ಬೊಳುವಾರು ಮಹಮ್ಮದ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಸುಮಾರು 24 ಭಾಷೆಗಳಲ್ಲಿನ ಸಾಹಿತಿಗಳಿಗೆ ಸಾಹಿತ್ಯ ಅಕಾಡೆಮಿ 2016ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಕನ್ನಡದ ಕಾದಂಬರಿಗಾರ ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯ ಓಟ ಕೃತಿ 2016ನೇ ಪ್ರಶಸ್ತಿಗೆ ಆಯ್ಕೆಯಾಗಿದೆ.
ಬೆಂಗಳೂರು, ಡಿಸೆಂಬರ್ 21 : ಸುಮಾರು 24 ಭಾಷೆಗಳಲ್ಲಿನ ಸಾಹಿತಿಗಳಿಗೆ ಸಾಹಿತ್ಯ ಅಕಾಡೆಮಿ 2016ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಕನ್ನಡದ ಕಾದಂಬರಿಗಾರ ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯ ಓಟ ಕೃತಿ 2016ನೇ ಪ್ರಶಸ್ತಿಗೆ ಆಯ್ಕೆಯಾಗಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಹೊಂದಿರುತ್ತದೆ. ಅಕಾಡೆಮಿ ಪ್ರಶಸ್ತಿಯನ್ನು 2017ರಲ್ಲಿ ಫೆಬ್ರವರಿಯಲ್ಲಿ ಪ್ರದಾನ ಮಾಡಲಾಗುತ್ತದೆ. ಕಳೆದ ವರ್ಷ ಕೆ ವಿ ತಿರುಮಲೇಶ್ ಅವರ ಅಕ್ಷರ ಕಾವ್ಯ ಕವನಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಕನ್ನಡ ವಿಭಾಗಗಳ ಆಯ್ಕೆ ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಎಚ್ ಸಿ ಬೋರಲಿಂಗಯ್ಯ, ಎಲ್ ಹನುಮಂತಯ್ಯ ಮತ್ತು ಎಸ್ ಜಿ ಸಿದ್ದರಾಮಯ್ಯನವರು ಇದ್ದರು.

ವಿಶಿಷ್ಟ ಸಂವೇದನೆಯ ಸಾಹಿತಿಯಾಗಿ ಹೊರಹೊಮ್ಮಿರುವ ಕುಂಞ ಅವರು. ಒಂದು ತುಂಡು ಗೋಡೆ, ಆಕಾಶಕ್ಕೆ ನೀಲಿ ಪರದೆ, ದೇವರುಗಳ ರಾಜ್ಯದಲಿ, ಅಂಕ ಅವರ ಗಮನಾರ್ಹ ಕಥಾ ಸಂಕಲನಗಳನ್ನು ಹೊರತಂದಿದ್ದಾರೆ. 'ಜಿಹಾದ್', 'ಓದಿರಿ' ಅವರ ಪ್ರಮುಖ ಕಾದಂಬರಿ. ಪಿ ಶೇಷಾದ್ರಿ ನಿರ್ದೇಶನದ ಪ್ರಶಸ್ತಿ ಪುರಸ್ಕೃತ ಚಿತ್ರ 'ಮುನ್ನುಡಿ' ಬೊಳುವಾರು ಅವರ ಕತೆಯನ್ನು ಆಧರಿಸಿದೆ.
ಮಹಮ್ಮದ್ ಕುಂಞ ಅವರು ಮಕ್ಕಳ ಸಾಹಿತ್ಯಕ್ಕೆ ನೀಡುರುವ ಕೊಡುಗೆ ಅಮೂಲ್ಯವಾದುದು. ದಕ್ಷಿಣ ಕನ್ನಡದ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಮಹಾಪ್ರಬಂಧಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕುಂಞ ಅವರ 'ತಟ್ಟು ಚಪ್ಪಾಳೆ ಪುಟ್ಟ ಮಗು' ಮಕ್ಕಳ ಸಾಹಿತ್ಯದ ಶಿಖರಪ್ರಾಯ ಕೃತಿಯಾಗಿದೆ.
ಕುಂಞ ಅವರ 'ಪಾಪು ಗಾಂಧಿ, ಗಾಂಧಿ ಬಾಪು' ಆದ ಕಥೆ ಕೃತಿಗೆ 2010 ಮಕ್ಕಳ ವಿಭಾಗದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು
Download











Click it and Unblock the Notifications