KGF ಹಾಡು ಬಳಕೆ: ರಾಹುಲ್ ಗಾಂಧಿ ಸೇರಿ 3 ಕೈ ನಾಯಕರ ವಿರುದ್ಧ ಎಫ್ಐರ್ಗೆ ತಡೆ: HC
ಬೆಂಗಳೂರು, ಡಿಸೆಂಬರ್ 16: ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಆಗಿದೆ ಎಂಬ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಲವು ನಾಯಕರಿಗೆ ರಿಲೀಫ್ ನೀಡಿದೆ.
ಎಂಆರ್ಟಿ ಮ್ಯೂಸಿಕ್ ಸಂಸ್ಥೆಯು ಕಾಂಗ್ರೆಸ್ ನಾಯಕರ ವಿರುದ್ಧ ಭಾರತ್ ಜೋಡೋ ಯಾತ್ರೆಯಲ್ಲಿ ಕೆಜಿಎಫ್-2 ಕನ್ನಡ ಚಿತ್ರದ ಸಂಗೀತ ಬಳಕೆ ಆಗಿದೆ ಎಂದು ಕೃತಿಸ್ವಾಮ್ಯ (ಕಾಪಿರೈಟ್) ಕಾಯ್ದೆಯಡಿ ಎಫ್ಐಆರ್ ದಾಖಲಿಸಿತ್ತು. ಈ ಎಫ್ಐಆರ್ ರದ್ದುಪಡಿಸಲು ಕೋರಿದ್ದ ಅರ್ಜಿಯನ್ನು ಶುಕ್ರವಾರ ನ್ಯಾಯಪೀಠ ವಿಚಾರಣೆ ನಡೆಸಿತು. ಕಾಂಗ್ರೆಸ್ ಪರವಾಗಿ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ವಾದ ಮಂಡಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರೀನಾಥೆ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂವರು ನಾಯಕರ ವಿರುದ್ಧ ಕ್ರಿಮಿನಲ್ ಪ್ರಕ್ರಿಯೆಗೆ ಮುಂದಾಗದಂತೆ ನ್ಯಾ. ಸುನೀಲ್ ದತ್ ಅವರಿದ್ದ ಏಕಸದಸ್ಯ ಪೀಠವು ಮಧ್ಯಂತರ ತಡೆ ಆದೇಶ ನೀಡಿತು.
ರಾಹುಲ್ ಗಾಂಧಿ ಖುದ್ದು ಹಾಡು ಬಳಸಿಲ್ಲ
ಕಾಂಗ್ರೆಸ್ನ ರಾಹುಲ್ ಪರ ವಾದ ಮಂಡಿಸಿದ ಎ.ಎಸ್. ಪೊನ್ನಣ್ಣ, ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಲ್ಲಿ ರಾಹುಲ್ ಗಾಂಧಿ ಅವರನ್ನು ಕೆಜಿಎಫ್ 2 ಚಿತ್ರದ ಸಂಗೀತವನ್ನು ಬಳಸಿ ತೋರಿಸಲಾಗಿತ್ತು. ಇದಕ್ಕಾಗಿ ರಾಹುಲ್, ಜೈರಾಮ್ ರಮೇಶ್ ಮತ್ತು ಸುಪ್ರಿಯಾ ಶ್ರಿನೇಟ್ ವಿರುದ್ಧ ಕೃತಿಸ್ವಾಮ್ಯ ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಜಿಎಫ್ 2 ಚಿತ್ರದ ಸಂಗೀತವನ್ನು ರಾಹುಲ್ ಗಾಂಧಿ ಅವರು ಖುದ್ದು ಬಳಸಿಲ್ಲ. ರಾಹುಲ್ ಗಾಂಧಿ ಕಾಪಿರೈಟ್ ಕಾಯ್ದೆಯನ್ನು ಉಲ್ಲಂಘಿಸಿಲ್ಲ. ಕಾಂಗ್ರೆಸ್ನ ಅಧಿಕೃತ ವಿಡಿಯೋಗೆ ತುಂಡರಿಸಿದ ಮ್ಯೂಸಿಕ್ ಹಾಕಲಾಗಿದೆ. ಮ್ಯೂಸಿಕ್ ಬಳಕೆ ಹಿಂದೆ ದುರುದ್ದೇಶವಿಲ್ಲ ಕಾಂಗ್ರೆಸ್ ಪರ ಎ.ಎಸ್. ಪೊನ್ನಣ್ಣ ಸಮರ್ಥ ವಾದ ಮಂಡಿಸಿದರು.
ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮಸುಂದರ್ ಎಂ.ಎಸ್ ಅವರು, ಅರ್ಜಿಯ ವಿಚಾರಣೆಗೆ ಯಾವುದೇ ತುರ್ತಿನ ಅಗತ್ಯವಿಲ್ಲ. ಚಳಿಗಾಲ ರಜೆಯ ನಂತರ ನಡೆಸುವಂತೆ ಕೋರಿದರು. ಭಾರತ್ ಜೋಡೋ ಯಾತ್ರೆಯಲ್ಲಿ ವೈಭವೀಕರಿಸಲು ಸಂಗೀತ ಬಳಸಿರುವುದು ಕಂಡುಬಂದಿದೆ.
ಇದರಿಂದ ಕೃತಿಸ್ವಾಮ್ಯ ಕಾಯಿದೆಯ ಸೆಕ್ಷನ್ 63 ಉಲ್ಲಂಘನೆ ಆಗಿದ್ದು, 3 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅರ್ಹವಾಗಿದೆ. ಐಪಿಸಿ ನಿಬಂಧನೆಗಳ ಅನ್ವಯಕ್ಕೆ ಸಂಬಂಧಿಸಿದಂತೆ, ಕ್ರಿಮಿನಲ್ ಉದ್ದೇಶ ಅಥವಾ ಕ್ರಿಮಿನಲ್ ಪಿತೂರಿ ಇದೆಯೇ ಎಂಬುದು ತನಿಖೆಯ ಮೂಲಕ ಕಂಡು ಹಿಡಿಯಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದೆ. ವಾದವಿವಾದ ಆಲಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications