ರಾಜ್ಯಾದ್ಯಂತ ಶೇ.6ರಷ್ಟು ವಿದ್ಯುತ್ ದರ ಹೆಚ್ಚಳ ಮಾಡಿದ ಕೆಇಆರ್ಸಿ
ಬೆಂಗಳೂರು, ಮೇ 14: ರಾಜ್ಯಾದ್ಯಂತ ಸೋಮವಾರದಿಂದ ವಿದ್ಯುತ್ ದರ ಹೆಚ್ಚಳಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.
ಕೆಇಆರ್ಸಿ ಅಧ್ಯಕ್ಷ ಶಂಕಲಿಂಗೇಗೌಡ ಮಾತನಾಡಿ, ಬೆಸ್ಕಾಂನಲ್ಲಿ ಶೇ.13, ಮೆಸ್ಕಾಂನಲ್ಲಿ ಶೇ.19, ಜೆಸ್ಕಾಂ ಶೇ.26, ಸೆಸ್ಕ್ ಶೇ 18ರಷ್ಟು ಹೆಚ್ಚಳ ಮಾಡಿದೆ. ಹಾಗೂ ಒಟ್ಟಾರೆ ರಾಜ್ಯಾದ್ಯಂತ ಶೇ.6ಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಸ್ಕಾಂನಲ್ಲಿ ಶೇ.13 ಅಂದರೆ 82 ಪೈಸೆ, ಮೆಸ್ಕಾಂನಲ್ಲಿ ಶೇ.19 ಅಂದರೆ 1.23, ಜೆಸ್ಕಾಂ ಶೇ.26 ಅಂದರೆ 1.62, ಹೆಸ್ಕಾಂ ಶೇ.19 ಅಂದರೆ 1.13, ಸೆಸ್ಕ್ ಶೇ 18ರಷ್ಟು ಅಂದರೆ 1.13ರೂ ಶುಲ್ಕ ಹೆಚ್ಚಳ ಮಾಡಿದೆ

ನಮ್ಮ ಮೆಟ್ರೋ ವಿದ್ಯುತ್ ದರದಲ್ಲಿ ಪ್ರತಿ ಯೂನಿಟ್ಗೆ ರಿಯಾಯಿತಿ ನೀಡಿ ಇಲ್ಲವಾದರೆ ಟಿಕೆಟ್ ಶುಲ್ಕವನ್ನು ಹೆಚ್ಚಿಸಬೇಕಾಗುತ್ತದೆ ಎಂದು ಮನವಿ ಮಾಡಿತ್ತು. ಹಾಗಾಗಿ ಬಿಎಂಆರ್ಸಿಎಲ್ಗೆ ಪ್ರತಿ ಯೂನಿಟ್ಗೆ 1 ರೂ. ಕಡಿಮೆ ಮಾಡಲಾಗಿದೆ.
ಇದರಿಂದಾಗಿ ಮೆಟ್ರೋ ಟಿಕೆಟ್ ಶುಲ್ಕ ಹೆಚ್ಚಳವಾಗುವ ಸಾಧ್ಯತೆಗಳು ಕಡಿಮೆಯಾದಂತಾಗಿದೆ. ಇನ್ನು ರಾಜ್ಯಾದ್ಯಂತ ರೈಲ್ವೆಗೆ ನೀಡುತ್ತಿದ್ದ ವಿದ್ಯುತ್ ದರದ ಶುಲ್ಕವನ್ನೂ ಕೂಡ 40 ಪೈಸೆಯಷ್ಟು ಕಡಿಮೆ ಮಾಡಲಾಗಿದೆ. ಪ್ರತಿ ಯೂನಿಟ್ಗೆ 6 ರೂ. ವಿಧಿಸಲಾಗುತ್ತದೆ.
ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡುವ ದೃಷ್ಟಿಯಿಂದ ಬೆಸ್ಕಾ ಚಾರ್ಜಿಂಗ್ ಸ್ಟೇಷನ್ಗಳನ್ನು ತೆರೆದಿದೆ. ಬೆಸ್ಕಾಂಗೆ ವಿಧಿಸುತ್ತಿದ್ದ ಶುಲ್ಕವನ್ನು 4.85 ಪೈಸೆ ಕಡಿಮೆ ಮಾಡಿದೆ.
ಇನ್ನುಮುಂದೆ ನಗರದಲ್ಲಿ ವಿದ್ಯುತ್ ಚಾರ್ಜಿಂಗ್ ಸ್ಟೇಷನ್ಗಳನ್ನು ತೆರೆಯುವುದಾದರೆ ಯಾವುದೇ ಪರವಾನಗಿ ಅಗತ್ಯವಿಲ್ಲ ಎಂದು ಶಂಕರಲಿಂಗೇಗೌಡ ಸ್ಪಷ್ಟ ಪಡಿಸಿದ್ದಾರೆ. ಪರಿಷ್ಕೃತ ದರವು ಏಪ್ರಿಲ್ 1ರಿಂದ ಅನ್ವಯವಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications