ಬಿಬಿಎಂಪಿ ಚುನಾವಣೆ ಬಳಿಕ ನಂದಿನಿ ಹಾಲಿನ ದರ ಏರಿಕೆ
ಬೆಂಗಳೂರು, ಆಗಸ್ಟ್ 13 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಂತರ ನಂದಿನಿ ಹಾಲಿನ ದರ ಹೆಚ್ಚಾಳವಾಗುವ ಸಾಧ್ಯತೆ ಇದೆ. ಕೆಎಂಎಫ್ ಮಾಡಿದ ತಪ್ಪಿಗೆ ಗ್ರಾಹಕರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ದೂರಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೇವಣ್ಣ ಅವರು, ಪಶು ಆಹಾರದ ಕಚ್ಚಾವಸ್ತು ಖರೀದಿಯಿಂದ ಆಗುತ್ತಿರುವ ನಷ್ಟವನ್ನು ತುಂಬಿಕೊಳ್ಳಲು ಹಾಲಿನ ದರ ಹಾಗೂ ಪಶು ಆಹಾರ ದರ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ ಎಂದು ಆರೋಪಿಸಿದರು. [ಕ್ಷೀರಭಾಗ್ಯ ಯೋಜನೆ 5 ದಿನಕ್ಕೆ ವಿಸ್ತರಣೆ]

ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಕಳೆದ 3 ತಿಂಗಳಿನಿಂದ ಕೆಎಂಎಫ್ನ ಐದು ಪಶು ಆಹಾರ ಉತ್ಪಾದನೆ ಘಟಕಗಳು 16.87 ಕೋಟಿ ರೂ. ನಷ್ಟ ಅನುಭವಿಸಿವೆ ಎಂದು ಚರ್ಚೆ ನಡೆಸಲಾಗಿದೆ. ಈ ನಷ್ಟ ತುಂಬಿಕೊಳ್ಳಲು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಹೇಳಿದರು. [ಬಿಬಿಎಂಪಿ ಚುನಾವಣಾ ವೇಳಾಪಟ್ಟಿ]
ಹಿಂದೆ ಪಶು ಆಹಾರಕ್ಕೆ ಬೇಕಾಗುವ ಕಚ್ಚಾವಸ್ತುವನ್ನು ಬೆಳೆ ಕಟಾವಿನ ಸಂದರ್ಭದಲ್ಲಿಯೇ ಖರೀದಿಸಿ ದಾಸ್ತಾನು ಮಾಡಲಾಗುತ್ತಿತ್ತು. ಈಗ ಕೆಎಂಎಫ್ ಆಡಳಿತದ ವೈಫಲ್ಯದಿಂದಾಗಿ ಅಗತ್ಯವಿದ್ದಾಗ ಕಚ್ಚಾವಸ್ತು ಖರೀದಿ ಮಾಡಲಾಗುತ್ತಿದ್ದು, ಇದರಿಂದ ನಷ್ಟ ಉಂಟಾಗುತ್ತಿದೆ ಎಂದು ತಿಳಿಸಿದರು. [ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆಯಿಲ್ಲ]
ಕಳೆದ ಮೂರು ತಿಂಗಳಲ್ಲಿ 16.87 ಕೋಟಿ ರೂ. ನಷ್ಟ ಉಂಟಾಗಿದೆ. ಇದನ್ನು ತಪ್ಪಿಸಲು ಈಗ ಹೆಚ್ಚುವರಿಯಾಗಿ ಪ್ರತಿ ಟನ್ಗೆ ನೀಡುತ್ತಿರುವ 1500 ರೂ. ರಿಯಾಯಿತಿ ಮೊತ್ತವನ್ನು ಕಡಿತಗೊಳಿಸಲು ಕೆಎಂಎಫ್ ಮುಂದಾಗಿದೆ. ರಿಯಾಯಿತಿ ಕಡಿತಗೊಂಡರೆ ಹಾಲು ಉತ್ಪಾದಕರು ಹೆಚ್ಚಿನ ದರ ನೀಡಿ ಪಶು ಆಹಾರ ಖರೀದಿಸಬೇಕಾಗುತ್ತದೆ ಎಂದು ರೇವಣ್ಣ ಆತಂಕ ವ್ಯಕ್ತಪಡಿಸಿದರು.
ಹಾಲಿನ ದರ 4 ರೂ. ಹೆಚ್ಚಳ : ಕೆಎಂಎಫ್ ಆಡಳಿತ ಮಂಡಳಿಯ ವೈಫಲ್ಯದಿಂದಾಗಿ ನಷ್ಟ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಪ್ರತಿ ಲೀಟರ್ ಹಾಲಿನ ದರವನ್ನು 4 ರೂ. ಹೆಚ್ಚಿಸಲು ಕೆಎಂಎಫ್ ಅಧ್ಯಕ್ಷರು ಮುಂದಾಗಿದ್ದಾರೆ. ಬಿಬಿಎಂಪಿ ಚುನಾವಣೆ ಬಳಿಕ ದರ ಹೆಚ್ಚಾಗಬಹುದು ಎಂದು ರೇವಣ್ಣ ಅವರು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications