KEA ಸರ್ವರ್ ಡೌನ್: UGCET ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬ! ಅಭ್ಯರ್ಥಿಗಳು ಗಮನಿಸಿ, ಕೊನೆ ದಿನ ವಿಸ್ತರಣೆ..
ಬೆಂಗಳೂರು, ಜುಲೈ 12: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET or UGCET-25) ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ವಿವಿಧ ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಗೆ, ಆಪ್ಷನ್ ಆಯ್ಕೆಗೆ ಆಹ್ವಾನಿಸಲಾಗಿತ್ತು. ದಾಖಲೆ ಪರಿಶೀಲನೆಗೆ ದಿನಾಂಕ ಪ್ರಕಟಿಸಲಾಗಿತ್ತು. ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸರ್ವರ್ ನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಈ ಸಂಬಂಧ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಅಭ್ಯರ್ಥಿಗಳಿಗೆ ಮಹತ್ವ ಅಪ್ಡೇಟ್ ನೀಡಿದ್ದಾರ.ೆ
KEA ಸರ್ವರ್ ಡೌನ್ ಆಗಿತ್ತು. ಸಮಸ್ಯೆ ಕಾಣಿಸುತ್ತಿದ್ದಂತೆ ಪರಿಹರಿಸಲಾಗುತ್ತಿದೆ. ಸರ್ವರ್ ಸಮಸ್ಯೆ ಸಹಜ ಸ್ಥಿತಿಗೆ ಮರಳುತ್ತಿದೆ. ಸರ್ವರ್ ಸಮಸ್ಯೆ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿದೆ. ಇದನ್ನು ಪರಿಗಣಿಸಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15ರಿಂದ ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಯುಜಿಸಿಇಟಿ 2025 ಪರೀಕ್ಷಾ ಅಭ್ಯರ್ಥಿಗಳು ಎಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ. ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಈ ಪ್ರಕ್ರಿಯೆ ಪೂರೈಸಲು ಈ ಅವಕಾಶ ಬಳಸಿಕೊಳ್ಳಬೇಕು.
ಅಭ್ಯರ್ಥಿಗಳು, ಕಾಲೇಜುಗಳು ಮತ್ತು ಕೋರ್ಸುಗಳ ಪಟ್ಟಿಯನ್ನು ಆದ್ಯತೆಯ ಕ್ರಮದಲ್ಲಿ (ಕಾಲೇಜ್ ಕೋಡ್ ಮತ್ತು ಕೋರ್ಸ್ ಕೋಡ್) ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು. ಹೀಗೆ ಮಾಡುವುದರಿಂದ ಒಮ್ಮೆಲೇ ಅಧಿಕ ಸಂಖ್ಯೆಯ ಅಭ್ಯರ್ಥಿಗಳು ಪೋರ್ಟಲ್ ಅನ್ನು ದೀರ್ಘ ಸಮಯದವರೆಗೆ ಸಕ್ರಿಯ ಅವಸ್ಥೆಯಲ್ಲಿ ಇರಿಸುವುದು ತಪ್ಪುತ್ತದೆ. ಇತರ ಅಭ್ಯರ್ಥಿಗಳಿಗೆ ಪೋರ್ಟಲ್ ಲಭ್ಯತೆಯನ್ನು ಇದು ಸುಲಭಗೊಳಿಸುತ್ತದೆ ಎಂದು ಅವರು ವಿವರಿಸಿದರು.
ಜುಲೈ 28ಕ್ಕೆ ಫಲಿತಾಂಶ ಪ್ರಕಟ
ಆಯ್ಕೆ ನಮೂದು ಪೋರ್ಟಲ್ ಪುನರಾರಂಭದ ಬಗ್ಗೆ ಎಲ್ಲ ಅಭ್ಯರ್ಥಿಗಳಿಗೆ ಜ್ಞಾಪನ ಸಂದೇಶ ಕಳುಹಿಸಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಜುಲೈ 21ರಂದು ಅಣಕು ಸೀಟು ಹಂಚಿಕೆ ಫಲಿತಾಂಶ ಹಾಗೂ ಜುಲೈ 28ರಂದು ಅಂತಿಮ ಫಲಿತಾಂಶ ಹೊರಬೀಳಲಿದೆ.

ವೈದ್ಯಕೀಯ ಕೋರ್ಸ್: ಜುಲೈ 17 ದಾಖಲೆ ಪರಿಶೀಲನೆ
ಜುಲೈ 7ರ ನಂತರ ಯುಜಿನೀಟ್ -2025ಕ್ಕೆ ನೋಂದಣಿ ಮತ್ತು ಆನ್ಲೈನ್ ಅರ್ಜಿ ಭರ್ತಿ ಮಾಡಿ, ಶುಲ್ಕ ಪಾವತಿಸಿರುವ ('ಎ'ಯಿಂದ 'ಒ'ವರೆಗೆ ಹಾಗೂ 'ಝಡ್' ಕ್ಲಾಸ್ ಅಡಿಯಲ್ಲಿ ಸೀಟು ಕ್ಲೇಮು ಮಾಡಿರುವವರು) ಅಭ್ಯರ್ಥಿಗಳು, ವೈದ್ಯಕೀಯ / ದಂತ ವೈದ್ಯಕೀಯ/ಆರ್ಯುವೇದ/ಹೋಮಿಯೋಪತಿ /ಯುನಾನಿ ಕೋರ್ಸುಗಳ ಪ್ರವೇಶಾತಿಗಾಗಿ ಎಲ್ಲಾ ಅಗತ್ಯ ಮೂಲ ದಾಖಲೆಗಳ ಪರಿಶೀಲನೆಗೆ ಕೆಇಎ, ಕಚೇರಿಗೆ ಜುಲೈ 17 ರಿಂದ 19ರೊಳಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದರು.
ವಿಶೇಷ ಪ್ರವರ್ಗಗಳಡಿ ಕ್ಲೇಮು ಮಾಡಿರುವವರು, ವಿಶೇಷ ಚೇತನ ಅಭ್ಯರ್ಥಿಗಳು, 'ಎ'ಯಿಂದ 'ಒ' ಹಾಗೂ 'ಝಡ್' ಕ್ಲಾಸಿನಡಿ ಕ್ಲೇಮು ಮಾಡಿರುವವರು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಕುರಿತಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಆ ಪ್ರಕಾರ ಹಾಜರಾಗಬೇಕು, ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಯುಜಿಸಿಇಟಿ ಸಂದರ್ಭದಲ್ಲಿಯೇ ನೀಡಲಾಗಿದ್ದು, ಓದಿಕೊಳ್ಳುವಂತೆ ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.
ಕನ್ನಡ ಭಾಷಾ ಪರೀಕ್ಷೆ
ಹೊಸದಾಗಿ ನೋಂದಣಿ ಮಾಡಿರುವ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಜುಲೈ 17ರಂದು ಮಧ್ಯಾಹ್ನ 3.30ರಿಂದ ಸಂಜೆ 4.30ರವರೆಗೆ ಬೆಂಗಳೂರು ಕೇಂದ್ರದಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ತಪ್ಪದೇ ಪರೀಕ್ಷೆ ಎದುರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video













Click it and Unblock the Notifications