ಕೆಎಚ್ಬಿ ಫ್ಲ್ಯಾಟ್ ಶೇ 2ರಷ್ಟು ರಿಯಾಯಿತಿ ದರದಲ್ಲಿ ಮಾರಾಟ
ಬೆಂಗಳೂರು, ಜನವರಿ 03 : ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಶೇ 2ರಷ್ಟು ರಿಯಾಯಿತಿ ದರದಲ್ಲಿ ಫ್ಲ್ಯಾಟ್ಗಳನ್ನು ಮಾರಾಟ ಮಾಡಲು ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 1178 ಫ್ಲ್ಯಾಟ್ ಮಾರಾಟವಾಗದೇ ಉಳಿದಿವೆ.
ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಕೆಎಚ್ಬಿ ನಿರ್ಮಾಣ ಮಾಡಿರುವ ವಸತಿ ಸಮುಚ್ಛಯಗಳಲ್ಲಿ ಫ್ಲ್ಯಾಟ್ಗಳು ಮಾರಾಟವಾಗದೇ ಉಳಿದಿವೆ. ಆದ್ದರಿಂದ, ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ' ಎಂದರು.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 1178 ಫ್ಲ್ಯಾಟ್ಗಳು ಮಾರಾಟವಾಗದೆ ಉಳಿದಿವೆ. ಇವುಗಳಲ್ಲಿ ಕೆಂಗೇರಿಯಲ್ಲಿ 70, ಡೈಮಂಡ್ ವಸತಿ ಸಂಕೀರ್ಣದಲ್ಲಿ 130 ಖಾಲಿ ಇವೆ. ರಾಜ್ಯದಲ್ಲಿ ಒಟ್ಟು 486 ಬಿಡಿ ಮನೆಗಳು, 4182 ನಿವೇಶನಗಳು ಮಾರಾಟವಾಗಿಲ್ಲ.

'ಬೆಂಗಳೂರಿನ ಸೂರ್ಯನಗರ, ಕಲಬುರಗಿಯಲ್ಲಿ ಹೌಸಿಂಗ್ ಕಾಂಪ್ಲೆಕ್ಸ್ ನಿರ್ಮಾಣ ಕಾರ್ಯ ಪಗ್ರತಿಯಲ್ಲಿದೆ. ಯಲ್ಲಾಪುರ-ಹಾವೇರಿಯ ದೇವಗಿರಿ, ಬಳ್ಳಾರಿಯ ಕೊಳಗಲ್ಲು, ಮುಂಡರಗಿಯ ಹಲಕುಂದಿಯಲ್ಲಿ 222 ಕೋಟಿ ಮೊತ್ತದಲ್ಲಿ 4789 ನಿವೇಶಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ' ಎಂದು ಸಚಿವರು ವಿವರಣೆ ನೀಡಿದರು.
'ಮುಂದಿನ 5 ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಸತಿ ರಹಿತರಿಗಾಗಿ 20 ಲಕ್ಷ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ವರ್ಷ 4 ಲಕ್ಷ ಮನೆಗಳನ್ನು ಕಟ್ಟಲಾಗುತ್ತಿದೆ' ಎಂದು ಎಂ.ಟಿ.ಬಿ.ನಾಗರಾಜ್ ಮಾಹಿತಿ ನೀಡಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications