ಗೃಹ ಲಕ್ಷ್ಮೀ ಯೋಜನೆ: 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್' ಅಳವಡಿಕೆ ಸರ್ಕಾರ ಅಧಿಸೂಚನೆ
ಬೆಂಗಳೂರು, ಆಗಸ್ಟ್ 18: ರಾಜ್ಯ ಸರ್ಕಾರ ಜನರಿಗೆ ಗೃಹ ಲಕ್ಷ್ಮಿ ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಿದೆ. ಇದರ ಬೆನ್ನಲ್ಲೆ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ರಾಜ್ಯದ್ಯಂತ ಎಲ್ಲ ವರ್ಗದ ಗ್ರಾಹಕರಿಗೆ 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್' ಅಳವಡಿಸಲು ಕರಡು ನಿಯಮಗಳ ಅಧಿಸೂಚನೆ ಹೊರಡಿಸಿದೆ.

ಆಯೋಗದ ಈ ನಿಯಮವು ಎಸ್ಕಾಮ್ಗಳಿಗೆ ವಾರ್ಷಿಕ ಭದ್ರತಾ ಠೇವಣಿ (ESD) ಪಾವತಿಗೆ ಹೆಚ್ಚಿನ ಉಳಿತಾಯಕ್ಕೆ ದಾರಿ ಮಾಡಿಕೊಡಲಿದೆ ಎನ್ನಲಾಗುತ್ತಿದೆ. ಅದಷ್ಟೇ ಅಲ್ಲದೇ ಬಿಲ್ಲಿಂಗ್ ಸಮಯದಲ್ಲಿ ವಿದ್ಯುತ್ ಬಳಕೆಯನ್ನು ತಿದ್ದುವ ಪ್ರಯತ್ನಗಳನ್ನು ತಡೆಯಲಿದೆ. ಒಂದು ರೀತಿಯಲ್ಲಿ ಎಲೆಕ್ಟ್ರಿಕ್ ಮೀಟರ್ಗಳು ಮೊಬೈಲ್ ಫೋನ್ಗಳಿಗೆ ಪ್ರಿಪೇಯ್ಡ್ ಕರೆನ್ಸಿ ಯೋಜನೆ ರೀತಿಯಲ್ಲಿ ಕೆಲಸ ಮಾಡಲಿವೆ.
ಉದ್ದೇಶಿತ ಈ 'ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಗಳನ್ನು ಸ್ಮಾರ್ಟ್ಫೋನ್ಗಳಿಗೆ ಲಿಂಕ್ ಮಾಡಲಾಗಿದೆ ಮತ್ತು ಮಾಸಿಕ ಪವರ್ ಕೋಟಾ ಖಾಲಿಯಾದಾಗ ಗ್ರಾಹಕರು ಎಚ್ಚರಿಕೆ ಪಡೆಯಲಿದ್ದಾರೆ. ವಿದ್ಯುತ್ ಬಳಕೆಗಾಗಿ ರಿಚಾರ್ಜ್ ಸಹ ಮಾಡಬಹುದಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ವಿದ್ಯುತ್ ಪರಿಣಾಮಕಾರಿ ನಿರ್ವಹಣೆಗೆ ಸಹಾಯ
ಆಯೋಗುವ ಅಧಿಸೂಚನೆಯನ್ನು ಬುಧವಾರ ಹೊರಡಿಸಿದೆ. KERC ಈ ಅಧಿಸೂಚನೆಗೆ ಏನಾದರೂ ಆಕ್ಷೇಪಣೆಗಳು, ಸಲಹೆಗಳು ಇದ್ದಲ್ಲಿ 30 ದಿನಗಳಲ್ಲಿ ಸಲ್ಲಿಸುವಂತೆ ತಿಳಿಸಿದೆ. ಆಯೋಗದ ಈ ಕ್ರಮದಿಂದ ತಿಂಗಳ ವಿದ್ಯುತ್ ಬಳಕೆಯನ್ನು ಪರಿಣಾಮಕಾರಿ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ತಿಳಿದು ಬಂದಿದೆ.
ಎಸ್ಕಾಮ್ಗಳು 2 ಕೋಟಿಗೂ ಹೆಚ್ಚು ಗ್ರಾಹಕರಿಂದ ಠೇವಣಿ ಎಎಸ್ಡಿಯಾಗಿ 9,108 ಕೋಟಿ ರೂ.ಗಳನ್ನು ಸಂಗ್ರಹಿಸಿವೆ. ಪ್ರಿಪೇಯ್ಡ್ ಮೀಟರ್ ಹೊಂದಿರುವುದು ಗ್ರಾಹಕರ ಬಹುಕಾಲದ ಬೇಡಿಕೆ ಆಗಿತ್ತು. ಸದ್ಯ ಆಯೋಗವು ತಾತ್ಕಾಲಿಕ ಅಳವಡಿಕೆಗಳಲ್ಲಿ ಪ್ರಿಪೇಯ್ಡ್ ಮೀಟರ್ಗಳನ್ನು ಅಳವಡಿಸಲು ಆದೇಶಿಸಿದೆ. ಇದು ಸರ್ಕಾರಿ ಕಟ್ಟಡಗಳಲ್ಲಿ ಜಾರಿಗೆ ಬರಲಿದೆ.
2011 ರಲ್ಲಿ ಯೋಜನೆಯನ್ನು ಪ್ರಾಯೋಗಿಕ ನಡೆಸಲಾಗಿತ್ತು. ಗ್ರಾಹಕರು ಈ ಪ್ರಿಪೇಯ್ಡ್ ಮೀಟರ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಆಯೋಗ ತಿಳಿಸಿದೆ.
ವಿದ್ಯುತ್ ದುರ್ಬಳಕೆಗೆ ಬ್ರೇಕ್ ಸಾಧ್ಯತೆ
ಪ್ರಿಪೇಯ್ಡ್ ಮೀಟರ್ನ ಬೆಲೆ ಅದರ ಸಾಮರ್ಥ್ಯದ ಆಧಾರದ ಮೇಲೆ ನಿಗಿದಯಾಗಿರುತ್ತದೆ. ಅಂದರೆ ಆರಂಭಿಕ 6,000 ರೂಪಾಯಿಯಿಂದ 13,000 ರೂ.ವರೆಗೆ ಇರಲಿದೆ. ಇದು ದೇಶೀಯ, ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವರದಾನವಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಕಳ್ಳತನದಲ್ಲಿ ಎಷ್ಟು ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಉತ್ತರ ಬಂದಿಲ್ಲ ಎನ್ನಲಾಗಿದೆ. ಈ ಪ್ರಿಪೇಯ್ಡ್ ಮೀಟರ್ ಅಳವಡಿಕೆ ವಿದ್ಯುತ್ ದುರ್ಬಳಕೆಯನ್ನು ಸಹ ತಡೆಯುತ್ತದೆ. ಇನ್ನೂ ಈ ಮೀಟರ್ ಅನ್ನು ಗ್ರಾಹಕರ ಬಳಕೆ ಅನುಗುಣವಾಗಿ ಪ್ರೋಗ್ರಾಂ ಮಾಡಬಹುದಾಗಿದೆ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications