ಡಬ್ಬಿಂಗ್ ವಿರೋಧಿ ಕೆಎಫ್ ಸಿಸಿಗೆ ತೀವ್ರ ಮುಖಭಂಗ
ಪರಭಾಷೆ ಸಿನಿಮಾಗಳ ಡಬ್ಬಿಂಗ್ ಗೆ ವಿರೋಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ಸ್ಪರ್ಧಾತ್ಮಕ ಮೇಲ್ಮನವಿ ನ್ಯಾಯಮಂಡಳಿ(Competition Appellate Tribunal) ಅರ್ಜಿಯನ್ನು ವಜಾ ಗೊಳಿಸಿದೆ.
ಬೆಂಗಳೂರು, ಏಪ್ರಿಲ್ 13: ಡಬ್ಬಿಂಗ್ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(KFCC)ಗೆ ತೀವ್ರ ಹಿನ್ನೆಡೆ ಉಂಟಾಗಿದೆ.
ಪರಭಾಷೆ ಸಿನಿಮಾಗಳ ಡಬ್ಬಿಂಗ್ ಗೆ ವಿರೋಧಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ಸ್ಪರ್ಧಾತ್ಮಕ ಮೇಲ್ಮನವಿ ನ್ಯಾಯಮಂಡಳಿ(Competition Appellate Tribunal) ಅರ್ಜಿಯನ್ನು ವಜಾ ಗೊಳಿಸಿದೆ.
ಕನ್ನಡಿಗರು ಎಲ್ಲಾ ರೀತಿಯ ಮನರಂಜನೆಯನ್ನು ಕನ್ನಡದಲ್ಲೇ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಕನ್ನಡ ಗ್ರಾಹಕರ ಕೂಟ ಕನ್ನಡದಲ್ಲಿ ಡಬ್ಬಿಂಗ್ ಬರಬೇಕು ಎಂಬ ನಿಲುವನ್ನು ಹೊಂದಿದೆ.

ಇದೇ ನಿಟ್ಟಿನಲ್ಲಿ ಕನ್ನಡ ಗ್ರಾಹಕ ಕೂಟದ ವತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಇನ್ನಿತರೇ ಕನ್ನಡ ಚಲನಚಿತ್ರಕ್ಕೆ ಸಂಬಂಧಿಸಿದ ಸಂಘ ಸಂಸ್ಥೆಗಳು ಜೊತೆಯಾಗಿ ಡಬ್ಬಿಂಗ್ ಮೇಲೆ ವಿಧಿಸಿದ್ದ ಕಾನೂನುಬಾಹಿರ ನಿಷೇಧವು ತೆರವಾಗಬೇಕೆಂದು 2012 ರಲ್ಲಿ ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ (CCI) ದೂರನ್ನು ನೀಡಲಾಗಿತ್ತು.
CCI ಈ ದೂರಿನ ಬಗ್ಗೆ ವಿಚಾರಣೆ ನಡೆಸಿ, 2015 ರ ಜುಲೈ ನಲ್ಲಿ ಡಬ್ಬಿಂಗ್ ಮೇಲಿನ ನಿಷೇಧವನ್ನು ಅಸಿಂಧುಗೊಳಿಸಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು 2015 ರಲ್ಲಿ ತನ್ನ ವಿರುದ್ದ ನೀಡಿದ ತೀರ್ಪುನ್ನು ಸ್ಪರ್ಧಾತ್ಮಕ ಮೇಲ್ಮನವಿ ನ್ಯಾಯಮಂಡಳಿಯಲ್ಲಿ (Competition Appellate Tribunal) ಪ್ರಶ್ನಿಸಿತ್ತು.
ಆದೇಶದ ಪೂರ್ಣ ಪ್ರತಿ ಡೌನ್ ಲೋಡ್ ಮಾಡಿಕೊಳ್ಳಿ:
ಇದೀಗ ಮೇಲ್ಮನವಿ ನ್ಯಾಯಮಂಡಳಿ ಕೂಡ 2015 ರಲ್ಲಿ CCI ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ. ಇದರ ಮೂಲಕ ಕನ್ನಡದಲ್ಲಿ ಡಬ್ಬಿಂಗ್ ಮೇಲಿದ್ದ ಕಾನೂನುಬಾಹಿರವಾದ ನಿಷೇಧವು ಕೊನೆಯಾಗಬೇಕು ಎಂದು ಕನ್ನಡ ಗ್ರಾಹಕರ ಕೂಟ ನಡೆಸಿದ್ದ ಹೋರಾಟಕ್ಕೆ ಮನ್ನಣೆ ದೊರೆತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್
Download











Click it and Unblock the Notifications