ಕೆಜಿಎಫ್ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್ ನಿರಾಣಿ
ಬೆಳಗಾವಿ,ಡಿಸೆಂಬರ್ 27: ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ದಿನಾಂಕ 28/04/ 2022 ರಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾಪವನ್ನು ಸಲ್ಲಿಸಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಮಂಗಳವಾರ ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್ ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು ಬಿಇಎಂಎಲ್ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.
ಕೆಜಿಎಫ್ನಲ್ಲಿನ 13 ಸಾವಿರ ಎಕರೆ ಜಮೀನನ್ನು ಚಿನ್ನದಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂತು ಎಂದು ಸಚಿವ ನಿರಾಣಿ ಹೇಳಿದರು.

ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರುವುದನ್ನು ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3500 ಎಕರೆಯನ್ನಷ್ಟೇ ಅಲ್ಲ ಪೂರ್ತಿಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು.
ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3500 ಎಕರೆ ಮಾತ್ರ ನೀಡಿ. ನಂತರ ಎರಡನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು.
ಬೆಮೆಲ್ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆ ಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications