Kannada: ಕನ್ನಡಿಗರನ್ನು ಕೆಣಕಿದ ಫೋನ್ಪೇ ವಿರುದ್ಧ ಕಿಚ್ಚ ಸುದೀಪ್ ಸಮರ?
ಕನ್ನಡ & ಕನ್ನಡಿಗರನ್ನು ಕೆಣಕಿದರೆ ಏನ್ ಆಗುತ್ತೆ? ಅನ್ನೋದನ್ನ ಈಗ ಫೋನ್ಪೇ ಸಿಇಒ ಬಳಿ ಕೇಳಬೇಕು. ಯಾಕಂದ್ರೆ ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್ಪೇ ಸಂಸ್ಥೆ ಭಾರಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಹೀಗಿದ್ದಾಗಲೇ ನಟ ಕಿಚ್ಚ ಸುದೀಪ್ ಕೂಡ 'ಫೋನ್ಪೇ'ಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಹಾಗಾದರೆ, ಕನ್ನಡಿಗ ಕಿಚ್ಚ ಸುದೀಪ್ ಕೈಗೊಂಡಿರುವ ಆ ಕಠಿಣ ನಿರ್ಧಾರ ಏನು? ಮುಂದೆ ಓದಿ.
ಅಂದಹಾಗೆ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನ ಕಡ್ಡಾಯಗೊಳಿಸುವ ಬಗ್ಗೆ, ಕರ್ನಾಟಕ ಸರ್ಕಾರದ ಹೊಸ ಮಸೂದೆ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದರು ಫೋನ್ ಪೇ ಸಿಇಒ ಸಮೀರ್ ನಿಗಮ್. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಕಮೆಂಟ್ ಮಾಡಿದ ನಂತರ, ಸಂಚಲನ ಸೃಷ್ಟಿ ಆಗಿತ್ತು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನ ದೊಡ್ಡದಾಗಿ ಶುರುವಾಗಿದ್ದು ಕಿಚ್ಚ ಸುದೀಪ್ ಕೂಡ ಫೋನ್ ಪೇಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಅದು ಹೇಗೆ? ಮುಂದೆ ಓದಿ.

ಕನ್ನಡಿಗರ ಪರ ನಿಂತ ಕಿಚ್ಚ ಸುದೀಪ್!
ಅಷ್ಟಕ್ಕೂ 'ಫೋನ್ ಪೇ' ಇನ್ನು ಒಂದು ದಿನದ ಒಳಗೆ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು, ರಾಜ್ಯ ಸರ್ಕಾರದ ನಿಲುವಿಗೆ ಬದ್ದವಾಗಿ ಇರಬೇಕು. ಇಲ್ಲದೆ ಹೋದರೆ ತಾವು ಫೋನ್ ಪೇ ಬ್ರಾಂಡ್ನ ಅಂಬಾಸಡರ್ ಆಗಿ ಮುಂದುವರೆಯದೇ ಇರಲು ನಿರ್ಧರಿಸಿದ್ದಾರೆ, ನಟ ಕಿಚ್ಚ ಸುದೀಪ್ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಮತ್ತು ಇದೇ ವಿಚಾರವಾಗಿ ದೊಡ್ಡ ಮಟ್ಟದ ಚರ್ಚೆ ಕೂಡ ಈಗ ಶುರುವಾಗಿದ್ದು, ಕನ್ನಡ ನಾಡು & ನುಡಿ ವಿಚಾರದಲ್ಲಿ ಕಿಚ್ಚ ಸುದೀಪ್ ಅವರ ಈ ನಡೆ ಬಗ್ಗೆ ಸಿಕ್ಕಾಪಟ್ಟೆ ಬೆಂಬಲ ವ್ಯಕ್ತವಾಗುತ್ತಿದೆ.
ಫೋನ್ ಪೇ ಬ್ರಾಂಡ್ಗೆ ಕಿಚ್ಚ ಸುದೀಪ್ ಅವರು ರಾಯಭಾರಿ ಆಗಿದ್ದರು. ಆದರೆ ಈಗ ಇದೇ ಫೋನ್ ಪೇ ವಿರುದ್ಧ ಕನ್ನಡ ವಿರೋಧಿ ನೀತಿ ಆರೋಪ ಕೇಳಿಬಂದಿದೆ. ಈ ಕುರಿತು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಚರ್ಚೆ ನಡೆಯುತ್ತಿದ್ದು, ಕನ್ನಡಿಗರಿಗೆ ನಮ್ಮ ರಾಜ್ಯದಲ್ಲಿ ಮೀಸಲಾತಿ ಕೊಟ್ಟರೆ ನಿಮಗೇನು ಸಮಸ್ಯೆ? ಅಂತಾ ಕನ್ನಡಿಗರು ಪ್ರಶ್ನೆ ಕೇಳ್ತಿದ್ದಾರೆ.
ಕನ್ನಡಿಗರಿಂದ 'ಕಳಪೆ ರೇಟಿಂಗ್' ಸಮರ!
ಇದಿಷ್ಟೂ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ಫೋನ್ ಪೇ ಅಪ್ಲಿಕೇಷನ್ ವಿರುದ್ಧ ಸಮರ ಸಾರಿದ್ದಾರೆ ಕನ್ನಡಿಗರು. ಫೋನ್ ಪೇ ಅಪ್ಲಿಕೇಷನ್ ಅನ್ಇನ್ಸ್ಟಾಲ್ ಮಾಡುತ್ತಿದ್ದು, ಜೊತೆಗೆ ಗೂಗಲ್ ಪ್ಲೇ ಸ್ಟೋರ್ ಮೂಲಕ ಅತ್ಯಂತ ಕಳಪೆ ಎಂದು ಫೋನ್ ಪೇ ಅಪ್ಲಿಕೇಷನ್ಗೆ ರೇಟಿಂಗ್ ನೀಡುತ್ತಿದ್ದಾರೆ. 'ಫೋನ್ ಪೇ' ಅಪ್ಲಿಕೇಷನ್ಗೆ 5 ರೇಟಿಂಗ್ನಲ್ಲಿ ಬರೀ 1 ರೇಟಿಂಗ್ ನೀಡಿ, ಬುದ್ಧಿ ಕಲಿಸುತ್ತಿದ್ದಾರೆ. ಈ ತಕ್ಷಣಕ್ಕೆ ಫೋನ್ ಪೇ ಸಿಇಒ ಬುದ್ಧಿ ಕಲಿತು, ಕ್ಷಮೆ ಕೇಳದೇ ಹೋದರೆ ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗುವ ಸಾಧ್ಯತೆ ದಟ್ಟವಾಗಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications