ಕೆಂಪಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು : ಚುನಾವಣಾ ಆಯೋಗ
ಬೆಂಗಳೂರು, ಏಪ್ರಿಲ್ 06 : ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು 2014ರಿಂದ ಕರ್ನಾಟಕ ಗೃಹ ಸಚಿವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಶುಕ್ರವಾರ ಚುನಾವಣಾ ಆಯೋಗ ಈ ಕುರಿತು ಆದೇಶ ಹೊರಡಿಸಿದೆ. ಕೆಂಪಯ್ಯ ಅವರ ಹುದ್ದೆ ಅಸಂವಿಧಾನಿಕ ತಕ್ಷಣ ಅವರು ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಯೋಗ ಆದೇಶದಲ್ಲಿ ಸೂಚನೆ ನೀಡಿದೆ. ಈ ಆದೇಶದಿಂದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ಗೆ ಗೆಲುವು ಸಿಕ್ಕಂತಾಗಿದೆ.
ಬಿಜೆಪಿ ಮತ್ತು ಜೆಡಿಎಸ್ ಕೆಂಪಯ್ಯ ಅವರು ಗೃಹ ಸಚಿವರ ಸಲಹೆಗಾರರಾಗಿ ಮುಂದುವರೆಯಬಾರದು ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು. ಕೆಂಪಯ್ಯ ಹುದ್ದೆಯಲ್ಲಿ ಮುಂದುವರೆದರೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ರಾಜಕೀಯ ಹಸ್ತಕ್ಷೇಪವಿಲ್ಲದೆ ಕೆಲಸ ಮಾಡುವುದು ಸಾಧ್ಯವಿಲ್ಲ ಎಂದು ಹೇಳಿದ್ದವು.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, 'ರಾಜಕೀಯ ಮತ್ತು ಇತರ ಸಲಹೆಗಾರರು ತಮ್ಮ ಹುದ್ದೆಯಲ್ಲಿ ಮುಂದುವರೆಯುವಂತಿಲ್ಲ' ಎಂದು ಹೇಳಿದ್ದರು.
1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು 2009ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ 2014ರಲ್ಲಿ ಅವರನ್ನು ಗೃಹ ಸಚಿವರ ಸಲಹೆಗಾರರಾಗಿ ನೇಮಿಸಲಾಗಿತ್ತು. ಕೆಂಪಯ್ಯ ಅವರನ್ನು ನೇಮಕ ಮಾಡಿದ ಕುರಿತು ಭಾರೀ ಚರ್ಚೆ ನಡೆದಿತ್ತು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್












Click it and Unblock the Notifications