ಬ್ರೇಕಿಂಗ್ : ಕರ್ನಾಟಕದಲ್ಲಿ ವಿದ್ಯುತ್ ದರಗಳು ಏರಿಕೆ
ಬೆಂಗಳೂರು, ಮಾರ್ಚ್ 30 : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಮಾಡಿದೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿಯೂ ದರ ಹೆಚ್ಚಳವಾಗಿದ್ದು, ಏ.1ರಿಂದ ನೂತನ ದರ ಜಾರಿಗೆ ಬರಲಿದೆ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಆಯೋಗದ ಅಧ್ಯಕ್ಷ ಎಂ.ಕೆ. ಶಂಕರಲಿಂಗೇಗೌಡ ಅವರು ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. 2016-17ನೇ ಸಾಲಿಗೆ ಜಾರಿಗೆ ಬರುವಂತೆ ದರವನ್ನು ಹೆಚ್ಚಳ ಮಾಡಲಾಗಿದೆ ಎಂದು ಅವರು ಹೇಳಿದರು. [ಕರೆಂಟ್ ಕೊಡಿ ಎಂದು ಕರೆ ಮಾಡಿದ್ದಕ್ಕೆ ಕಂಬಿ ಹಿಂದೆ ಹೋದ್ರು]

ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 48 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜ್ಯದಲ್ಲಿ ಶೇ 9ರಷ್ಟು ದರ ಹೆಚ್ಚಳ ಮಾಡಲಾಗಿದೆ. [ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]
ಗೃಹ ಬಳಕೆ
ನಗರ ಪ್ರದೇಶ : ನಗರ ಪ್ರದೇಶದಲ್ಲಿ ಗೃಹ ಬಳಕೆಗೆ 30 ಯೂನಿಟ್ ವರೆಗೆ 3 ರೂ., 31-100 ಯೂನಿಟ್ಗೆ 4.40 ರೂ., 101-200 ಯೂನಿಟ್ ವರೆಗೆ 5.90 ರೂ., 200 ಯೂನಿಟ್ ಮೀರಿದರೆ 6.90 ರೂ.ಗಳು
ಗ್ರಾಮೀಣ ಪ್ರದೇಶ : ಗ್ರಾಮೀಣ ಪ್ರದೇಶದಲ್ಲಿ ಗೃಹ ಬಳಕೆಗೆ 30 ಯೂನಿಟ್ ವರೆಗೆ 2.90 ರೂ., 31-100 ಯೂನಿಟ್ 4.10 ರೂ., 101-200 ಯೂನಿಟ್ 5.60 ರೂ., 200 ಯೂನಿಟ್ ಮೀರಿದರೆ 6.40 ರೂ.
ಹುಕ್ಕೇರಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ 38 ಪೈಸೆ, ಮಂಗಳೂರು ಎಸ್ಇಝಡ್ ವ್ಯಾಪ್ತಿಯಲ್ಲಿ 6.05 ಪೈಸೆ ಹೆಚ್ಚಳ, ಮಂಗಳೂರು ವಿಕಾಸ್ ಕಂಪನಿ ವ್ಯಾಪ್ತಿಯಲ್ಲಿ 6.55ಪೈಸೆ ಹೆಚ್ಚಳ ಮಾಡಲಾಗಿದೆ.
ಕೈಗಾರಿಕೆ
ಬೆಸ್ಕಾಂ ವ್ಯಾಪ್ತಿಯಲ್ಲಿ ಎಲ್ಟಿ ಕೈಗಾರಿಕೆಗಳಿಗೆ ಸರಾಸರಿ 15 ರಿಂದ 30 ಪೈಸೆ ಹೆಚ್ಚಳ. ಮೊದಲ 500 ಯೂನಿಟ್ಗೆ 4.90 ಪೈಸೆಯಿಂದ 5 ರೂ. 10 ಪೈಸೆಗೆ ಹೆಚ್ಚಳ, 500 ಯೂನಿಟ್ಗಿಂತ ಹೆಚ್ಚಿನ ಬಳಕೆಗೆ 6 ರೂ. ನಿಂದ 6.30 ಪೈಸೆಗೆ ಏರಿಕೆ.
ಬೆಸ್ಕಾಂ ಹೊರತು ಪಡಿಸಿ ಉಳಿದ ಎಸ್ಕಾಂಗಳ ವ್ಯಾಪ್ತಿಯಲ್ಲಿ ಮೊದಲ 500 ಯೂನಿಟ್ಗೆ 4.75 ಪೈಸೆಯಿಂದ 4. 95 ಪೈಸೆಗೆ ಹೆಚ್ಚಳ. 501 ರಿಂದ 1000 ಯೂನಿಟ್ವರೆಗೆ 5.55ರಿಂದ 5.85 ಪೈಸೆಗೆ ಹೆಚ್ಚಳ. 1000 ಯೂನಿಟ್ ಮೇಲ್ಪಟ್ಟು 5.85ರಿಂದ 6.15 ಪೈಸೆಗೆ ಹೆಚ್ಚಳ.
ವಾಣಿಜ್ಯ ಬಳಕೆ
ವಾಣಿಜ್ಯ ಬಳಕೆಯ ವಿದ್ಯುತ್ ದರ ಪ್ರತಿ ಯೂನಿಟ್ಗೆ 20 ಪೈಸೆ ಹೆಚ್ಚಳ. ಮೊದಲ 50 ಯೂನಿಟ್ಗೆ 6.95 ರೂ. ನಿಂದ 7.15 ಪೈಸೆಗೆ ಏರಿಕೆ. 50 ಯೂನಿಟ್ ನಂತರದ ಬಳಕೆಗೆ 7.95 ರೂ. ನಿಂದ 8.15 ಪೈಸೆಗೆ ಹೆಚ್ಚಳ.
ವಾಣಿಜ್ಯ ಬಳಕೆ (ಗ್ರಾಮೀಣ ಪ್ರದೇಶ) : ಗ್ರಾಮಾಂತರ ಪ್ರದೇಶದ ವಾಣಿಜ್ಯ ಬಳಕೆಗೆ ಮೊದಲ 50 ಯೂನಿಟ್ಗೆ 6.45 ರೂ.ನಿಂದ 6.65 ಪೈಸೆಗೆ ಹೆಚ್ಚಳ. 50 ಯೂನಿಟ್ ನಂತರದ ಬಳಕೆಗೆ 7.45 ರೂ.ನಿಂದ 7.65 ಪೈಸೆಗೆ ಹೆಚ್ಚಳ.
* ಕುಡಿಯುವ ನೀರು ಸರಬರಾಜು, ಬೀದಿದೀಪ ಬಳಕೆಯ ವಿದ್ಯುತ್ ದರ ಪ್ರತಿ ಯೂನಿಟ್ಗೆ 50 ಪೈಸೆ ಹೆಚ್ಚಳ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications