ಹೊಸವರ್ಷದ ಶುಭಾಶಯ, ನಂದಿನಿ ಹಾಲಿನ ದರ 4 ರು. ಏರಿಕೆ!
ಬೆಂಗಳೂರು, ಜನವರಿ 01 : ಹೊಸ ವರ್ಷದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸಮಸ್ತ ಜನತೆಗೆ ಭರ್ಜರಿ ಶಾಕ್ ನೀಡಿದ್ದಾರೆ. ಹಾಲಿನ ದರ ಏರಿಸಬೇಕೆಂದು ಪ್ರಸ್ತಾವನೆಗೆ ಶುಕ್ರವಾರ ಸಮ್ಮತಿ ಸೂಚಿಸಿ, ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈಕ್ಷಣದಿಂದ ಹಾಲಿನ ದರ 4 ರು. ಏರಿಕೆಯಾಗಲಿದೆ.
ಇದರಿಂದಾಗಿ ನೀಲಿ ಪ್ಯಾಕೆಟ್ ಹಾಲಿನ ದರ ಲೀಟರಿಗೆ 30 ರು.ನಿಂದ 34ಕ್ಕೆ, ಹಸಿರು ಬಣ್ಣದ ಪ್ಯಾಕೆಟ್ ಹಾಲಿನ ದರ 34 ರು.ನಿಂದ 38 ರು.ಗೆ ಮತ್ತು ಕೇಸರಿ ಬಣ್ಣದ ಪ್ಯಾಕೆಟ್ ಹಾಲಿನ ಬೆಲೆ 36 ರು.ನಿಂದ 40 ರು.ಗೆ ಏರಲಿದೆ. ಸಹಜವಾಗಿ, ಟೀ ಮತ್ತು ಕಾಫಿ ಬೆಲೆಗಳು ಕೂಡ ಏರಿಕೆಯಾಗಲಿವೆ.
ಹಿಂದಿನ ಸುದ್ದಿ : ಹೊಸ ವರ್ಷದ ಆರಂಭದಲ್ಲಿಯೇ ಜನರಿಗೆ ನಂದಿನಿ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ? ಕರ್ನಾಟಕ ಹಾಲು ಮಹಾ ಮಂಡಲ (ಕೆಎಂಎಫ್) ಹಾಲಿನ ದರವನ್ನು 5 ರೂ. ಏರಿಕೆ ಮಾಡಲು ಅವಕಾಶ ನೀಡುವಂತೆ ಕೋರಿ ಪಶುಸಂಗೋಪನಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಪಶುಸಂಗೋಪನಾ ಸಚಿವ ಎ.ಮಂಜು ಅವರು ಈ ಕುರಿತು ಹೇಳಿಕೆ ನೀಡಿದ್ದಾರೆ. 'ಪ್ರತಿ ಲೀಟರ್ ಹಾಲಿನ ದರವನ್ನು 5 ರೂ. ಏರಿಕೆ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದೆ. ರೈತರಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವ ದೃಷ್ಟಿಯಿಂದ ಹಾಲಿನ ದರವನ್ನು ಹೆಚ್ಚಳ ಮಾಡುವುದು ಸೂಕ್ತ' ಎಂದು ಹೇಳಿದರು. [KMF ನಿಂದ ಗರ್ಭಿಣಿಯರಿಗೆ ಹಾಲು, ತುಪ್ಪದ ಭಾಗ್ಯ?]

'ಹಾಲಿನ ದರ ಏರಿಕೆ ಮಾಡುವ ಕುರಿತು ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ' ಎಂದು ಎ.ಮಂಜು ತಿಳಿಸಿದರು. [ಕೆಎಂಎಫ್ ನಂತೆ ಬ್ರಾಂಡೆಡ್ ಮಟನ್ ಸ್ಟಾಲ್ ಸ್ಥಾಪನೆ: ಸಿದ್ದರಾಮಯ್ಯ]
4 ರೂ. ಪ್ರಸ್ತಾವನೆ ಇತ್ತು : 2015ರ ಜೂನ್ನಲ್ಲಿ ಕೆಎಂಎಫ್ ನಂದಿನಿ ಹಾಲಿನ ದರವನ್ನು 4 ರೂ. ಹೆಚ್ಚಳ ಮಾಡಲು ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕೆಲವು ದಿನಗಳ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು, 'ಹಾಲಿನ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ' ಎಂದು ಸ್ಪಷ್ಟಪಡಿಸಿದ್ದರು. ಆದರೆ, ಈಗ 5 ರೂ. ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.
-
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications