Electricity Connection: ಹೊಸ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಸಿಹಿಸುದ್ದಿ
ಬೆಂಗಳೂರು, ಏಪ್ರಿಲ್. 11: ಇದು ಬೇಸಿಗೆಯ ಸಮಯ. ಕಟ್ಟಡ, ಮನೆ ನಿರ್ಮಾಣ ಕಾಮಗಾರಿ ಅತಿ ಹೆಚ್ಚಾಗಿ ನಡೆಯುತ್ತವೆ. ಇದೇ ವೇಳು ತಮ್ಮ ನೂತನ ಕಟ್ಟಡ ಮತ್ತು ಮನೆಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕೊಡಿಸುವುದು ತುಂಬಾ ತ್ರಾಸದಾಯಕ ಕೆಲಸವಾಗಿತ್ತು. ಈಗ ಈ ಕಷ್ಟ ಇರೋದಿಲ್ಲ. ಕೇವಲ ಮೂರು ದಿನದಲ್ಲೇ ನಿಮ್ಮ ಮನೆಗೆ ಸಿಗಲಿದೆ ಸಂಪರ್ಕ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ಸಿ) ಇತ್ತೀಚೆಗೆ ಹೊರಡಿಸಿರುವ ಆದೇಶದಲ್ಲಿ ಗ್ರಾಹಕರಿಗೆ ವಿದ್ಯುತ್ ಪೂರೈಸಲು ನೀಡಲಾಗಿದ್ದ ಗರಿಷ್ಠ ಸಮಯವನ್ನು ಏಳರಿಂದ ಮೂರು ದಿನಗಳಿಗೆ ಕಡಿತಗೊಳಿಸಿದೆ. ತಮ್ಮ ಕಟ್ಟಡಗಳಿಗೆ ವಿದ್ಯುತ್ ಪಡೆಯಲು ಸವಾಲುಗಳನ್ನು ಎದುರಿಸುತ್ತಿದ್ದ ಹಲವಾರು ಗ್ರಾಹಕರಿಗೆ ಇದು ದೊಡ್ಡ ಪರಿಹಾರ ನೀಡಿದೆ.

ಈ ಆದೇಶವು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಗ್ರಾಹಕರ ಹಕ್ಕುಗಳು, ಕಾರ್ಯಕ್ಷಮತೆಯ ಗುಣಮಟ್ಟ (SoP) ಮತ್ತು ಸಂಬಂಧಿತ ವಿಷಯಗಳು) ನಿಯಮಗಳು, 2022ಕ್ಕೆ ಬದಲಾವಣೆ ಮಾಡಿ ಹೊರಡಿಸಲಾಗಿದೆ. ಕಾಯ್ದೆಗೆ ತಿದ್ದುಪಡಿಗಳನ್ನು ಸೂಚಿಸಿ, ಗ್ರಾಹಕರಿಗೆ ಉಪಯೋಗ ನೀಡುತ್ತದೆ.
ಗ್ರಾಹಕರಿಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು (ಎಸ್ಕಾಮ್ಗಳು) ಮೆಟ್ರೋ ನಗರಗಳಲ್ಲಿ ಅರ್ಜಿಯನ್ನು ಸ್ವೀಕರಿಸಿದ ಮೂರು ದಿನಗಳಲ್ಲಿ ಸಂಪರ್ಕ ನೀಡಬೇಕಿದೆ. ಹಾಗೆಯೇ, ಇತರ ಪುರಸಭೆಯ ಪ್ರದೇಶಗಳಲ್ಲಿ ಏಳು ದಿನಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 15 ದಿನಗಳಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.
"ಇದಲ್ಲದೆ, ವಿದ್ಯುತ್ ಸರಬರಾಜಿಗೆ ವಿತರಣಾ ಮುಖ್ಯ ವಿಸ್ತರಣೆ ಅಥವಾ ಹೊಸ ಸಬ್ಸ್ಟೇಷನ್ಗಳ ಕಾರ್ಯಾರಂಭದ ಅಗತ್ಯವಿದ್ದರೆ, ವಿತರಣಾ ಪರವಾನಗಿದಾರರು ಅಂತಹ ಸ್ಥಳಗಳಲ್ಲಿ 90 ದಿನಗಳನ್ನು ಮೀರದೆ ಅವಧಿಯೊಳಗೆ ಅಂತಹ ವಿಸ್ತರಣೆ ಅಥವಾ ಕಾರ್ಯಾರಂಭ ಮಾಡಬೇಕು. ನಂತರ ತಕ್ಷಣವೇ ವಿದ್ಯುತ್ ಸರಬರಾಜು ಮಾಡುತ್ತಾರೆ" ಎಂದು ಆದೇಶದಲ್ಲಿ ಸೂಚಿಸಿದೆ.

ವಿದ್ಯುತ್ ಸರಬರಾಜನ್ನು ಒದಗಿಸುವ ಗರಿಷ್ಠ ಅವಧಿಯ ಕಡಿತವನ್ನು ವಿದ್ಯುತ್ ಸಚಿವಾಲಯದ ನಿರ್ದೇಶನದ ಮೇರೆಗೆ ಮಾಡಲಾಗಿದೆ. ಈ ನಿರ್ಧಾರವು ಫೆಬ್ರವರಿ 22, 2024 ರಂದು ಹೊರಡಿಸಲಾದ ಅಧಿಸೂಚನೆಯನ್ನು ಅನುಸರಿಸಿ, ವಿದ್ಯುತ್ (ಗ್ರಾಹಕರ ಹಕ್ಕುಗಳು) ನಿಯಮಗಳು, 2020 ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರ ಅನ್ವರ ವಿದ್ಯತ್ ಸಂಪರ್ಕ ಕಲ್ಪಿಸುವ ಗರಿಷ್ಠ ಅವಧಿಯನ್ನು ಮೂರು ದಿನಕ್ಕೆ ಇಳಿಸಿದೆ.
ಇನ್ನು, ಇಲ್ಲಿಯವರೆಗೆ, ಕೆಇಆರ್ಸಿ ನಿಯಮಗಳು, ವಿದ್ಯುತ್ ಪೂರೈಕೆಗೆ ಸಂಬಂಧಿಸಿದ ಗ್ರಾಹಕರ ಹಕ್ಕುಗಳು, ಕಾರ್ಯಕ್ಷಮತೆಯ ಗುಣಮಟ್ಟ ಮತ್ತು ಸಂಬಂಧಿತ ವಿಷಯಗಳ ನಿಯಮಗಳು, 2022ರ ಪ್ರಕಾರ ಮೆಟ್ರೋ ನಗರಗಳಲ್ಲಿ ಏಳು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿತ್ತು.
ಇನ್ನುಳಿದ ಪುರಸಭೆ ವ್ಯಾಪ್ತಿಯಲ್ಲಿ 15 ದಿನ, ಗ್ರಾಮೀಣ ಪ್ರದೇಶದಲ್ಲಿ 30 ದಿನಗಳ ಒಳಗೆ ವಿದ್ಯುತ್ ಪೂರೈಕೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಕೇಂದ್ರ ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಇದು ವಿದ್ಯುತದ ಸಂಪರ್ಕ ಪಡೆಯುವ ಹಲವು ಗ್ರಾಹಕರಿಗೆ ಉಪಯೋಗವಾಗಲಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ










Click it and Unblock the Notifications