ಬಂಡೀಪುರ ಅರಣ್ಯದಲ್ಲಿ ಫ್ಲೈ ಓವರ್ : 50ರಷ್ಟು ವೆಚ್ಚ ಕೊಡಲು ಸಿದ್ಧ ಎಂದ ಕೇರಳ
ಬೆಂಗಳೂರು, ಡಿಸೆಂಬರ್ 02 : ಬಂಡೀಪುರ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಫ್ಲೈ ಓವರ್ ನಿರ್ಮಾಣ ಮಾಡುವ ಪ್ರಸ್ತಾವನೆ ಇದ್ದು, ಇದರ ನಿರ್ಮಾಣ ವೆಚ್ಚದಲ್ಲಿ ಶೇ 50ರಷ್ಟು ಮೊತ್ತವನ್ನು ನೀಡುವುದಾಗಿ ಕೇರಳ ಸರ್ಕಾರ ಹೇಳಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಈಗಾಗಲೇ ಈ ಮಾರ್ಗದಲ್ಲಿ ಫ್ಲೈ ಒವರ್ ನಿರ್ಮಾಣ ಮಾಡಲು ಭಾರೀ ವಿರೋಧ ವ್ಯಕ್ತವಾಗಿದೆ.
ಬಂಡೀಪುರ ಅರಣ್ಯದಲ್ಲಿ ಎಲಿವೇಟೆಡ್ ರಸ್ತೆ ವಿರೋಧಿಸಿ ಪರಿಸರವಾದಿಗಳ ಹೋರಾಟ
ಬಂಡೀಪುರ-ವಯನಾಡು ಮಾರ್ಗದಲ್ಲಿ 1 ಕಿ.ಮೀ. ಉದ್ದ 5 ಫ್ಲೈ ಓವರ್ ನಿರ್ಮಾಣ ಮಾಡುವ ಪ್ರಸ್ತಾವನೆ ಇದೆ. ಈ ಯೋಜನೆಗೆ ಶೇ 50ರಷ್ಟು ವೆಚ್ಚವನ್ನು ಭರಿಸಲು ಸಿದ್ಧರಿದ್ದೇವೆ ಎಂದು ಕೇರಳ ಹೇಳಿದೆ.
Solution to the traffic woes of Bandipur-Wayanad stretch. CM Pinarayi Vijayan gave permission for the State to bear 50% of the cost for constructing 5 one km long flyovers on NH 212 to facilitate night time travel. It is estimated that the project will cost ₹500 Cr.
— CMO Kerala (@CMOKerala) December 1, 2018
ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರವನ್ನು ವನ್ಯಜೀವಿಗಳ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸಿ ರಾತ್ರಿ ಸಂಚಾರಕ್ಕೂ ಅವಕಾಶ ನೀಡುವ ಪ್ರಸ್ತಾವನೆ ಇದೆ.
ಬಂಡೀಪುರ: ಮನುಷ್ಯರ ತೆವಲಿಗೆ ವನ್ಯಪ್ರಾಣಿಗಳು ಬಲಿಯಾಗಬೇಕೇ?
ಬಂಡೀಪುರ ಕಾಡಿನಲ್ಲಿ ಹಾದು ಹೋಗುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಆರಂಭವಾದರೆ ಕೇರಳ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ.
ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಪ್ರವೇಶವಿಲ್ಲ: ಸಚಿವ ಪುಟ್ಟರಂಗಶೆಟ್ಟಿ
ಈ ಹಿನ್ನಲೆಯಲ್ಲಿ ಕೇರಳ ಸರ್ಕಾರ ಯೋಜನೆಗೆ ಶೇ 50ರಷ್ಟು ವೆಚ್ಚ ಭರಿಸಲು ಮುಂದೆ ಬಂದಿದೆ. ಆದರೆ, ಕರ್ನಾಟಕ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಲಿದೆಯೇ? ಕಾದು ನೋಡಬೇಕು.