Mallikarjuna Kharge: ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಕಮಾಲ್: ಎಲ್ಲಾ ಐದು ಸ್ಥಾನಗಳು ಕಾಂಗ್ರೆಸ್ ಪಾಲು
ಕಲಬುರಗಿ ಜೂನ್ 5: ಲೋಕಸಭಾ ಚುನಾವಣೆಯ ಫಲಿತಾಂಶ ಕಳೆದ ದಿನ ಬಹಿರಂಗವಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲ್ಯಾಣ ಕರ್ನಾಟಕದಲ್ಲಿ ಕಮಾಲ್ ಮಾಡಿದ್ದಾರೆ.
ರಾಜ್ಯದ ಈಶಾನ್ಯ ಭಾಗದಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಎಲ್ಲಾ ಐದು ಲೋಕಸಭಾ ಮತ ಕ್ಷೇತ್ರಗಳು ಕಾಂಗ್ರೆಸ್ ವಶವಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆನೆ ಬಲ ಬಂದಂತಾಗಿದೆ. ಕಲಬುರಗಿ ಸೇರದಂತೆ, ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ಬೀದರ್ ಲೋಕಸಭಾ ಕ್ಷೇತ್ರಗಳಲ್ಲಿ ಭಾರಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದ್ದರೂ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು ರಾಜಕೀಯವಾಗಿ ಗಮನ ಸೆಳೆದಿದೆ. ಈ ಗೆಲುವಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರದ್ದು ಸಿಂಹ ಪಾಲು ಇದೆ ಎನ್ನಲಾಗುತ್ತಿದೆ. ಅಲ್ಲದೆ ರಾಜ್ಯದ ದಕ್ಷಿಣ ಭಾಗ, ಕಿತ್ತೂರು ಕರ್ನಾಟಕ, ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಗೆ ಹೋಲಿಕೆ ಮಾಡಿದರೆ ಕಲ್ಯಾಣ ಕರ್ನಾಟಕದಲ್ಲಿ ಮಾತ್ರ ಎಲ್ಲಾ ಪಂಚ ಕ್ಷೇತ್ರಗಳು ಕೈವಶವಾಗುವುದರೊಂದಿಗೆ ಪಕ್ಷಕ್ಕೆ ದೊಡ್ಡ ಮಟ್ಟದ ಚೈತನ್ಯ ತಂದಿವೆ.
ಕಲ್ಯಾಣ ನಾಡಲ್ಲಿನ ಕಾಂಗ್ರೆಸ್ ಭರ್ಜರಿ ಜಯಕ್ಕೆ ಎಐಸಿಸಿ ಅಧ್ಯಕ್ಷರಾಗಿರುವ ಡಾ.ಮಲ್ಲಿಕಾರ್ಜುನ ಖರ್ಗೆಯವರ ವರ್ಷಸ್ಸೆ ಕಾರಣ ಎನ್ನಲಾಗುತ್ತಿದೆ. ಈ ಬಾರಿ ಕಲ್ಯಾಣದ ಎಲ್ಲಾ ಐದು ಕ್ಷೇತ್ರಗಳಲ್ಲಿನ ಟಿಕೆಟ್ ಹಂಚಿಕೆಯಲ್ಲಿ ಖರ್ಗೆಯವರೇ ಅಳೆದು ತೂಗಿ ಹೊಸಬರಿಗೆ ಕೈ ಹಿಡಿದು ಕಣಕ್ಕಿಳಿಸಿದ್ದರು. ಅವರ ರಾಜಕೀಯ ತಂತ್ರಗಾರಿಕೆ ಕಲ್ಯಾಣ ಕೈವಶವಾಗಿರುವುದರ ಹಿಂದಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.
ಬೀದರ್ನಲ್ಲಿ ಅತಿ ಚಿಕ್ಕ ವಯಸ್ಸಿನ ಸಾಗರ್ ಖಂಡ್ರೆಯನ್ನು ಕಣಕ್ಕೆ ಇಳಿಸಿರುವುದು, ರಾಯಚೂರಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಿ ಕುಮಾರ್ನಾಯಕ್ಗೆ ಮಣೆ ಹಾಕಿದ್ದು, ಕೊಪ್ಪಳದಲ್ಲಿನ ಬಿಜೆಪಿ ಗುಂಪುಗಾರಿಕೆಯ ಲಾಭ ಪಡೆಯಲು ಬಸವರಾಜ ಹಿಟ್ನಾಳ್ ಅವರನ್ನೇ ಕಣಕ್ಕಿಸಿ ಯಶಸ್ಸು ಕಂಡಿರೋದು, ತಮ್ಮ ಸೋಲಿನ ಸೇಡು ತೀರಿಸಿಕೊಳ್ಳಲು ಕಲಬುರಗಿ ಕಣದಲ್ಲಿ ತಾವು ನಿಲ್ಲದೆ ಅಳಿಯ ರಾಧಾಕೃಷ್ಣರನ್ನು ಅಖಾಡಕ್ಕಿಳಿಸಿದ್ದು, ಬೇರು ಮಟ್ಟದ ಕೆಲಸಗಾರ ಎಂದು ಗುರುತಿಸಿಕೊಂಡಿರುವ ಮಾಜಿ ಸಚಿವ ತುಕಾರಾಮ್ ಅವರಿಗೆ ಬಳ್ಳಾರಿಯಿಂದ ಟಿಕೆಟ್ ಕೊಟ್ಟು ಬಿಜೆಪಿಯ ರಾಮುಲುಗೆ ಸೆಡ್ಡು ಹೊಡೆದಿದ್ದು ಹೀಗೆ ಖರ್ಗೆಯವರು ಉರುಳಿಸಿದ ರಾಜಕೀಯ ದಾಳಗಳೆಲ್ಲವು ನಿಖರ ಗುರಿ ತಲುಪಿದೆ.
ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸಿದ ಬಹಿರಂಗ ರ್ಯಾಲಿಗಳನ್ನು ಪಾಲ್ಗೊಂಡ ಮುಖಂಡರು, ಖರ್ಗೆಯವರು ಅಭಿವೃದ್ಧಿ ಮಂತ್ರ ಜಪಿಸಿದರೆ ಹೊರತು ಉಳಿದ್ಯಾವ ಸಂಗತಿಗಳಿಗೂ ಮಹತ್ವ ನೀಡಿರಲಿಲ್ಲ. ಕಲ್ಯಾಣಕ್ಕೆ ಅಡಚಣೆ ಒಡ್ಡಿರುವ ಯುವಕರಲ್ಲಿನ ನಿರುದ್ಯೋಗ, ಮೂಲ ಸವಲತ್ತಿನ ಅಭಿವೃದ್ಧಿ ಬಗ್ಗೆಯೇ ಹೇಳಿದ್ದು ಜನಮನಕ್ಕೆ ನಾಟಿತು ಎನ್ನಲಾಗಿದೆ.
ಲೋಕಸಭಾ ಚುನಾವಣೆ ಫಲಿತಾಂಶ
543 ಲೋಕಸಭಾ ಸೀಟುಗಳ ಪೈಕಿ 291ರಲ್ಲಿ ಎನ್ಡಿಎ ಮುನ್ನಡೆ ಸಾಧಿಸಿದೆ. ಇದರಲ್ಲಿ ಬಿಜೆಪಿ ಮುನ್ನಡೆ ಗಳಿಸಿರುವ ಸ್ಥಾನಗಳ ಸಂಖ್ಯೆ 240 ಮಾತ್ರ. ಕರ್ನಾಟಕದ 28 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳಲ್ಲಿ ಬಿಜೆಪಿ, 9 ಕಾಂಗ್ರೆಸ್ ಹಾಗೂ 2 ಜೆಡಿಎಸ್ ಪಡೆದುಕೊಂಡಿದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications