ಕುತೂಹಲ ಕೆರಳಿಸಿದ ಕಿಚ್ಚ ಸುದೀಪ್, ಸಿಎಂ ಸಿದ್ದರಾಮಯ್ಯ ಭೇಟಿ
Recommended Video

ಬೆಂಗಳೂರು, ಏಪ್ರಿಲ್ 05: ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಅವರ ಕುಟುಂಬದೊಡನೆ ಊಟ ಮಾಡಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದ್ದ ನಟ ಕಿಚ್ಚ ಸುದೀಪ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮತ್ತಷ್ಟು ಕುತೂಹಲ ಹುಟ್ಟಿಸಿದ್ದಾರೆ!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಚುನಾವಣೆಯ ಹೊತ್ತಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಖುದ್ದಾಗಿ ಕಿಚ್ಚ ಸುದೀಪ್ ಭೇಟಿ ಮಾಡಿದ್ದು ಏಕೆ? ಕಿಚ್ಚ ಕಾಂಗ್ರೆಸ್ ಸೇರ್ತಾರಾ? ಅಥವಾ ಸ್ವತಃ ಮುಖ್ಯಮಂತ್ರಿಗಳೇ ಸುದೀಪ್ ಅವರನ್ನು ಆಹ್ವಾನಿಸಿದ್ದರಾ? ಕಾಂಗ್ರೆಸ್ ಪರ ಸುದೀಪ್ ಪ್ರಚಾರ ಮಾಡುತ್ತಾರಾ...? ಈ ಯಾವ ಪ್ರಶ್ನೆಗಳಿಗೂ ಉತ್ತರವಿಲ್ಲ.
ಕಿಚ್ಚ ಸುದೀಪ್ ಸಿಎಂ ಸಿದ್ಧರಾಮಯ್ಯ ಅವರನ್ನು ಬೇಟಿ ಮಾಡಿದ್ದು ಯಾಕೆ?

ಕೆಲವು ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಕೇವಲ ಏಪ್ರಿಲ್ 7 ರಿಂದ ಆರಂಭವಾಗಲಿರುವ KCC (ಕನ್ನಡ ಚಲನಚಿತ್ರ ಕಪ್)ಪಂದ್ಯದ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸುವುದಕ್ಕೆ. ಆದರೆ ಕರ್ನಾಟಕದಲ್ಲಿ ಮೇ.12 ರಂದು (ಮೇ.15 ಫಲಿತಾಂಶ) ಚುನಾವಣೆ ನಡೆಯಲಿರುವುದರಿಂದ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಮಾರಂಭದಲ್ಲಿ ಭಾಗವಿಸುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ 02 ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರನ್ನು ಸಹ ಸುದೀಪ್ ಭೇಟಿಯಾಗಿದ್ದರು. ಸುಮಾರು ಎರಡು ಗಂಟೆಗಳಲ ಕಾಲ ಎಚ್ಡಿಕೆ ಕುಟುಂಬದೊಡನೆ ಕಿಚ್ಚ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ಗುಸು ಗುಸು ಸೃಷ್ಟಿಸಿತ್ತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications