Kusum-C Scheme: ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕುಸುಮ್-ಸಿ ಸೋಲಾರ್ ಯೋಜನೆ ಜಾರಿ: ಸಂಪೂರ್ಣ ವಿವರ ಇಲ್ಲಿದೆ

ಬೆಂಗಳೂರು, ಜೂನ್‌ 10: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

KJ George gave a big update on the implementation of Kusum-C Solar Project

ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ ಎಂದು ಹೇಳಿದರು.

ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ

ಕುಸುಮ್ - ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ್ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರು.

ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ ಎಂದರು.

ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+