KEA: PGNEET ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ
ಬೆಂಗಳೂರು, ಜುಲೈ 15: ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGNEET 2025) ಬರೆದು ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ಎಂಡಿಎಸ್ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (PGNEET 2025) ಅರ್ಹ ಅಭ್ಯರ್ಥಿಗಳು ಬಯಸಿದ್ದ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕೆಇಎ ಅಧಿಕೃತ ಜಾಲತಾಣದಲ್ಲಿ https://cetonline.karnataka.gov.in/kea/ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಗಮನಿಸುವಂತೆ ಅವರು ತಿಳಿಸಿದ್ದಾರೆ.

ಒಟ್ಟು 889 ಎಂಡಿಎಸ್ ಸೀಟು ಲಭ್ಯ ಇವೆ. ಮೊದಲ ಸುತ್ತಿನಲ್ಲಿ 636 ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಆಗಿದೆ. ಒಟ್ಟು 1,400 ಮಂದಿ ಸೀಟು ಪಡೆಯಲು ಅರ್ಜಿ ಸಲ್ಲಿಸಿದ್ದರು. ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ತಮಗೆ ಸೂಕ್ತ ಅನಿಸಿದರೆ ಛಾಯ್ಸ್ -1 ಅನ್ನು ಆಯ್ಕೆ ಮಾಡಿಕೊಂಡು ಕಾಲೇಜಿಗೆ ಪ್ರವೇಶ ಪಡೆಯಬಹುದು. ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಮಂಗಳವಾರ (ಜುಲೈ 15) ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದರು.
ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ (UGNEET 2025) ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ನೋಂದಣಿ ಮಾಡದಿರುವವರಿಗೆ ಅನುಕೂಲವಾಗಲಿ ಎಂದು ಜುಲೈ 17ರವರೆಗೆ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದೆ. ಹೊಸದಾಗಿ ನೋಂದಣಿ ಮಾಡಿಕೊಂಡು, ಅರ್ಜಿ ಸಲ್ಲಿಸಬಹುದು. ಹಾಗೆಯೇ ನೀಟ್ ರೋಲ್ ನಂಬರ್ ದಾಖಲಿಸುವವರಿಗೂ ಜುಲೈ 17 ರವರೆಗೆ ಅವಕಾಶ ನೀಡಲಾಗಿದೆ.
ಈ ಹಿಂದೆ ಸೀಟು ಹಂಚಿಕೆ ಆಪ್ಷನ್ ದಾಖಲಿಸಲು ಜುಲೈ 15ರವರೆಗೆ ಸಮಯ ನೀಡಿದ್ದು, ಅದು ಇಂದಿಗೆ ಮುಗಿಯಲಿದೆ. ನೀಟ್ ರೋಲ್ ಸಂಖ್ಯೆ ದಾಖಲಿಸಲು ಮೊದಲು ಜುಲೈ 08ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಜುಲೈ 17 ರವರೆಗೆ ದಾಖಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಎಲ್ಲ ಅಭ್ಯರ್ಥಿಗಳು ಲಿಂಕ್ ಮೂಲಕ ಕೆಇಎ ಸೂಚನೆ ಪಾಲಿಸುವ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಸೃಷ್ಟಿಯಾಗಿತ್ತು. ಇದೀಗ ಆ ಸಮಸ್ಯೆಗೆ ಕೊನೆಗೊಂಡಿದೆ. ಹೀಗಾಗಿ ಒಂದಷ್ಟು ಅವಧಿ ವಿಸ್ತರಣೆ ಮಾಡಲಾಗಿದೆ. ಅಣಕು ಫಲಿತಾಂಶ, ಇತರ ಸುತ್ತುಗಳ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಬಾಕಿ ಇದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications