ಕಿಚ್ಚ ಸುದೀಪ್ ಮನಮುಟ್ಟುವ ಕೆಲಸ: ಕ್ಯಾನ್ಸರ್ನಿಂದ ಬಳಲುತ್ತಿದ್ದ ಬಾಲಕಿಯ ಭೇಟಿ!
ಮಕ್ಕಳ ಮನಸ್ಸು ನಿಷ್ಕಲ್ಮಶ, ಹೀಗಾಗಿಯೇ ಮಕ್ಕಳ ಪ್ರೀತಿ ಕೂಡ ನಿಷ್ಕಲ್ಮಶವಾಗೇ ಇರುತ್ತೆ. ಅದರಲ್ಲೂ ಸಿನಿಮಾ ಸ್ಟಾರ್ಸ್ ಅಂದ್ರೆ ಮಕ್ಕಳಿಗೆ ತುಂಬಾ ಇಷ್ಟ. ಹೀಗೆ ತನ್ನಿಷ್ಟದ ಸ್ಟಾರ್ ತಾನು ಇರುವ ಆಸ್ಪತ್ರೆಗೆ ಬಂದರೆ ಹೇಗಿರಬೇಡ? ಹೌದು ಹೀಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದ ಬಾಲಕಿ ಭೇಟಿ ಮಾಡಿದ್ದಾರೆ ನಟ ಕಿಚ್ಚ ಸುದೀಪ್. ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಅಷ್ಟಕ್ಕೂ ಅಭಿಮಾನಿಗಳ ಬಾಯಲ್ಲಿ ಪ್ರೀತಿಯಿಂದ ಕಿಚ್ಚ ಎಂದು ಕರೆಸಿಕೊಳ್ಳುವ ಸುದೀಪ್ ಅವರು ತೆರೆ ಮುಂದೆ ಮಾತ್ರವಲ್ಲ, ತೆರೆ ಹಿಂದೆ ಕೂಡ ಸಮಾಜಮುಖಿ ಕೆಲಸ ಮಾಡುತ್ತಾ ಮಾದರಿಯಾಗಿದ್ದಾರೆ. ಇದೀಗ ತನ್ನ ಪುಟಾಣಿ ಅಭಿಮಾನಿಗೆ ಸರ್ಪ್ರೈಸ್ ಕೊಡುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ ಕೋಟ್ಯಂತರ ಅಭಿಮಾನಿಗಳು ಸುದೀಪ್ ಭೇಟಿಗೆ ಕಾಯುತ್ತಾರೆ. ಆದರೆ ಇಂದು ದಿಢೀರ್ ತನ್ನ ಅಭಿಮಾನಿ ಇರುವ ಆಸ್ಪತ್ರೆಗೆ ಭೇಟಿ ನೀಡಿದ್ದರು ಸುದೀಪ್ ಅವರು. ಅಲ್ಲದೆ ನಟ ಸುದೀಪ್ ದಿಢೀರ್ ಬಂದಿದ್ದನ್ನು ನೋಡಿದ ಪುಟಾಣಿ ಅಭಿಮಾನಿ ಕೂಡ ಫುಲ್ ಖುಷ್ ಆಗೋದ್ರು.

ಪುಟಾಣಿ ಅಭಿಮಾನಿಗೆ ಕಿಚ್ಚ ಸಲಾಂ!
ಹೌದು ಕ್ಯಾನ್ಸರ್ನಿಂದ ಬಳಲುತ್ತಿದ್ದ ಸಾಕ್ಷಿ ಎಂಬ ಬಾಲಕಿಯನ್ನ ನಟ ಕಿಚ್ಚ ಸುದೀಪ್ ಇಂದು ಭೇಟಿ ಮಾಡಿದ್ದಾರೆ. ಬಾಲಕಿ ಸಾಕ್ಷಿ ಅಪ್ಪಟ ಕಿಚ್ಚ ಸುದೀಪ್ರ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದ್ರೂ ತನ್ನ ನೆಚ್ಚಿನ ಸ್ಟಾರ್ ಭೇಟಿಯಾಗಬೇಕು ಎಂಬುದು ಈ ಬಾಲಕಿ ಸಾಕ್ಷಿಯ ಆಸೆ. ಬಾಲಕಿ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರಿಗೆ ಇಂದು ಸರ್ಪ್ರೈಸ್ ಕೊಟ್ಟಿದ್ದಾರೆ. ತಮ್ಮ ಶೂಟಿಂಗ್ ನಡುವೆ ಹಾಗೂ ಬ್ಯುಸಿ ಷೆಡ್ಯೂಲ್ ಮಧ್ಯೆ ಒಂದಷ್ಟು ಸಮಯ ಬಿಡುವು ಮಾಡಿಕೊಂಡು ಆಸ್ಪತ್ರೆಗೆ ತೆರಳಿ ಪುಟಾಣಿ ಅಭಿಮಾನಿ ಜೊತೆ ಸಮಯ ಕಳೆದಿದ್ದಾರೆ.
ಮಗುವಿಗೆ ಸುದೀಪ್ ಆತ್ಮಿಯ ಅಪ್ಪುಗೆ
ಅಂದಹಾಗೆ ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸಾಕ್ಷಿ ಎಂಬ ತಮ್ಮ ಬಾಲ ಅಭಿಮಾನಿಯನ್ನ ಕಿಚ್ಚ ಸುದೀಪ್ ಇಲ್ಲೇ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಹಾಗೇ ಆಟೋಗ್ರಾಫ್ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ. ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಅಂದ್ರೆ ಇಷ್ಟ. 'ರನ್ನ' ಸಿನಿಮಾದ ಥಿತಲಿ ಹಾಡು ತುಂಬಾನೆ ಇಷ್ಟ ಎಂದಿದ್ದಾರೆ. ಹೀಗೆ ನಟ ಸುದೀಪ್ ಅವರನ್ನ ನೋಡಿ, ಬಾಲಕಿ ಖಷಿಯಾದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಒಟ್ನಲ್ಲಿ ನೆಚ್ಚಿನ ನಟನ ಸಮಾಜಮುಖಿ ಕಾರ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಫ್ಯಾನ್ಸ್ ಘಟನೆ ಬಗ್ಗೆ ಭಾವುಕತೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಅಲ್ಲದೆ ನಟ ಸುದೀಪ್ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕಿಯ ಆರೋಗ್ಯ ವಿಚಾರಿಸಿದ ವಿಡಿಯೋ ಕೂಡ ಹಂಚಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಇದೇ ತಿಂಗಳು ಅಂದರೆ ಜುಲೈ 28ಕ್ಕೆ ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ರಿಲೀಸ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ಸುದೀಪ್ ಅವರ ಹೊಸ ಚಿತ್ರದ ಟೀಸರ್ ಕೂಡ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಈ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದರು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications