Nandini Ghee Price Hike : ನಂದಿನಿ ತುಪ್ಪದ ಬೆಲೆ 2 ತಿಂಗಳಲ್ಲಿ 180 ರೂ. ಹೆಚ್ಚಳ
ಬೆಂಗಳೂರು, ನವೆಂಬರ್ 7: ಕಳೆದ ಕೆಲವು ತಿಂಗಳುಗಳಲ್ಲಿ ಹಾಲಿನ ದರವನ್ನು ಹೆಚ್ಚಿಸಲು ಸರ್ಕಾರದ ಅನುಮೋದನೆ ಪಡೆಯಲು ಸಾಧ್ಯವಾಗದೆ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಿಸುತ್ತಿದ್ದು, ಇದು ಎರಡೂವರೆ ತಿಂಗಳಲ್ಲಿ ಲೀಟರ್ಗೆ 180 ರೂಪಾಯಿ ಬೆಲೆ ಹೆಚ್ಚಳ ಮಾಡಿದೆ.
ಆಗಸ್ಟ್ 22 ರಂದು 450 ರೂಪಾಯಿಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್ಗೆ 630 ರೂ. ಆಗಿದೆ. ಜಿಎಸ್ಟಿ ದರಗಳ ಪರಿಷ್ಕರಣೆಯು ಕೆಎಂಎಫ್ಗೆ ಮೊಸರು ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದರೂ, ತುಪ್ಪ ಮತ್ತು ಹಾಲಿನ ಬೆಲೆಯನ್ನು ತುಲನಾತ್ಮಕವಾಗಿ ಮುಟ್ಟಲಿಲ್ಲ. ಆದರೆ ಹಾಲಿನ ಮಾರಾಟದಲ್ಲಿ ಆಗಿರುವ ನಷ್ಟವನ್ನು ಸರಿದೂಗಿಸಲು ಕೆಎಂಎಫ್ ಈಗ ನಿರಂತರವಾಗಿ ತುಪ್ಪದ ಬೆಲೆಯನ್ನು ಪರಿಷ್ಕರಣೆ ಮಾಡುತ್ತಿದೆ.
ಕೆಎಂಎಫ್ ರೀಟೆಲ್ ವ್ಯಾಪಾರಿಯೊಬ್ಬರ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ನಂದಿನಿ ತುಪ್ಪದ ಬೆಲೆ ಏರಿಕೆಯಾಗುತ್ತಿದೆ. ಹಬ್ಬದ ಸೀಸನ್ಗೆ ಮುಂಚಿತವಾಗಿ ಆಗಸ್ಟ್ 22 ರಂದು ಒಂದು ಲೀಟರ್ ತುಪ್ಪವನ್ನು 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಸೀಸನ್ ಪ್ರಾರಂಭವಾದಾಗ, ಕೆಎಂಎಫ್ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು. ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಅದು 470 ರೂ.ಗೆ ಏರಿಕೆಯಾಗಿದೆ. ಅಕ್ಟೋಬರ್ನಲ್ಲಿ ಒಂದು ಲೀಟರ್ ತುಪ್ಪವನ್ನು 518 ರೂ.ಗೆ ಮಾರಾಟ ಮಾಡಲಾಗಿತ್ತು. ಈಗ ಕಳೆದ ಒಂದು ವಾರದಿಂದ 620 ರೂ.ನಿಂದ 630 ರೂ.ಗೆ ಮಾರಾಟವಾಗುತ್ತಿದೆ.

ಕಳೆದ ಒಂದು ತಿಂಗಳ ಮಾರಾಟದ ಬೆಲೆಗಳ ವಿಶ್ಲೇಷಣೆಯು 200 ಎಂಎಲ್ ಸ್ಯಾಚೆ, ಬಾಟಲ್ನಲ್ಲಿ ಒಂದು ಲೀಟರ್ ಪ್ರಮಾಣಕ್ಕೆ ನೀಡುವ ದರವು 12 ರಿಂದ 54 ರೂ.ಗೆ ಏರಿದೆ ಎಂದು ಬಹಿರಂಗಪಡಿಸಿದೆ. ಒಂದು ತಿಂಗಳ ಹಿಂದೆ 113 ರೂ.ಗೆ ಮಾರಾಟವಾದ 200 ಎಂಎಲ್ ತುಪ್ಪದ ಸ್ಯಾಚೆ ಈಗ 135 ರೂ. ಬೆಲೆಯಿದೆ. ಪೆಟ್ ಬಾಟಲ್ ಬೆಲೆಯೂ 122 ರೂ.ನಿಂದ 145 ರೂ.ಗೆ ಏರಿಕೆಯಾಗಿದೆ. ಅದೇ ರೀತಿ 259 ರೂ.ಗೆ ಲಭ್ಯವಿದ್ದ ಅರ್ಧ ಲೀಟರ್ ಸ್ಯಾಚೆ ಈಗ ರೂ. 305ಕ್ಕೆ ಮಾರಾಟವಾಗುತ್ತಿದ್ದು, ಅದೇ ಪ್ರಮಾಣದ ಪೆಟ್ ಬಾಟಲ್ ಅನ್ನು ಹಿಂದಿನ ರೂ 268 ರಿಂದ 315 ರೂ.ಗೆ ಮಾರಾಟವಾಗುತ್ತಿದೆ ಎಂದು ಚಿಲ್ಲರೆ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ನಷ್ಟದ ಮೇಲಿನ ಏರಿಳಿತವನ್ನು ಸಮತೋಲನ ಮಾಡಲು ಉಪ ಉತ್ಪನ್ನಗಳ ಬೆಲೆಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ಮಾರ್ಗಗಳಿಲ್ಲ. ಹಾಲಿನ ದರವನ್ನು ಪರಿಷ್ಕರಿಸಲು ಸರ್ಕಾರ ಪದೇ ಪದೇ ನಿರಾಕರಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications