ಹೊಸವರ್ಷದ ಶುಭಾಶಯ, ನಂದಿನಿ ಹಾಲಿನ ದರ 4 ರು. ಏರಿಕೆ!
ಬೆಂಗಳೂರು, ಜನವರಿ 01 : ಹೊಸ ವರ್ಷದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸಮಸ್ತ ಜನತೆಗೆ ಭರ್ಜರಿ ಶಾಕ್ ನೀಡಿದ್ದಾರೆ. ಹಾಲಿನ ದರ ಏರಿಸಬೇಕೆಂದು ಪ್ರಸ್ತಾವನೆಗೆ ಶುಕ್ರವಾರ ಸಮ್ಮತಿ ಸೂಚಿಸಿ, ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈಕ್ಷಣದಿಂದ ಹಾಲಿನ ದರ 4 ರು. ಏರಿಕೆಯಾಗಲಿದೆ.
ಇದರಿಂದಾಗಿ ನೀಲಿ ಪ್ಯಾಕೆಟ್ ಹಾಲಿನ ದರ ಲೀಟರಿಗೆ 30 ರು.ನಿಂದ 34ಕ್ಕೆ, ಹಸಿರು ಬಣ್ಣದ ಪ್ಯಾಕೆಟ್ ಹಾಲಿನ ದರ 34 ರು.ನಿಂದ 38 ರು.ಗೆ ಮತ್ತು ಕೇಸರಿ ಬಣ್ಣದ ಪ್ಯಾಕೆಟ್ ಹಾಲಿನ ಬೆಲೆ 36 ರು.ನಿಂದ 40 ರು.ಗೆ ಏರಲಿದೆ. ಸಹಜವಾಗಿ, ಟೀ ಮತ್ತು ಕಾಫಿ ಬೆಲೆಗಳು ಕೂಡ ಏರಿಕೆಯಾಗಲಿವೆ.
ಹಿಂದಿನ ಸುದ್ದಿ : ಹೊಸ ವರ್ಷದ ಆರಂಭದಲ್ಲಿಯೇ ಜನರಿಗೆ ನಂದಿನಿ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ? ಕರ್ನಾಟಕ ಹಾಲು ಮಹಾ ಮಂಡಲ (ಕೆಎಂಎಫ್) ಹಾಲಿನ ದರವನ್ನು 5 ರೂ. ಏರಿಕೆ ಮಾಡಲು ಅವಕಾಶ ನೀಡುವಂತೆ ಕೋರಿ ಪಶುಸಂಗೋಪನಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. 'ಪ್ರತಿ ಲೀಟರ್ ಹಾಲಿನ ದರವನ್ನು 5 ರೂ. ಏರಿಕೆ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದೆ. ರೈತರಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವ ದೃಷ್ಟಿಯಿಂದ ಹಾಲಿನ ದರವನ್ನು ಹೆಚ್ಚಳ ಮಾಡುವುದು ಸೂಕ್ತ' ಎಂದು ಹೇಳಿದರು. [KMF ನಿಂದ ಗರ್ಭಿಣಿಯರಿಗೆ ಹಾಲು, ತುಪ್ಪದ ಭಾಗ್ಯ?]

'ಹಾಲಿನ ದರ ಏರಿಕೆ ಮಾಡುವ ಕುರಿತು ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ' ಎಂದು ಎ.ಮಂಜು ತಿಳಿಸಿದರು. [ಕೆಎಂಎಫ್ ನಂತೆ ಬ್ರಾಂಡೆಡ್ ಮಟನ್ ಸ್ಟಾಲ್ ಸ್ಥಾಪನೆ: ಸಿದ್ದರಾಮಯ್ಯ]
4 ರೂ. ಪ್ರಸ್ತಾವನೆ ಇತ್ತು : 2015ರ ಜೂನ್ನಲ್ಲಿ ಕೆಎಂಎಫ್ ನಂದಿನಿ ಹಾಲಿನ ದರವನ್ನು 4 ರೂ. ಹೆಚ್ಚಳ ಮಾಡಲು ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕೆಲವು ದಿನಗಳ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು, 'ಹಾಲಿನ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ' ಎಂದು ಸ್ಪಷ್ಟಪಡಿಸಿದ್ದರು. ಆದರೆ, ಈಗ 5 ರೂ. ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.
-
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications