ಬಾಯ್ತಪ್ಪಿ ಹೇಳಿದೆ ಎನ್ನುವ ವಯಸಲ್ಲ, ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ-ಕಿಮ್ಮನೆ ರತ್ನಾಕರ್
ಬೆಂಗಳೂರು, ಆಗಸ್ಟ್ 03: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ವಿರುದ್ಧ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದು, ಗೃಹಚಿವರಾಗಿ, ಎಂಪಿಎಂ ಅಧ್ಯಕ್ಷರಾಗಿ ಮತ್ತು ಅನೇಕ ಜವಾಬ್ದಾರಿಯುತ ಸ್ಥಾನಗಳನ್ನು ಅರಗ ಜ್ಞಾನೇಂದ್ರ ಅವರು ನಿಭಾಯಿಸಿದ್ದಾರೆ. ಇಂತಹ ವ್ಯಕ್ತಿ ಬಾಯಿ ತಪ್ಪಿನಿಂದ ಹೇಳಿದೆ, ಕಣ್ತಪ್ಪಿನಿಂದ ಹೇಳಿದೆ ಎನ್ನುವ ವಯಸ್ಸು ಅಲ್ಲ ಜ್ಞಾನವೂ ಅಲ್ಲ ಎಂದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಯಾವುದೇ ನಾಯಕರು ಆರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ, ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ? ಮೋದಿಯವರು ಸಹ ಇದೇ ಮನಸ್ಥಿತಿ ಹೊಂದಿರುವವರೆ, ಏಕೆಂದರೆ ಅವರ ಸಂಪುಟದ ಅನೇಕ ಸದಸ್ಯರು ಈ ತರಹದ ಹೇಳಿಕೆ ನೀಡಿದಾಗಲೂ ಸುಮ್ಮನಿದ್ದರು ಎಂದರು.

ಅನಂತ್ ಕುಮಾರ್ ಹೆಗಡೆ ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಹೇಳಿಕೆಯಿಂದ ಹಿಡಿದು ಯತ್ನಾಳರ ತನಕ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆರಗ ಜ್ಞಾನೇಂದ್ರ ಅವರು ಕ್ಷಮೆ ಕೇಳಿ ಉಪಯೋಗವಿಲ್ಲ, ಅವರಿಂದ ರಾಜಿನಾಮೆ ಪಡೆಯಬೇಕು. ಖರ್ಗೆಯವರ ಹಾಗೂ ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವದರ ಜೊತೆಗೆ ಬಣ್ಣವೂ ಸೇರಿಕೊಂಡಿದೆ, ಇದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ ಎಂದು ಹೇಳಿದರು.
ಆರಗ ಜ್ಞಾನೇಂದ್ರ ನಾನು ಖರ್ಗೆಯವರ ಹೆಸರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಈ ಬಗ್ಗೆ ಸ್ಪೀಕರ್ಗೆ ದೂರು ಸಲ್ಲಿಸಲಾಗುವುದು, ಕೋರ್ಟಿಗೂ ಹೋಗಲಾಗುವುದು, ನಂದಿತಾ ಅವರ ಕೇಸಿನಲ್ಲೂ ಅತ್ಯಾಚಾರ ಎಂದು ಸುಳ್ಳು ಬಿಂಬಿಸಿದವರು ಆರಗ, ಪೊಲೀಸರನ್ನು ನಾಯಿಗಳು ಎಂದವರು, ಹೆಣ್ಣು ಮಕ್ಕಳು 7 ಗಂಟೆ ನಂತರ ಏಕೆ ಓಡಾಡಬೇಕು ಎಂದಂತಹ ವ್ಯಕ್ತಿ ಇವರು. ಖರ್ಗೆಯವರ ವಿಚಾರದಲ್ಲಿ ಕೇವಲ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ, ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್ ಪತ್ರಿಭಟನೆ ಹಾಗೂ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾತು ಮುಂದುವರಿಸಿದ ಕಿಮ್ಮನೆ ರತ್ನಾಕರ್ ಅವರು, ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಕಳಂಕ. ಕುವೆಂಪು ಅವರು, ಅನಂತಮೂರ್ತಿ, ಗೋಪಾಲಗೌಡರು, ಬದ್ರಿನಾರಾಯಣ್ ಅವರಂತಹ ಸಂಸದೀಯ ಪಟುಗಳು ಗೆದ್ದುಬಂದಂತಹ ಕ್ಷೇತ್ರ ಇಂತಹ ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ. ಕಸ್ತೂರಿ ರಂಗನ್ ವಿಚಾರಕ್ಕೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರೇ ಒಪ್ಪಿಗೆ ನೀಡಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಇದಕ್ಕೆ ವಿರೋಧ ಮಾಡಿತ್ತು. ತೀರ್ಥಹಳ್ಳಿಯ ಜನರನ್ನು ಮಂಗ ಮಾಡಲು ಇಲ್ಲಿ ವಿರೋಧ ಮಾಡುವುದು, ಕೇಂದ್ರದಲ್ಲಿ ಒಪ್ಪಿಗೆ ನೀಡುವ ಕಣ್ಣಾಮುಚ್ಚಲೆ ಆಡುತ್ತಿದೆ ಎಂದು ಆರೋಪಿಸಿದರು.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ










Click it and Unblock the Notifications