮವಾರ ತಿಳಿಸಿದ್ದಾರೆ.

ಈ ಸುತ್ತಿನಲ್ಲಿ ಅರ್ಹತೆ ಪಡೆದು, ಪ್ರಾಧಿಕಾರದಲ್ಲಿ ನೋಂದಣಿ ಮಾಡದೇ ಇರುವ ಅಭ್ಯರ್ಥಿಗಳು ಡಿಸೆಂಬರ್ 2ರಿಂದ 4ರವರೆಗೆ ನೋಂದಣಿ ಮಾಡಿಕೊಂಡು ಶುಲ್ಕ ಪಾವತಿಸಬೇಕು. 3ನೇ ಸುತ್ತಿಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿಸೆಂಬರ್ 4ರಿಂದ ಡಿಸೆಂಬರ್ 6ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದರು.
ಇನ್ನೂ ಡಿಸೆಂಬರ್ 6ರಂದು ಸಂಜೆ 7ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ಡಿಸೆಂಬರ್ 8ರಂದು ಬೆಳಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿಸೆಂಬರ್ 8ರಿಂದ 9ರವರೆಗೆ ಶುಲ್ಕ ಪಾವತಿಸಬಹುದು. ಡಿಸೆಂಬರ್ 10ರವರೆಗೂ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದೇ ಸಂಜೆಯೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕೆಂದು ಅವರು ಅಭ್ಯರ್ಥಿಗಳಿಗೆ ಸೂಚನೆ ನೀಡಿದರು.
UGAyush ಕೋರ್ಸ್ಗಳಿಗೆ ಸಂಬಂಧಿಸಿದತೆ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಅಭ್ಯರ್ಥಿಗಳ ಶುಲ್ಕ ಪಾವತಿಗೆ ಡಿಸೆಂಬರ್ 3ರವರಗೆ ಅವಕಾಶ ನೀಡಲಾಗಿದೆ. ಮೂಲ ದಾಖಲೆಗಳ ಸಮೇತ ಡಿಸೆಂಬರ್ 4ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.
ಅಷ್ಟೇ ಅಲ್ಲದೇ PGAyush ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿಸೆಂಬರ್ 3ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications