KIADB: ರಾಜ್ಯದ ಕೈಗಾರೀಕರಣಕ್ಕಾಗಿ ಬರೋಬ್ಬರಿ 4100 ಎಕರೆ ಭೂಮಿ ಹಂಚಿಕೆ, ಉತ್ತರಕ್ಕೆ ಸಿಕ್ಕಿದ್ದೆಷ್ಟು?
ಬೆಂಗಳೂರು, ಆಗಸ್ಟ್ 08: ಕರ್ನಾಟಕ ರಾಜ್ಯ ಸರ್ಕಾರವು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯಾಭಿವೃದ್ಧಿ ಸಚಿವ ಎಂ. ಬಿ.ಪಾಟೀಲ್ ನೇತೃತ್ವದಲ್ಲಿ ರಾಜ್ಯ ಕೈಗಾರಿಕೆ ಅಭಿವೃದ್ಧಿ ಹೆಚ್ಚಿನ ಆದ್ಯತೆ ನೀಡುತ್ತಿದೆ. ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತಹ ಉದ್ದೇಶಿತ ಕೈಗಾರಿಕೆ ಯೋಜನೆಗಳು ಸಾಕಾರಗೊಳ್ಳಲು ಬರೋಬ್ಬರಿ 4,100 ಎಕರೆ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ಸಚಿವರು ಗುರುವಾರ ಮಾಹಿತಿ ನೀಡಿದ್ದಾರೆ.
ಈ ಕುರಿತು ಸಚಿವ ಎಂಬಿ ಪಾಟೀಲ್ ಅವರು ಗುರುವಾರ ಸಮಾಜಿಕ ಜಾಲತಾಣ (ಎಕ್ಸ್)ದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಕೈಗಾರಿಕರಣ ಕ್ಷೇತ್ರಕ್ಕೆ ಮತ್ತಷ್ಟು ವೇಗ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಸುಮಾರು 4,100 ಎಕರೆ ಭೂಮಿ ಹಂಚಿಕೆ ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕದ್ದು ಸಿಂಹಪಾಲು ಇದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗೆ 857.92 ಎಕರೆ ಭೂಮಿಯನ್ನು ಕೈಗಾರೀಕರಣಕ್ಕೆ ನೀಡಲಾಗಿದೆ. ಒಟ್ಟಾರೆ ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಕೈಗಾರಿಕೆ ಉದ್ದೇಶಗಳಿಗೆ ಬಳಸುವಂತೆ ಕೆಐಎಡಿಬಿಯು ಸುಮಾರು 2,045.40 ಎಕರೆ ಭೂಮಿ ನೀಡಿದೆ ಎಂದು ಅವರು ಖಚಿತಪಡಿಸಿದರು.
ಕೈಗಾರಿಕರಣದಲ್ಲಿ ಮಹತ್ವದ ಹೆಜ್ಜೆ ಇಟ್ಟ ಕರ್ನಾಟಕ
KIADB ಸುಮಾರು 4,108.94 ಎಕರೆ ಜಮೀನು ಹಂಚಿಕೆ ಮಾಡಿದ್ದರ ಕುರಿತು ಪಾರದರ್ಶಕತೆಯಿಂದ ಕೂಡಿದ ಅಧಿಸೂಚನೆ ಹೊರಡಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರಾಜ್ಯವು ಕೈಗಾರಿಕರಣದಲ್ಲಿ ಮಹತ್ವದ ಹೆಜ್ಜೆ ಇಡಲಿದೆ. ಈ ವಲಯದಲ್ಲಿ ಅತ್ಯಧಿಕ ಪ್ರಗತಿಯತ್ತ ಸಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಕೈಗಾರಿಕೆ ಸಚಿವರು ಜರ್ಮನಿ, ಜಪಾನ್ ಸೇರಿದಂತೆ ಕೆಲವು ದೇಶಗಳ ಪ್ರವಾಸ ಕೈಗೊಂಡಿದ್ದರು. ಅಲ್ಲಿ ವಾಹನಗಳ ಬಿಡಿಭಾಗ ತಯಾರಿಸುವ ಕಂಪನಿ ಹಾಗೂ ಇನ್ನಿತರ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಬಂಡವಾಳ ಆಕರ್ಷಿಸಿದ್ದಾರೆ. ವಿದೇಶಿ ಕಂಪನಿಗಳು ಬೆಂಗಳೂರ ಸೇರಿದಂತೆ ಕರ್ನಾಟಕದ ವಿವಿಧೆಡೆ ಬಂಡವಾಳ ಹೂಡಿಕೆಗೆ ಒಪ್ಪಿಗೆ ಪಡೆದುಕೊಂಡು ಬಂದಿದ್ದಾರೆ.
ಕಳೆದ ಜಪಾನ್ ಪ್ರವಾಸ ಬಳಿಕ ಅವರು ಬರೋಬ್ಬರಿ 25000 ಕೋಟಿ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗೆ ಹರಿದು ಬರಲಿರುವ ಬಂಡವಾಳ ಹೂಡಿಕೆಯು ರಾಜ್ಯದಲ್ಲಿ ಕೆಐಎಡಿಬಿ ನೀಡಿರುವ ಪ್ರದೇಶಗಳಲ್ಲಿ ಉದ್ದೇಶಿತ ಯೋಜನೆ ಅನುಷ್ಠಾನಕ್ಕೆ ತರುವ ಮೂಲಕ ಬಳಕೆ ಆಗಲಿದೆ ಎಂದು ತಿಳಿದು ಬಂದಿದೆ.
𝐊𝐚𝐫𝐧𝐚𝐭𝐚𝐤𝐚 𝐃𝐫𝐢𝐯𝐞𝐬 𝐈𝐧𝐝𝐮𝐬𝐭𝐫𝐢𝐚𝐥 𝐆𝐫𝐨𝐰𝐭𝐡 𝐁𝐞𝐲𝐨𝐧𝐝 𝐁𝐞𝐧𝐠𝐚𝐥𝐮𝐫𝐮
— M B Patil (@MBPatil) August 8, 2024
𝐊𝐈𝐀𝐃𝐁 𝐭𝐨 𝐀𝐥𝐥𝐨𝐭 𝐎𝐯𝐞𝐫 𝟒,𝟏𝟎𝟎 𝐀𝐜𝐫𝐞𝐬 𝐨𝐟 𝐋𝐚𝐧𝐝, 𝐈𝐧𝐜𝐥𝐮𝐝𝐢𝐧𝐠 𝟐,𝟎𝟒𝟓 𝐀𝐜𝐫𝐞𝐬 𝐢𝐧 𝐍𝐨𝐫𝐭𝐡 𝐊𝐚𝐫𝐧𝐚𝐭𝐚𝐤𝐚
Karnataka is accelerating… pic.twitter.com/RE3Ai5Z3CY
ಜಿಲ್ಲೆಯಲ್ಲಿ ಫುಡ್ ಹಬ್, ಕೈಗಾರಿಕಾ ಕಾರಿಡಾರ್
ಸದ್ಯ ರಾಜ್ಯ ಸರ್ಕಾರ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಬಳಿಕ ಮಿನಿ ಸಿಟಿ (KHIR) ನಿರ್ಮಿಸಲು ಮುಂದಾಗಿದ್ದು, ಆಗಸ್ಟ್ 23ರಂದು ಮೊದಲ ಹಂತದ ಯೋಜನೆಗೆ ಚಾಲನೆ ನೀಡಲಿದೆ. ಸ್ಕೈಡೆಕ್ ನಿರ್ಮಿಸುತ್ತಿದೆ. ವಿಜಯಪುರದಲ್ಲಿ ಫುಡ್ ಹಬ್ ಸ್ಥಾಪನೆಗೆ ಮುಂದಾಗಿದೆ.
ಇತ್ತೀಚೆಗೆ ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಸುತ್ತಮುತ್ತ ಬೃಹತ್ ಕೈಗಾರಿಕೆ ಕಾರಿಡಾರ್ ನಿರ್ಮಿಸಲು ಉದ್ದೇಶಿದೆ. ಈ ಕುರಿತು ಜಾಗದ ಅವಶ್ಯಕತೆ ಇದ್ದು, ಅದೀಗ ಸಿಕ್ಕಂತಾಗಿದೆ.
ಕರ್ನಾಟಕ ಸರ್ಕಾರ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ, ತುಮಕೂರು, ದೇವನಹಳ್ಳಿ, ಚಿಕ್ಕಬಳ್ಳಾಪುರ ಕಡೆಗಳಲ್ಲಿ ಕೈಗಾರಿಗಳು ತಲೆ ಎತ್ತಲಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications