ಕಾಂಗ್ರೆಸ್ ಲೀಡರ್ ಕೆ.ಸಿ ವೇಣುಗೋಪಾಲ್ ಗೆ ಸಿಬಿಐ ಡ್ರಿಲ್
ದೆಹಲಿ, ಆ. 18: ಕಾಂಗ್ರೆಸ್ ಪಕ್ಷದ ಪ್ರಭಾವಿ ಲೀಡರ್, ರಾಜ್ಯಸಭಾ ಸದಸ್ಯ, ಕೇರಳದ ಕೆ.ಸಿ. ವೇಣುಗೋಪಾಲ್ ಅವರನ್ನು ಮಹಿಳೆಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಸಿಬಿಐ ಬುಧವಾರ ವಿಚಾರಣೆಗೆ ಒಳಪಡಿಸಿದೆ.
ಕೇರಳ ಸೋಲಾರ್ ಹಗರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಕೆ.ಸಿ. ವೇಣುಗೋಪಾಲ್ ಅವರನ್ನು ಕಳೆದ ವಾರವಷ್ಟೇ ಸಿಬಿಐ ಅಧಿಕಾರಿಗಳು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು. ಮಹಿಳೆಗೆ ಲೈಂಗಿಕ ಶೋಷಣೆ ನೀಡಿದ ಆರೋಪ ಸಂಬಂಧ ವಿಚಾರಣೆ ನಡೆಸಿ ವೇಣುಗೋಪಾಲ್ ಅವರ ಹೇಳಿಕೆಯನ್ನು ಸಿಬಿಐ ದಾಖಲಿಸಿಕೊಂಡಿದೆ. ಕಳೆದ ವಾರವಷ್ಟೇ ವೇಣುಗೋಪಾಲ್ ಅವರನ್ನು ಸಿಬಿಐ ಇದೀಗ ಎರಡನೇ ಸಲ ವಿಚಾರಣೆ ನಡೆಸಿ ಮಹತ್ವದ ಮಾಹಿತಿ ಸಂಗ್ರಹಿಸಿದೆ.
2012 ರಲ್ಲಿ ಬೆಳಕಿಗೆ ಬಂದಿದ್ದ ಸೋಲಾರ್ ಎನರ್ಜಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕೇರಳ ಕ್ರೈಂ ಬ್ರಾಂಚ್ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಈ ನಡುವೆ ಸೋಲಾರ್ ಹಗರಣ ಕೇರಳದಲ್ಲಿ ಭಾರೀ ಸದ್ದು ಮಾಡಿತ್ತು. ಇದನ್ನು ಮನಗಂಡ ಪಿಣರಾಯಿ ವಿಜಯನ್ ಕಳೆದ ವರ್ಷ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು.

ಮಹಿಳೆ ಹೇಳಿಕೆ ಆಧರಿಸಿ ಕೆ.ಸಿ. ವೇಣುಗೋಪಾಲ್, ಮಾಜಿ ಸಿಎಂ ಉಮ್ಮಾನ್ ಚಾಂಡಿ, ಸಂಸದ ಹಿಬಿ ಇದನ್, ಮಾಜಿ ಸಚಿವ ಎ.ಪಿ. ಅನಿಲ್ ಕುಮಾರ್, ಸಂಸದ ಅಡೂರ್ ಪ್ರಕಾಶ್, ಬಿಜೆಪಿ ಮುಖಂಡ ಎ.ಪಿ. ಅಬ್ದುಲ್ ಕಟ್ಟಿ ಸೇರಿದಂತೆ ಆರು ಮಂದಿಯ ವಿರುದ್ಧ ಸಿಬಿಐ ಕೇಸು ದಾಖಲಿಸಿಕೊಂಡಿತ್ತು. ಈ ಪ್ರಕರಣ ಸಂಬಂಧ ಕೆ.ಸಿ. ವೇಣುಗೋಪಾಲ್ ಅವರನ್ನು ವಾರದ ಹಿಂದಷ್ಟೆ ವಿಚಾರಣೆಗೆ ಒಳಪಡಿಸಿತ್ತು.

ಕಾಂಗ್ರೆಸ್ ವರಿಷ್ಠ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಪರಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಸೋಲಾರ್ ಹಗರಣದಲ್ಲಿ ಕೆಸಿ ವೇಣುಗೋಪಾಲ್ ಸಂಕಷ್ಟದಲ್ಲಿ ಸಿಲುಕಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications