ಬೊಳುವಾರು ಮಹಮ್ಮದ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಮಾರು 24 ಭಾಷೆಗಳಲ್ಲಿನ ಸಾಹಿತಿಗಳಿಗೆ ಸಾಹಿತ್ಯ ಅಕಾಡೆಮಿ 2016ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಕನ್ನಡದ ಕಾದಂಬರಿಗಾರ ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯ ಓಟ ಕೃತಿ 2016ನೇ ಪ್ರಶಸ್ತಿಗೆ ಆಯ್ಕೆಯಾಗಿದೆ.

ಬೆಂಗಳೂರು, ಡಿಸೆಂಬರ್ 21 : ಸುಮಾರು 24 ಭಾಷೆಗಳಲ್ಲಿನ ಸಾಹಿತಿಗಳಿಗೆ ಸಾಹಿತ್ಯ ಅಕಾಡೆಮಿ 2016ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಕನ್ನಡದ ಕಾದಂಬರಿಗಾರ ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯ ಓಟ ಕೃತಿ 2016ನೇ ಪ್ರಶಸ್ತಿಗೆ ಆಯ್ಕೆಯಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿರುತ್ತದೆ. ಅಕಾಡೆಮಿ ಪ್ರಶಸ್ತಿಯನ್ನು 2017ರಲ್ಲಿ ಫೆಬ್ರವರಿಯಲ್ಲಿ ಪ್ರದಾನ ಮಾಡಲಾಗುತ್ತದೆ. ಕಳೆದ ವರ್ಷ ಕೆ ವಿ ತಿರುಮಲೇಶ್ ಅವರ ಅಕ್ಷರ ಕಾವ್ಯ ಕವನಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಕನ್ನಡ ವಿಭಾಗಗಳ ಆಯ್ಕೆ ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಎಚ್ ಸಿ ಬೋರಲಿಂಗಯ್ಯ, ಎಲ್ ಹನುಮಂತಯ್ಯ ಮತ್ತು ಎಸ್ ಜಿ ಸಿದ್ದರಾಮಯ್ಯನವರು ಇದ್ದರು.

Kendra Sahitya Academy Award for Bolwar Mahammad Kunhi

ವಿಶಿಷ್ಟ ಸಂವೇದನೆಯ ಸಾಹಿತಿಯಾಗಿ ಹೊರಹೊಮ್ಮಿರುವ ಕುಂಞ ಅವರು. ಒಂದು ತುಂಡು ಗೋಡೆ, ಆಕಾಶಕ್ಕೆ ನೀಲಿ ಪರದೆ, ದೇವರುಗಳ ರಾಜ್ಯದಲಿ, ಅಂಕ ಅವರ ಗಮನಾರ್ಹ ಕಥಾ ಸಂಕಲನಗಳನ್ನು ಹೊರತಂದಿದ್ದಾರೆ. 'ಜಿಹಾದ್', 'ಓದಿರಿ' ಅವರ ಪ್ರಮುಖ ಕಾದಂಬರಿ. ಪಿ ಶೇಷಾದ್ರಿ ನಿರ್ದೇಶನದ ಪ್ರಶಸ್ತಿ ಪುರಸ್ಕೃತ ಚಿತ್ರ 'ಮುನ್ನುಡಿ' ಬೊಳುವಾರು ಅವರ ಕತೆಯನ್ನು ಆಧರಿಸಿದೆ.

ಮಹಮ್ಮದ್ ಕುಂಞ ಅವರು ಮಕ್ಕಳ ಸಾಹಿತ್ಯಕ್ಕೆ ನೀಡುರುವ ಕೊಡುಗೆ ಅಮೂಲ್ಯವಾದುದು. ದಕ್ಷಿಣ ಕನ್ನಡದ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಮಹಾಪ್ರಬಂಧಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕುಂಞ ಅವರ 'ತಟ್ಟು ಚಪ್ಪಾಳೆ ಪುಟ್ಟ ಮಗು' ಮಕ್ಕಳ ಸಾಹಿತ್ಯದ ಶಿಖರಪ್ರಾಯ ಕೃತಿಯಾಗಿದೆ.

ಕುಂಞ ಅವರ 'ಪಾಪು ಗಾಂಧಿ, ಗಾಂಧಿ ಬಾಪು' ಆದ ಕಥೆ ಕೃತಿಗೆ 2010 ಮಕ್ಕಳ ವಿಭಾಗದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+