KKRTC: ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗಕ್ಕೆ ನೂತನ ಸಾರಿಗೆ ಆರಂಭ
ಕೊಪ್ಪಳ, ಮಾರ್ಚ್ 15: ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದಲ್ಲಿ ನೂತನ ಪ್ರತಿಷ್ಟಿತ ನಾನ್ ಎಸಿ ಸ್ಲೀಪರ್ ರಾತ್ರಿ ಸಾರಿಗೆಯನ್ನು ಪ್ರಾರಂಭಿಸಲಾಗಿದೆ.
ಬಸ್ ಕಾರ್ಯಾಚರಣೆ ವಿವರಗಳು
ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ನಾನ್ ಎಸಿ ಸ್ಲೀಪರ್ ವಾಹನವು ಕೊಪ್ಪಳದಿಂದ ರಾತ್ರಿ 20.30 ಗಂಟೆಗೆ ಹಾಗೂ ಗಂಗಾವತಿಯಿಂದ ಸಂಜೆ 4.15 ಮತ್ತು ರಾತ್ರಿ 21.45ಕ್ಕೆ ಹೊರಡಲಿವೆ. ಈ ವಾಹನಗಳು ಕಲಬುರಗಿಗೆ ಬೆಳಗ್ಗೆ 3.45ಕ್ಕೆ ಮತ್ತು ರಾತ್ರಿ 21.30ಕ್ಕೆ ತಲುಪಲಿವೆ. ಬೀದರ್ಗೆ 6.45ಕ್ಕೆ ತಲುಪಲಿದೆ.

ಇನ್ನು, ಕಲಬುರಗಿಯಿಂದ ರಾತ್ರಿ 22:00ಕ್ಕೆ ಮತ್ತು ಸಂಜೆ 4 ಗಂಟೆಗೆ ಹೊರಡಲಿರುವ ವಾಹನಗಳು ಗಂಗಾವತಿಗೆ ಬೆಳಗ್ಗೆ 4 ಗಂಟೆಗೆ ಮತ್ತು ರಾತ್ರಿ 21.30ಕ್ಕೆ ತಲುಪಲಿವೆ. ಬೀದರ್ನಿಂದ 18.30ಕ್ಕೆ ಹೊರಡಲಿರುವ ವಾಹನಗಳು ಕೊಪ್ಪಳಕ್ಕೆ 5.15ಕ್ಕೆ ತಲುಪಲಿದೆ.
ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದ ಸಾರಿಗೆಗೆ ಮುಂಗಡ ಟಿಕೇಟ್ ಬುಕ್ ಮಾಡಲು ಸಂಸ್ಥೆಯ ಅಧಿಕೃತ ವೆಬ್ಸೈಟ್ www.ksrtc.in ನಲ್ಲಿ ಬುಕ್ ಮಾಡಬಹುದು. ಜೊತೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾಗಳ ಮುಂಗಡ ಬುಕ್ಕಿಂಗ್ ಕೌಂಟರ್ಗಳಲ್ಲಿ ಮುಂಗಡ ಟಿಕೆಟ್ ಬುಕ್ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಈ ಸಾರಿಗೆ ಸೌಲಭ್ಯದ ಸದಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ-ಬೆಂಗಳೂರು ಮಾರ್ಗದ ಕಲ್ಯಾಣ ರಥ ಮಾರ್ಗ ಬದಲಾವಣೆ
ಇನ್ನು, ಕಲಬುರಗಿ - ಬೆಂಗಳೂರು ಮಾರ್ಗದ ಕಲ್ಯಾಣ ರಥ (ವೋಲ್ವೋ ಮಲ್ಟಿ ಎಕ್ಸೆಲ್ ಎ.ಸಿ ಸ್ಲೀಪರ್) ಸಾರಿಗೆ ಯಾದಗಿರ, ಶಕ್ತಿನಗರ, ರಾಯಚೂರು, ಮಂತ್ರಾಲಯ ಮಾರ್ಗದ ಮುಖಾಂತರ ಹೊರಡಲಿರುವ ಬಗ್ಗೆಯೂ ಪ್ರಯಾಣಿಕರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸೂಚನೆ ನೀಡಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲಬುರಗಿ - ಬೆಂಗಳೂರು ಯಾದಗಿರ, ಶಕ್ತಿನಗರ, ರಾಯಚೂರು, ಮಂತ್ರಾಲಯ ಮಾರ್ಗದ ಕಲ್ಯಾಣ ರಥ (ವೋಲ್ಲೋ ಮಲ್ಟಿ ಎಕ್ಸೆಲ್ ಎ.ಸಿ ಸ್ವೀಪರ್) ಸಾರಿಗೆಯನ್ನು ಕೃಷ್ಣಾ ನದಿ ಸೇತುವೆ ಕಾಮಗಾರಿ ಪ್ರಯುಕ್ತ ಸದರಿ ಸಾರಿಗೆ ಕಲಬುರಗಿ ಜೇವರ್ಗಿ, ಶಹಾಪೂರ, ದೇವದುರ್ಗ, ರಾಯಾಚೂರು, ಮಂತ್ರಾಲಯ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿತ್ತು.
ಆದರೆ ಕೃಷ್ಣಾ ನದಿ ಸೇತುವೆ ಕಾಮಗಾರಿ ಮುಕ್ತಾಯಗೊಂಡಿರುವ ಪ್ರಯುಕ್ತ ದಿನಾಂಕ. 12.03.2024 ರಿಂದಕಲಬುರಗಿ ಯಾದಗಿರಿ, ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಯಾದಗಿರಿ, ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಹೋಗುವ ಪ್ರಯಾಣಿಕರು ಕಲ್ಯಾಣ ರಥ (ವೋಲ್ಲೋ ಮಲ್ಟಿ ಎಕ್ಸೆಲ್ ಎ.ಸಿ ಸ್ವೀಪರ್) ಬಸ್ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಾರಿಗೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications