Get Updates
Get notified of breaking news, exclusive insights, and must-see stories!

ಆಡಳಿತ ಸುಧಾರಣೆ ನೆಪದಲ್ಲಿ ಸಚಿವಾಲಯದ ನೌಕರರಿಗೆ ಅನ್ಯಾಯ: ಧರಣಿ ಎಚ್ಚರಿಕೆ!

ಬೆಂಗಳೂರು, ಸೆ. 01: ಆಡಳಿತದಲ್ಲಿ ಸುಧಾರಣೆ ತರುತ್ತೇವೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ ಎನ್ನುವ ಸರ್ಕಾರ ಮೊದಲು ಸಚಿವಾಲಯದ ನೌಕರರಿಗೆ ನ್ಯಾಯ ಒದಗಿಸಲಿ. ನಿವೃತ್ತರಾದವರನ್ನು ಪುನಃ ಅದೇ ಜಾಗಕ್ಕೆ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸುವುದನ್ನು ಬಿಡಲಿ ಎಂದು ಕರ್ನಾಟಕ ರಾಜ್ಯ ಸಚಿವಾಲಯದ ನೌಕರರ ಸಂಘ ಆಗ್ರಹಿಸಿದೆ.

ಸಚಿವಾಲಯದ ನೌಕರರ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು. ನೌಕರರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸದಿದ್ದಲ್ಲಿ ಸಚಿವಾಲಯದ ಕಚೇರಿಗಳನ್ನು ಬಂದ್ ಮಾಡಿ, ಪ್ರತಿಭಟಿಸುವ ಎಚ್ಚರಿಕೆಯನ್ನು ಸಂಘ ಕೊಟ್ಟಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, "ಸರ್ಕಾರ ಆಡಳಿತ ಸುಧಾರಣೆಯ ನೆಪದಲ್ಲಿ ಸಚಿವಾಲಯದಲ್ಲಿ ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸಿ ಅನ್ಯಾಯ ಮಾಡುತ್ತಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸದೆಯೇ ಸಚಿವಾಲಯದ ನೌಕರರು ತಹಶೀಲ್ದಾರರಾಗುವ ಸೇವೆಯನ್ನು ತಪ್ಪಿಸಿದೆ. ಕೆಲವು ಸಚಿವರು ಹಾಗೂ ಕೆಎಎಸ್ ಅಧಿಕಾರಿಗಳು ತಮ್ಮ ಆಪ್ತರನ್ನು ಹೊರಗುತ್ತಿಗೆ ಮೇಲೆ ನೇಮಿಸಿಕೊಳ್ಳುವ ಮೂಲಕ ಸಚಿವಾಲಯದಲ್ಲಿ ಕೆಲವರು ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.

ನಿವೃತ್ತರ ನೇಮಕಾತಿಗೆ ವಿರೋಧ!

ನಿವೃತ್ತರ ನೇಮಕಾತಿಗೆ ವಿರೋಧ!

ಸಚಿವಾಲಯದಲ್ಲಿ ನಿವೃತ್ತರಾದವರನ್ನೇ ಮತ್ತೆ ಪುನಃ ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳುವ ಮೂಲಕ ಬಹುತೇಕರಿಗೆ ಸರ್ಕಾರಿ ನೌಕರಿ ಸಿಗುವ ಅವಕಾಶವನ್ನು ಕಸಿದುಕೊಳ್ಳುತ್ತಿದ್ದಾರೆ. ಅನಾವಶ್ಯಕ ವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ ಎನ್ನುವ ಸರ್ಕಾರ ಮೊದಲು ನಿವೃತ್ತರಾದವರನ್ನು ಪುನಃ ನೇಮಿಸಿಕೊಳ್ಳುವುದನ್ನು ಬಿಡಲಿ. ಅದರ ಬದಲಿಗೆ ಒಂದಿಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕೊಡಲಿ ಎಂದು ಗುರುಸ್ವಾಮಿ ಅವರು ಆಗ್ರಹಿಸಿದ್ದಾರೆ.

ಆಡಳಿತ ಸುಧಾರಣೆ ನೆಪದಲ್ಲಿ ಹುದ್ದೆಗಳ ಕಡಿತ

ಆಡಳಿತ ಸುಧಾರಣೆ ನೆಪದಲ್ಲಿ ಹುದ್ದೆಗಳ ಕಡಿತ

ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಮಾತನಾಡಿ, "ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು. ಆಡಳಿತ ಸುಧಾರಣೆ ಹೆಸರಿನಲ್ಲಿ ಸಚಿವಾಲಯದ ಯಾವುದೇ ಇಲಾಖೆ, ಹುದ್ದೆಗಳಿಗೆ ಕಡಿತ ಹಾಕಬಾರದು. ತಾಂತ್ರಿಕವಾಗಿ ಸಮಸ್ಯೆ ಪರಿಹರಿಸಿ ನೈಜತೆಯನ್ನು ಅರಿತು ಆಡಳಿತಾತ್ಮಕ ಸುಧಾರಣೆ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಿ. ಸಚಿವಾಲಯದ ವೃಂದ ಮತ್ತು ನೇಮಕಾತಿ ನಿಯಮಗಳನ್ನುಉಲ್ಲಂಘಿಸಿ ಸಚಿವಾಲಯದ ಇತರೆ ಇಲಾಖೆಗಳ ಕೇಡರ್ ಹುದ್ದೆಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಗಮನಕ್ಕೆ ತರದೆ ನೇಮಕ ಮಾಡಕೊಳ್ಳುವುದರ ಜೊತೆಗೆ ನೇರವಾಗಿ ಆರ್ಥಿಕ ಇಲಾಖೆಯಿಂದ ಒಪ್ಪಿಗೆಯನ್ನೂ ಸಹ ಪಡೆಯುತ್ತಿರುವುದು ಕಾನೂನು ಬಾಹಿರ ಎಂದು ಖಂಡಿಸಿದ್ದಾರೆ.

ಆಡಳಿತಕ್ಕೆ ತೊಂದರೆ ಮಾಡುವ ಆದೇಶ!

ಆಡಳಿತಕ್ಕೆ ತೊಂದರೆ ಮಾಡುವ ಆದೇಶ!

ಕರ್ನಾಟಕ ಸರ್ಕಾರದ ಸಚಿವಾಲಯದ ಸುಮಾರು 34 ಇಲಾಖೆಗಳು ಕೇಂದ್ರೀಕೃತ ವ್ಯವಸ್ಥೆಯಡಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೂ ಕೆಲವು ಇಲಾಖೆಯ ವಿಭಾಗಗಳನ್ನು ಸಚಿವಾಲಯದ ಸುತ್ತಲಿನ ವಾತಾವರಣದಿಂದ ಬಹುದೂರ ಕೊಂಡೊಯ್ಯುವ ಆದೇಶಗಳನ್ನು ಹೊರಡಿಸಲಾಗಿದೆ. ಅದರಿಂದ ಆಡಳಿತಕ್ಕೆ ತೊಂದರೆ ಆಗಲಿದೆ. ಹೀಗಾಗಿ ಸಚಿವಾಲಯದ ಎಲ್ಲಾ ಇಲಾಖೆಗಳನ್ನು ಒಂದೆಡೆ ತರಬೇಕೆಂದು ಸಂಘ ಆಗ್ರಹಿಸಿದೆ.

ಸೆ.2 ರಂದು ಬಹುಮಹಡಿಗಳ ಕಟ್ಟಡದ ಎದುರು ಧರಣಿ

ಸೆ.2 ರಂದು ಬಹುಮಹಡಿಗಳ ಕಟ್ಟಡದ ಎದುರು ಧರಣಿ

ವಿವಿಧ ಬೇಡಿಕೆಗಳಿಗಾಗಿ ಹಾಗೂ ಸರ್ಕಾರವನ್ನು ಎಚ್ಚರಿಸಲು ಆಚರಿಸಲು ಸೆ.2 ರಂದು ಬಹುಮಹಡಿಗಳ ಕಟ್ಟಡದ ಎದುರಿಗೆ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದು, ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಿ ನ್ಯಾಯ ಒದಗಿಸದೇ ಹೋದಲ್ಲಿ ಸಚಿವಾಲಯವನ್ನು ಮುಚ್ಚಬೇಕಾಗುತ್ತದೆ ಎಂದು ಸಚಿವಾಲಯ ನೌಕರರ ಸಂಘ ಎಚ್ಚರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಬಿ.ಆರ್.ಕುಮಾರಸ್ವಾಮಿ, ಹರ್ಷಾ, ಮಂಜುಳ, ಮಾರುತಿ, ವಿದ್ಯಾಶ್ರೀ, ಕೆ.ಟಿ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+