ಅಂಚೆ ಇಲಾಖೆ ಅಪಘಾತ ವಿಮೆ: ಈ ಯೋಜನೆ ಬಗ್ಗೆ ತಿಳಿಯಿರಿ
ಬೆಂಗಳೂರು, ಜೂನ್ 19: ಭಾರತೀಯ ಅಂಚೆ ಇಲಾಖೆ ಕರ್ನಾಟಕ ವೃತ್ತ ಕೆಲವು ದಿನಗಳ ಹಿಂದೆ ಮೇಳವೊಂದನ್ನು ನಡೆಸಿತು. ಈ ಮೇಳದಲ್ಲಿ ಇಲಾಖೆಯ ಅಪಘಾತ ವಿಮೆ ಯೋಜನೆಗೆ ಅತ್ಯಧಿಕ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಈಗ ಈ ಯೋಜನೆ ಬಗ್ಗೆ ಹೆಚ್ಚು ಪ್ರಚಾರವನ್ನು ನಡೆಸಲು ಇಲಾಖೆ ತೀರ್ಮಾನಿಸಿದೆ.
ಅಂಚೆ ಇಲಾಖೆಯ 'ಗುಂಪು ಅಪಘಾತ ರಕ್ಷಣಾ ವಿಮೆ ಯೋಜನೆ' ಯೋಜನೆಗೆ ಮೇಳದಲ್ಲಿ ಸುಮಾರು 5 ಸಾವಿರ ಜನರು ನೋಂದಣಿ ಮಾಡಿಸಿದ್ದಾರೆ. ಅಲ್ಲದೇ ಪ್ರತಿನಿತ್ಯ ಅಂಚೆ ಕಛೇರಿಗಳಲ್ಲಿ ಈ ಯೋಜನೆಗೆ ನೋಂದಣಿ ಅಧಿಕವಾಗುತ್ತಲೇ ಇದೆ.

ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಖಾತೆ ಹೊಂದಿರುವ ಯಾರು ಬೇಕಾದರೂ ಸಹ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು. ಯೋಜನೆ ಸೇರಲು ಖಾತೆ ಹೊಂದಿರುವುದು ಕಡ್ಡಾಯ. ರಾಜ್ಯದ ಎಲ್ಲಾ ಅಂಚೆ ಕಚೇರಿಗಳಲ್ಲಿ ಈ ಯೋಜನೆಗೆ ನೋಂದಣಿ ಲಭ್ಯವಿದೆ. ಮನೆ ಬಾಗಿಲಿಗೆ ಬರುವ ಪೋಸ್ಟ್ ಮಾಸ್ಟರ್ ಮೂಲಕವೂ ನೋಂದಣಿ ಮಾಡಿಸಬಹುದು.
ಯೋಜನೆ ವಿವರಗಳು: ಅಂಚೆ ಇಲಾಖೆಯ ಈ ಅಪಘಾತ ವಿಮೆ 10 ಮತ್ತು 15 ಲಕ್ಷ ರೂ. ತನಕ ಲಭ್ಯವಿದೆ. 10 ಲಕ್ಷ ರೂ. ಯೋಜನೆಗೆ ವಾರ್ಷಿಕ ಪ್ರೀಮಿಯಂ ಮೊತ್ತ ಕನಿಷ್ಠ 520 ರೂ. ಮತ್ತು 15 ಲಕ್ಷಕ್ಕೆ ಕನಿಷ್ಠ 749 ರೂ. ಇದೆ.
ಈ ಯೋಜನೆಗೆ ಟಾಟಾ ಎಐಜಿ, ಆದಿತ್ಯ ಬಿರ್ಲಾ ಜೀವ ವಿಮೆ ಮತ್ತು ಬಜಾಜ್ ಫೈನಾನ್ಸ್ ಸಹ ಪಾಲುದಾರರು. ಕರ್ನಾಟಕದಲ್ಲಿ ಈ ಆರ್ಥಿಕ ವರ್ಷದಲ್ಲಿ ಇದುವರೆಗೂ 20,000 ಜನರು ಯೋಜನೆಗೆ ನೋಂದಣಿ ಮಾಡಿಸಿದ್ದಾರೆ.
