ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಕೆ.ಜಿ.ಬೋಪಯ್ಯ ಹೆಸರು ಅಂತಿಮ
ಬೆಂಗಳೂರು, ಜುಲೈ 29 : ವಿರಾಜಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಕೆ. ಜಿ. ಬೋಪಯ್ಯ ಅವರ ಹೆಸರನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ. ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಿದ್ದಾರೆ. ಹೊಸ ಸ್ಪೀಕರ್ ಯಾರು? ಎಂಬ ಪ್ರಶ್ನೆ ಎದುರಾಗಿತ್ತು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸ್ಪೀಕರ್ ಆಗಿ ಆಯ್ಕೆಯಾಗಿದ್ದ ರಮೇಶ್ ಕುಮಾರ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಹೊಸ ಸ್ಪೀಕರ್ ಯಾರು? ಎಂಬ ಪ್ರಶ್ನೆ ಎದುರಾಗಿತ್ತು.

ಜುಲೈ 31ರ ಬುಧವಾರ ನೂತನ ಸ್ಪೀಕರ್ ಆಯ್ಕೆ ಮಾಡಲು ದಿನಾಂಕ ನಿಗದಿ ಮಾಡಲಾಗಿದೆ. ಜುಲೈ 30ರ ಮಧ್ಯಾಹ್ನ 12 ಗಂಟೆ ತನಕ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಬಿಜೆಪಿ ಕೆ. ಜಿ. ಬೋಪಯ್ಯ ಹೆಸರನ್ನು ಅಂತಿಮಗೊಳಿಸಿದ್ದು, ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್ ಮತ್ತು ಕೆ. ಜಿ. ಬೋಪಯ್ಯ ಅವರ ಹೆಸರು ಕೇಳಿ ಬಂದಿತ್ತು. ಬಿಜೆಪಿ ನಾಯಕರು ಸಭೆ ನಡೆಸಿ, ಕೆ. ಜಿ. ಬೋಪಯ್ಯ ಹೆಸರನ್ನು ಅಂತಿಮಗೊಳಿಸಿದ್ದಾರೆ.
4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ. ಜಿ. ಬೋಪಯ್ಯ 2009 ರಿಂದ 2013ರ ತನಕ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಆಯ್ಕೆ ಮಾಡಲಾಗುತ್ತದೆ.












Click it and Unblock the Notifications