ಯೋಜನೆ ವ್ಯಾಪ್ತಿಯಲ್ಲಿ ಕರ್ನಾಟಕದಲ್ಲಿ 4.5 ಲಕ್ಷ ಜನರಿದ್ದಾರೆ. ಇದುವರೆಗೂ 66 ಮರಣ ಪ್ರಕರಣಗಳಿಗೆ, 256 ವೈದ್ಯಕೀಯ ವೆಚ್ಚವನ್ನು ಯೋಜನೆಯಡಿ ಮರುಪಾವತಿ ಮಾಡಲಾಗಿದೆ. ದಿನದಿಂದ ದಿನಕ್ಕೆ ಈ ಯೋಜನೆಗೆ ನೋಂದಣಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಒಮ್ಮೆ ಈ ಯೋಜನೆಗೆ ನೋಂದಣಿ ಮಾಡಿಸಿದರೆ ಅವಧಿ ಮುಗಿದ ಬಳಿಕ ಸ್ವಯಂ ಚಾಲಿತವಾಗಿ ಪುನರ್ ನೋಂದಣಿಯಾಗುತ್ತದೆ. ಈ ಯೋಜನೆಗೆ ಜೂನ್ 12ರಂದು 6,531, ಜೂನ್ 14ರಂದು 12,186 ಜನರು ಸೇರ್ಪಡೆಗೊಂಡಿದ್ದಾರೆ.
ಕರ್ನಾಟಕದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಮಾತನಾಡಿ, "ಪ್ರತಿದಿನ ಸರಾಸರಿ 5 ಸಾವಿರ ಜನರು ವೈಯಕ್ತಿಕ ಅಪಘಾತ ಯೋಜನೆಯಡಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಈ ಯೋಜನೆ ರಾಜ್ಯದ ಎಲ್ಲಾ ಅಂಚೆ ಕಛೇರಿಗಳಲ್ಲೂ ಲಭ್ಯವಿದೆ. ಪೋಸ್ಟ್ ಮ್ಯಾನ್ ಮೂಲಕ ಮನೆ ಬಾಗಿಲಿಗೂ ಸಹ ಯೋಜನೆ ತಲುಪಿಸಲಾಗುತ್ತಿದೆ" ಎಂದು ಹೇಳಿದ್ದಾರೆ.
ಈ ಯೋಜನೆಯಡಿ ನೋಂದಣಿ ಮಾಡಿಕೊಂಡರೆ ಯಾವುದೇ ಅನಿರೀಕ್ಷಿತ ಘಟನೆ/ ಅಪಘಾತದಿಂದ ಇದು ಪಾಲಿಸಿದಾರರನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಇಂತಹ ಸಂದರ್ಭದಲ್ಲಿ ಪಾಲಿಸಿದಾರರ ಕುಟುಂಬದವರ ಖರ್ಚು ಕಡಿಮೆ ಮಾಡಲು ಸಹಕಾರಿಯಾಗಿದೆ. ನಗದು ರಹಿತ ಚಿಕಿತ್ಸೆ, ಚಿಕಿತ್ಸೆ ಪಡೆದ ಬಳಿಕ ಕ್ಲೇಮ್ ಮಾಡುವ ಎರಡೂ ಆಯ್ಕೆಗಳು ಸಹ ಇದರಡಿ ಇದವೆ. ಭಾರತೀಯ ಅಂಚೆ ಇಲಾಖೆಯ ವಿವಿಧ ಯೋಜನೆಗಳ ಪೈಕಿ ಇದು ಬಹಳ ಜನಪ್ರಿಯ ಯೋಜನೆಯಾಗಿದೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications